Homeಫ್ಯಾಕ್ಟ್‌ಚೆಕ್FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ವಿವಿದೆಡೆ ಕೋಮು ದ್ವೇಷದ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ, ಸೆಪ್ಟೆಂಬರ್ 27, 2024ರಂದು ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿನ ದೇವಾಲಯವೊಂದರ ಶಿವಲಿಂಗ ಭಗ್ನಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ವಿಡಿಯೋ ಕ್ಲಿಪ್‌ವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ದೇವಸ್ಥಾಯಕ್ಕೆ ಹಾನಿ ಮಾಡಿದ ದೃಶ್ಯವಿತ್ತು. ವಿಡಿಯೋ ಕುರಿತು ವಿವರಿಸಿದ್ದ ಸುದ್ದಿ ಸಂಸ್ಥೆಯ ವರದಿಗಾರ “ಯಾರೋ ದುಷ್ಕರ್ಮಿಗಳ ಕೃತ್ಯ” ಎಂದಿದ್ದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೊಲೀಸರು “ಘಟನೆಯ ಕುರಿತು ತನಿಖೆ ಕೈಗೊಂಡಿದ್ದೇವೆ, ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ” ಎಂದಿದ್ದರು.

ರಾಜ್ಯದಲ್ಲಿ ಜನಸಂಖ್ಯೆಯ ಬದಲಾವಣೆಯೇ ದೇವಸ್ಥಾನ ಅಪವಿತ್ರಗೊಳ್ಳಲು ಕಾರಣ ಎಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 27, 2024ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಲಪಂಥೀಯ ಬಳಕೆದಾರ ರೌಶನ್ ಸಿನ್ಹಾ (@MrSinha) ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ದೇವಭೂಮಿ ಹಿಮಾಚಲದಲ್ಲಿ ಹಿಂದೆ ಇದು ಸಾಮಾನ್ಯ ವಿಷಯವಾಗಿರಲಿಲ್ಲ. ಆದರೆ, ಅದು ಹೊಸ ಸಾಮಾನ್ಯ ವಿಷಯವಾಗಿದೆ. ಜನಸಂಖ್ಯಾ ಬದಲಾವಣೆಯು ನಿಜ ಮತ್ತು ಭಯಾನಕವಾಗಿದೆ” ಎಂದು ಬರೆದುಕೊಂಡಿದ್ದರು.

ದೀಪಕ್ ಶರ್ಮಾ (SonofBharat7) ಎಂಬ ಮತ್ತೋರ್ವ ಬಲಂಥೀಯ ಎಕ್ಸ್ ಬಳಕೆದಾರ ಸೆಪ್ಟೆಂಬರ್ 27ರಂದು ವಿಡಿಯೋ ಹಂಚಿಕೊಂಡು ” ಹಿಮಾಚಲ ಪ್ರದೇಶದಲ್ಲಿ 20 ವರ್ಷ ಹಳೆಯ ಶಿವಲಿಂಗ ಧ್ವಂಸಗೊಂಡಿದೆ. ದೇವಭೂಮಿಯು ಇಂತಹ ರಾಕ್ಷಸರಿಂದ ಮುಕ್ತವಾಗಿತ್ತು. ಆದರೆ, ಯಾವಾಗಿನಿಂದ ಮೃಗಗಳು ಇಲ್ಲಿ ತಮ್ಮ ದುಷ್ಟ ಕಣ್ಣುಗಳನ್ನು ನೆಟ್ಟಿತೋ, ಅಂದಿನಿಂದ ಇಂತಹ ಘಟನೆಗಳು ಹೆಚ್ಚುತ್ತಿವೆ. ಹಿಮಾಚಲದ ಜನರೇ.. ಪ್ರತಿ ರಾಕ್ಷಸರಿಗೂ ತಕ್ಕ ಪಾಠ ಕಲಿಸುವವರೆಗೆ ನಿಲ್ಲಬೇಡಿ, ಬೇಕಾದರೆ ಇಡೀ ದೇಶವೇ ನಿಮ್ಮೊಂದಿಗಿದೆ” ಎಂದು ಬರೆದುಕೊಂಡಿದ್ದರು.

ಬಿಜೆಪಿ ನಾಯಕ ಮತ್ತು ಅಸ್ಸಾಂ ನಗರ ವ್ಯವಹಾರಗಳ ಸಚಿವ ಅಶೋಕ್ ಸಿಂಘಾಲ್ (@TheAshokSinghal)ಅವರು ಸೆಪ್ಟೆಂಬರ್ 28ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇಂದು ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ಮಾತೆ ಕಾಮಕ್ಯಳ ಭೂಮಿಯಲ್ಲಿ ಇದು ನಾಳೆಯೂ ನಡೆಯಬಹುದು. ಅದಕ್ಕಾಗಿಯೇ ನಾವು ನಮ್ಮ ಜಾತಿ, ಮತ, ಮಗಳನ್ನು ರಕ್ಷಿಸಿಕೊಳ್ಳಬೇಕು. ನಮ್ಮ ಗುರುತು, ಭೂಮಿ ಮತ್ತು ಪರಂಪರೆಯನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ದೃಢವಾಗಿ ನಿಲ್ಲಬೇಕು. ಜನಸಂಖ್ಯಾಶಾಸ್ತ್ರವು ವಿಧಿಯಾಗಿದೆ” ಎಂದು ಬರೆದುಕೊಂಡಿದ್ದರು.

ಎಲ್ಲಾ ಪೋಸ್ಟ್‌ಗಳಲ್ಲಿ ಜನಸಂಖ್ಯೆ ಬದಲಾವಣೆ ಎಂದು ಉಲ್ಲೇಖಿಸುವ ಮೂಲಕ, ಇಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ. ಅದುವೇ ಈ ಘಟನೆಗೆ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ.

ದೇವಾಲಯದ ಅಪವಿತ್ರತೆಯ ಸುದ್ದಿ ವೈರಲ್ ಆದ ನಂತರ, ಸೆಪ್ಟೆಂಬರ್ 27, 2024 ರಂದು ಹಲವಾರು ಹಿಂದುತ್ವವಾದಿ ಸಂಘಟನೆಗಳು ನಗ್ರೋಟಾದ ಶಾಸಕ ರಘುಬೀರ್ ಸಿಂಗ್ ಬಾಲಿ ನೇತೃತ್ವದಲ್ಲಿ ಗಾಂಧಿ ಮೈದಾನದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿತ್ತು. ನ್ಯೂಸ್ 24 ಹಿಮಾಚಲದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅದನ್ನು ನೇರ ಪ್ರಸಾರ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಶಿವಲಿಂಗ ಧ್ವಂಸಗೊಳಿಸಿ, ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಕೋಮು ಆಯಾಮ ಪಡೆಯುತ್ತಿದ್ದಂತೆ ಕಂಗ್ರಾ ಡಿಎಸ್‌ಪಿ ಅಂಕಿತ್ ಶರ್ಮಾ ಘಟನೆ ಕುರಿತು ಹೇಳಿಕೆ ಕೊಟ್ಟಿದ್ದರು.

ಸಿಸಿಟಿವಿ ಕ್ಯಾಮಾರಗಳ ಪರಿಶೀಲನೆ ಬಳಿಕ, ಶಿವಲಿಂಗವನ್ನು ಧ್ವಂಸಗೊಳಿಸಿ, ದೇವಸ್ಥಾನವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 35 ವರ್ಷದ ನಿಶಾ ದೇವಿ ಎಂಬಾಕೆಯ ಮೇಲೆ ಬಿಎನ್‌ಎಸ್‌ ಸೆಕ್ಷನ್ 298ರ ಅಡಿ ನಗ್ರೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಮುಂಜಾನೆ 3:30 ರಿಂದ 4:00 ಗಂಟೆಯ ನಡುವೆ ಈ ಕೃತ್ಯ ನಡೆದಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ನಿಶಾ ದೇವಿಯನ್ನು ಯೋಲ್‌ನಲ್ಲಿ ಬಂಧಿಸಿದ್ದಾರೆ. ಮಹಿಳೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. 2020ರಲ್ಲಿ, ಅವರು ಧರ್ಮಶಾಲಾದ ಫತೇಪುರದ ದೇವಸ್ಥಾನದಲ್ಲಿ ಶಿವಲಿಂಗವನ್ನು ಹಾನಿಗೊಳಿಸಿದ್ದರು. ದೇವಸ್ಥಾನಗಳಲ್ಲಿ ವಿಗ್ರಹಗಳಿಗೆ ಹಾನಿ ಮಾಡುತ್ತಲೇ ಇರುತ್ತಾರೆ. ಮಹಿಳೆ ಮಾನಸಿಕವಾಗಿ ವಿಭಿನ್ನ ಸಾಮರ್ಥ್ಯ ಹೊಂದಿರುವವಳು. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಡಿಎಸ್‌ಪಿ ವಿವರಿಸಿದ್ದರು.

ಅನಂತ್ ಜ್ಞಾನ್ ಎಂಬ ಸ್ಥಳೀಯ ಹಿಂದಿ ಮಾಧ್ಯಮವು ಸೆಪ್ಟೆಂಬರ್ 27, 2024 ರಂದು ಸಿಸಿಟಿವಿ ದೃಶ್ಯವೊಂದನ್ನು ಅಪ್ಲೋಡ್ ಮಾಡಿತ್ತು. ಅದರಲ್ಲಿ ಶಾಲು ಹೊದ್ದು ವ್ಯಕ್ತಿಯೊಬ್ಬರು ಮಧ್ಯರಾತ್ರಿ 03:39 ರಿಂದ 03:44 ರವರೆಗೆ ದೇವಸ್ಥಾನದ ಒಳಗೆ ಮತ್ತು ಹೊರಗೆ ಹೋಗುತ್ತಿರುವುದನ್ನು ನೋಡಬಹುದು “ನಗ್ರೋಟಾದಲ್ಲಿ ಶಿವಲಿಂಗಕ್ಕೆ ಹಾನಿ ಮಾಡಿದ ವ್ಯಕ್ತಿ ಮಹಿಳೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಘಟನೆಯ ಕುರಿತ ಪಂಜಾಬ್ ಕೇಸರಿ ಹಿಮಾಚಲ ಸುದ್ದಿ ಸಂಸ್ಥೆಯ ವರದಿಯನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ “ಕಳೆದ ಗುರುವಾರ ರಾತ್ರಿ ಗಾಂಧಿ ಮೈದಾನದ ಬಳಿ ಶಿವಲಿಂಗಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಒಂದು ದಿನದ ನಂತರ ಯೋಲ್ ಬಳಿ ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ನಿಶಾದೇವಿ ಎಂದು ಗುರುತಿಸಲಾಗಿದ್ದು, ಅವರು ಯೋಲ್ ಕಡೆಗೆ ಹೋಗುತ್ತಿದ್ದರು. ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದ ಮಹಿಳೆ ಅದೇ ಬಟ್ಟೆಯನ್ನು ಧರಿಸಿ ಕೈಯಲ್ಲಿ ಅದೇ ಚೀಲವನ್ನು ಹಿಡಿದಿರುವುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಅನುಮಾನ ದೃಢಪಟ್ಟಿದೆ” ಎಂದು ತಿಳಿಸಲಾಗಿತ್ತು.

ಒಟ್ಟಿನಲ್ಲಿ, ಶಿವಲಿಂಗ ಧ್ವಂಸ ಮತ್ತು ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿ ನಿಶಾ ದೇವಿ ಎಂಬಾಕೆಯಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮ ಇಲ್ಲ.

ಇದನ್ನೂ ಓದಿ : FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...