Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

- Advertisement -
- Advertisement -

ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಪಾಪ್ ಗಾಯಕಿ ರಿಹಾನ್ನ ಟ್ವೀಟ್ ಮಾಡಿದ ನಂತರ, ಆಕೆ ಪಾಕಿಸ್ತಾನದ ಧ್ವಜವನ್ನು ಹಿಡಿದಿರುವುದನ್ನು ತೋರಿಸುವ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಗೂಗಲ್ ಇಂಡಿಯಾ ಸರ್ಚ್ ಪ್ರವೃತ್ತಿಗಳನ್ನು ಗಮನಿಸಿದಾಗ, ‘ರಿಹಾನ್ನಾ ಮುಸ್ಲಿಂ’ ಮತ್ತು ‘ರಿಹಾನ್ನ ಪಾಕಿಸ್ತಾನಿ’ ಎಂಬ ಶೋಧ ಪದಗಳಲ್ಲಿ ಭಾರಿ ಏರಿಕೆ ಕಂಡಿದೆ.

ಪಾಕಿಸ್ತಾನದ ಧ್ವಜವನ್ನು ಹಿಡಿದಿರುವ ಪಾಪ್ ಐಕಾನ್ ಚಿತ್ರವನ್ನು ಹರಡಿದವರಲ್ಲಿ ಬಿಜೆಪಿ ಉತ್ತರ ಪ್ರದೇಶದ ವಕ್ತಾರ ಶಲಾಭ್ ಮಣಿ ತ್ರಿಪಾಠಿ ಸೇರಿದ್ದಾರೆ. ತ್ರಿಪಾಠಿ ಬಿಜೆಪಿ ಯುಪಿ ಯುವ ಮೋರ್ಚಾ ಕಾರ್ಯಕರ್ತ ಅಭಿಷೇಕ್ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ್ದಾರೆ.
ಲ್ಯಾಪ್‌ಡಾಗ್‌ಗಳ ಹೊಸ ರಾಣಿ ರಿಹಾನ್ನಾ, ಫೋಟೊ ನೋಡಿ, ನಿಮಗೇ ಗೊತ್ತಾಗುತ್ತೆ ಎಂದು ಒಕ್ಕಣಿಕೆ ನೀಡಲಾಗಿದೆ.

ವಿಭಜಕ ಸುಳ್ ಸುದ್ದಿ ಹರಡುವ, ಬಲಪಂಥೀಯ ನಿಲುವುಗಳ ‘ಶಂಖನಾದ’ ಎಂಬ ಫೇಸ್‌ಬುಕ್ ಪೇಜ್ ಕೂಡಾ ಈ ನಕಲಿ ಫೋಟೊ ಹಾಕಿ ರಿಹಾನ್ನಾ ಪಾಕ್ ಏಜೆಂಟ್ ಎಂಬಂತೆ ಬರೆದಿದೆ.

ಫ್ಯಾಕ್ಟ್‌ಚೆಕ್: ತಿರುಚಿದ ಚಿತ್ರ!

ಸರಳ ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಿಂದ ತಿಳಿಯುವುದು ಏನೆಂದರೆ, ಈ ಚಿತ್ರವನ್ನು ತಿರುಚಲಾಗಿದೆ ಅಂದರೆ ಎಡಿಟ್ ಮಾಡಲಾಗಿದೆ. ವಾಸ್ತವದಲ್ಲಿ, ರಿಹಾನ್ನಾ ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಮಂಡಳಿಯ ಧ್ವಜವನ್ನು ಹಿಡಿದಿದ್ದರು.

ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಐಸಿಸಿ 2019 ರ ವಿಶ್ವಕಪ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ ಕ್ರಿಕೆಟ್ ಪಂದ್ಯದ ಸಮಯದಲ್ಲಿ ರಿಹಾನ್ನಾ ವೆಸ್ಟ್ ಇಂಡೀಸ್ ತಂಡದ ಈ ಧ್ವಜವನ್ನು ಹಿಡಿದು, ಆ ತಂಡವನ್ನು ಬೆಂಬಲಿಸಿದ್ದರು. ಅಂದಂತೆ, ಆಗ ಪಾಕಿಸ್ತಾನವು ಆಟ ಆಡುವ ತಂಡಗಳಲ್ಲಿ ಒಂದಾಗಿರಲಿಲ್ಲ.

ಅದೇ ವಿಂಡೀಸ್ ಧ್ವಜವನ್ನು ಹಿಡಿದ ಗಾಯಕಿಯ ಇನ್ನೂ ಹಲವಾರು ಚಿತ್ರಗಳಿವೆ. ಪಂದ್ಯದ ದಿನದಂದು ರಿಹಾನ್ನಾ ಅವರು ಒಂದು ಫೋಟೊ ಅಪ್‌ಲೋಡ್ ಮಾಡಿದ್ದರು, ಅಲ್ಲಿ ಅವರು ವೆಸ್ಟ್ ಇಂಡೀಸ್ ತಂಡದ ಆಟಗಾರರು ಧರಿಸುವ ಕ್ಯಾಪ್ ಧರಿಸಿದ್ದಾರೆ.

ಗಾಯಕಿ ರಿಹಾನ್ನಾ ‘ಕ್ರಿಕೆಟ್ ವೆಸ್ಟ್ ಇಂಡೀಸ್’ ಧ್ವಜವನ್ನು ಹಿಡಿದಿರುವ ಚಿತ್ರವನ್ನು ಪಾಕಿಸ್ತಾನದ ಧ್ವಜವನ್ನು ಹಿಡಿದಿದ್ದಾರೆ ಎಂದು ತಪ್ಪಾಗಿ ಚಿತ್ರಿಸಲು ಎಡಿಟ್ ಮಾಡಲಾಗಿದೆ. ಭಾರತದಲ್ಲಿ ರೈತರ ಆಂದೋಲನವನ್ನು ಬೆಂಬಲಿಸುವ ರಿಹಾನ್ನಾ ಅವರ ಟ್ವೀಟ್‌ನಿಂದ ಗಲಿಬಿಲಿಗೊಂಡ ಬಿಜೆಪಿಯ ಸದಸ್ಯರು ಗಾಯಕಿಗೆ ಪಾಕಿಸ್ತಾನಿ ಸಂಪರ್ಕವಿದೆ ಎಂದು ತಪ್ಪಾಗಿ ಸೂಚಿಸಲು ಪ್ರಯತ್ನಿಸಿದ್ದಾರೆ.

(ಕೃಪೆ: ಆಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರುಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...