Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

- Advertisement -
- Advertisement -

ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಪಾಪ್ ಗಾಯಕಿ ರಿಹಾನ್ನ ಟ್ವೀಟ್ ಮಾಡಿದ ನಂತರ, ಆಕೆ ಪಾಕಿಸ್ತಾನದ ಧ್ವಜವನ್ನು ಹಿಡಿದಿರುವುದನ್ನು ತೋರಿಸುವ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಗೂಗಲ್ ಇಂಡಿಯಾ ಸರ್ಚ್ ಪ್ರವೃತ್ತಿಗಳನ್ನು ಗಮನಿಸಿದಾಗ, ‘ರಿಹಾನ್ನಾ ಮುಸ್ಲಿಂ’ ಮತ್ತು ‘ರಿಹಾನ್ನ ಪಾಕಿಸ್ತಾನಿ’ ಎಂಬ ಶೋಧ ಪದಗಳಲ್ಲಿ ಭಾರಿ ಏರಿಕೆ ಕಂಡಿದೆ.

ಪಾಕಿಸ್ತಾನದ ಧ್ವಜವನ್ನು ಹಿಡಿದಿರುವ ಪಾಪ್ ಐಕಾನ್ ಚಿತ್ರವನ್ನು ಹರಡಿದವರಲ್ಲಿ ಬಿಜೆಪಿ ಉತ್ತರ ಪ್ರದೇಶದ ವಕ್ತಾರ ಶಲಾಭ್ ಮಣಿ ತ್ರಿಪಾಠಿ ಸೇರಿದ್ದಾರೆ. ತ್ರಿಪಾಠಿ ಬಿಜೆಪಿ ಯುಪಿ ಯುವ ಮೋರ್ಚಾ ಕಾರ್ಯಕರ್ತ ಅಭಿಷೇಕ್ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ್ದಾರೆ.
ಲ್ಯಾಪ್‌ಡಾಗ್‌ಗಳ ಹೊಸ ರಾಣಿ ರಿಹಾನ್ನಾ, ಫೋಟೊ ನೋಡಿ, ನಿಮಗೇ ಗೊತ್ತಾಗುತ್ತೆ ಎಂದು ಒಕ್ಕಣಿಕೆ ನೀಡಲಾಗಿದೆ.

ವಿಭಜಕ ಸುಳ್ ಸುದ್ದಿ ಹರಡುವ, ಬಲಪಂಥೀಯ ನಿಲುವುಗಳ ‘ಶಂಖನಾದ’ ಎಂಬ ಫೇಸ್‌ಬುಕ್ ಪೇಜ್ ಕೂಡಾ ಈ ನಕಲಿ ಫೋಟೊ ಹಾಕಿ ರಿಹಾನ್ನಾ ಪಾಕ್ ಏಜೆಂಟ್ ಎಂಬಂತೆ ಬರೆದಿದೆ.

ಫ್ಯಾಕ್ಟ್‌ಚೆಕ್: ತಿರುಚಿದ ಚಿತ್ರ!

ಸರಳ ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಿಂದ ತಿಳಿಯುವುದು ಏನೆಂದರೆ, ಈ ಚಿತ್ರವನ್ನು ತಿರುಚಲಾಗಿದೆ ಅಂದರೆ ಎಡಿಟ್ ಮಾಡಲಾಗಿದೆ. ವಾಸ್ತವದಲ್ಲಿ, ರಿಹಾನ್ನಾ ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಮಂಡಳಿಯ ಧ್ವಜವನ್ನು ಹಿಡಿದಿದ್ದರು.

ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಐಸಿಸಿ 2019 ರ ವಿಶ್ವಕಪ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ ಕ್ರಿಕೆಟ್ ಪಂದ್ಯದ ಸಮಯದಲ್ಲಿ ರಿಹಾನ್ನಾ ವೆಸ್ಟ್ ಇಂಡೀಸ್ ತಂಡದ ಈ ಧ್ವಜವನ್ನು ಹಿಡಿದು, ಆ ತಂಡವನ್ನು ಬೆಂಬಲಿಸಿದ್ದರು. ಅಂದಂತೆ, ಆಗ ಪಾಕಿಸ್ತಾನವು ಆಟ ಆಡುವ ತಂಡಗಳಲ್ಲಿ ಒಂದಾಗಿರಲಿಲ್ಲ.

ಅದೇ ವಿಂಡೀಸ್ ಧ್ವಜವನ್ನು ಹಿಡಿದ ಗಾಯಕಿಯ ಇನ್ನೂ ಹಲವಾರು ಚಿತ್ರಗಳಿವೆ. ಪಂದ್ಯದ ದಿನದಂದು ರಿಹಾನ್ನಾ ಅವರು ಒಂದು ಫೋಟೊ ಅಪ್‌ಲೋಡ್ ಮಾಡಿದ್ದರು, ಅಲ್ಲಿ ಅವರು ವೆಸ್ಟ್ ಇಂಡೀಸ್ ತಂಡದ ಆಟಗಾರರು ಧರಿಸುವ ಕ್ಯಾಪ್ ಧರಿಸಿದ್ದಾರೆ.

ಗಾಯಕಿ ರಿಹಾನ್ನಾ ‘ಕ್ರಿಕೆಟ್ ವೆಸ್ಟ್ ಇಂಡೀಸ್’ ಧ್ವಜವನ್ನು ಹಿಡಿದಿರುವ ಚಿತ್ರವನ್ನು ಪಾಕಿಸ್ತಾನದ ಧ್ವಜವನ್ನು ಹಿಡಿದಿದ್ದಾರೆ ಎಂದು ತಪ್ಪಾಗಿ ಚಿತ್ರಿಸಲು ಎಡಿಟ್ ಮಾಡಲಾಗಿದೆ. ಭಾರತದಲ್ಲಿ ರೈತರ ಆಂದೋಲನವನ್ನು ಬೆಂಬಲಿಸುವ ರಿಹಾನ್ನಾ ಅವರ ಟ್ವೀಟ್‌ನಿಂದ ಗಲಿಬಿಲಿಗೊಂಡ ಬಿಜೆಪಿಯ ಸದಸ್ಯರು ಗಾಯಕಿಗೆ ಪಾಕಿಸ್ತಾನಿ ಸಂಪರ್ಕವಿದೆ ಎಂದು ತಪ್ಪಾಗಿ ಸೂಚಿಸಲು ಪ್ರಯತ್ನಿಸಿದ್ದಾರೆ.

(ಕೃಪೆ: ಆಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರುಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...