Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

- Advertisement -
- Advertisement -

ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಪಾಪ್ ಗಾಯಕಿ ರಿಹಾನ್ನ ಟ್ವೀಟ್ ಮಾಡಿದ ನಂತರ, ಆಕೆ ಪಾಕಿಸ್ತಾನದ ಧ್ವಜವನ್ನು ಹಿಡಿದಿರುವುದನ್ನು ತೋರಿಸುವ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಗೂಗಲ್ ಇಂಡಿಯಾ ಸರ್ಚ್ ಪ್ರವೃತ್ತಿಗಳನ್ನು ಗಮನಿಸಿದಾಗ, ‘ರಿಹಾನ್ನಾ ಮುಸ್ಲಿಂ’ ಮತ್ತು ‘ರಿಹಾನ್ನ ಪಾಕಿಸ್ತಾನಿ’ ಎಂಬ ಶೋಧ ಪದಗಳಲ್ಲಿ ಭಾರಿ ಏರಿಕೆ ಕಂಡಿದೆ.

ಪಾಕಿಸ್ತಾನದ ಧ್ವಜವನ್ನು ಹಿಡಿದಿರುವ ಪಾಪ್ ಐಕಾನ್ ಚಿತ್ರವನ್ನು ಹರಡಿದವರಲ್ಲಿ ಬಿಜೆಪಿ ಉತ್ತರ ಪ್ರದೇಶದ ವಕ್ತಾರ ಶಲಾಭ್ ಮಣಿ ತ್ರಿಪಾಠಿ ಸೇರಿದ್ದಾರೆ. ತ್ರಿಪಾಠಿ ಬಿಜೆಪಿ ಯುಪಿ ಯುವ ಮೋರ್ಚಾ ಕಾರ್ಯಕರ್ತ ಅಭಿಷೇಕ್ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ್ದಾರೆ.
ಲ್ಯಾಪ್‌ಡಾಗ್‌ಗಳ ಹೊಸ ರಾಣಿ ರಿಹಾನ್ನಾ, ಫೋಟೊ ನೋಡಿ, ನಿಮಗೇ ಗೊತ್ತಾಗುತ್ತೆ ಎಂದು ಒಕ್ಕಣಿಕೆ ನೀಡಲಾಗಿದೆ.

ವಿಭಜಕ ಸುಳ್ ಸುದ್ದಿ ಹರಡುವ, ಬಲಪಂಥೀಯ ನಿಲುವುಗಳ ‘ಶಂಖನಾದ’ ಎಂಬ ಫೇಸ್‌ಬುಕ್ ಪೇಜ್ ಕೂಡಾ ಈ ನಕಲಿ ಫೋಟೊ ಹಾಕಿ ರಿಹಾನ್ನಾ ಪಾಕ್ ಏಜೆಂಟ್ ಎಂಬಂತೆ ಬರೆದಿದೆ.

ಫ್ಯಾಕ್ಟ್‌ಚೆಕ್: ತಿರುಚಿದ ಚಿತ್ರ!

ಸರಳ ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಿಂದ ತಿಳಿಯುವುದು ಏನೆಂದರೆ, ಈ ಚಿತ್ರವನ್ನು ತಿರುಚಲಾಗಿದೆ ಅಂದರೆ ಎಡಿಟ್ ಮಾಡಲಾಗಿದೆ. ವಾಸ್ತವದಲ್ಲಿ, ರಿಹಾನ್ನಾ ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಮಂಡಳಿಯ ಧ್ವಜವನ್ನು ಹಿಡಿದಿದ್ದರು.

ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಐಸಿಸಿ 2019 ರ ವಿಶ್ವಕಪ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ ಕ್ರಿಕೆಟ್ ಪಂದ್ಯದ ಸಮಯದಲ್ಲಿ ರಿಹಾನ್ನಾ ವೆಸ್ಟ್ ಇಂಡೀಸ್ ತಂಡದ ಈ ಧ್ವಜವನ್ನು ಹಿಡಿದು, ಆ ತಂಡವನ್ನು ಬೆಂಬಲಿಸಿದ್ದರು. ಅಂದಂತೆ, ಆಗ ಪಾಕಿಸ್ತಾನವು ಆಟ ಆಡುವ ತಂಡಗಳಲ್ಲಿ ಒಂದಾಗಿರಲಿಲ್ಲ.

ಅದೇ ವಿಂಡೀಸ್ ಧ್ವಜವನ್ನು ಹಿಡಿದ ಗಾಯಕಿಯ ಇನ್ನೂ ಹಲವಾರು ಚಿತ್ರಗಳಿವೆ. ಪಂದ್ಯದ ದಿನದಂದು ರಿಹಾನ್ನಾ ಅವರು ಒಂದು ಫೋಟೊ ಅಪ್‌ಲೋಡ್ ಮಾಡಿದ್ದರು, ಅಲ್ಲಿ ಅವರು ವೆಸ್ಟ್ ಇಂಡೀಸ್ ತಂಡದ ಆಟಗಾರರು ಧರಿಸುವ ಕ್ಯಾಪ್ ಧರಿಸಿದ್ದಾರೆ.

ಗಾಯಕಿ ರಿಹಾನ್ನಾ ‘ಕ್ರಿಕೆಟ್ ವೆಸ್ಟ್ ಇಂಡೀಸ್’ ಧ್ವಜವನ್ನು ಹಿಡಿದಿರುವ ಚಿತ್ರವನ್ನು ಪಾಕಿಸ್ತಾನದ ಧ್ವಜವನ್ನು ಹಿಡಿದಿದ್ದಾರೆ ಎಂದು ತಪ್ಪಾಗಿ ಚಿತ್ರಿಸಲು ಎಡಿಟ್ ಮಾಡಲಾಗಿದೆ. ಭಾರತದಲ್ಲಿ ರೈತರ ಆಂದೋಲನವನ್ನು ಬೆಂಬಲಿಸುವ ರಿಹಾನ್ನಾ ಅವರ ಟ್ವೀಟ್‌ನಿಂದ ಗಲಿಬಿಲಿಗೊಂಡ ಬಿಜೆಪಿಯ ಸದಸ್ಯರು ಗಾಯಕಿಗೆ ಪಾಕಿಸ್ತಾನಿ ಸಂಪರ್ಕವಿದೆ ಎಂದು ತಪ್ಪಾಗಿ ಸೂಚಿಸಲು ಪ್ರಯತ್ನಿಸಿದ್ದಾರೆ.

(ಕೃಪೆ: ಆಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರುಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...