Homeಫ್ಯಾಕ್ಟ್‌ಚೆಕ್FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್...ವೈರಲ್...

FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

- Advertisement -
- Advertisement -

“ತಂದೆ ಇಲ್ಲದ ಮಕ್ಕಳ ಖಾತೆಗೆ ಒಂದು ವರ್ಷ 24,000 ರೂ.ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ. ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ ಮತ್ತು ಸೀಲ್ ಮಾಡಿದ ಮೇಲೆ ಪುನಃ ಡಿಸಿ ಆಫೀಸಿಗೆ ಸಲ್ಲಿಸಬೇಕು. ನಂತರ ಅವರ ಸಿಬ್ಬಂದಿಗಳು ಮನೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೇಲೆ ಯೋಜನೆ ಪ್ರಾರಂಭವಾಗುತ್ತದೆ”

ಈ ರೀತಿಯ ಸಂದೇಶವೊಂದು ವಿವಿಧ ಜಿಲ್ಲೆಗಳ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗಳ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ಆರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯ ಹೆಸರಿನಲ್ಲಿರುವ ಸಂದೇಶ ನಮಗೆ ವಾಟ್ಸಾಪ್‌ನಲ್ಲಿ ಲಭ್ಯವಾಗಿತ್ತು. ಆದ್ದರಿಂದ ನಾವು ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಲ್ ಅವರಿಗೆ ಕರೆಮಾಡಿ ಮಾಹಿತಿ ಪಡೆದಿದ್ದೇವೆ.

ಸೋನಲ್ ಐಗಲ್ ಅವರು ನೀಡಿರುವ ಮಾಹಿತಿ ಪ್ರಕಾರ, “ಕೇಂದ್ರ ಸರ್ಕಾರದ ಶೇ.60 ಅನುದಾನ ಮತ್ತು ರಾಜ್ಯ ಸರ್ಕಾರದ ಶೇ. 40 ಅನುದಾನೊಂದಿಗೆ ಪ್ರಾಯೋಜಕತ್ವ ಯೋಜನೆಯೊಂದು ಜಾರಿಯಲ್ಲಿದೆ. ಈ ಯೋಜನೆಯಡಿ ಅನಾಥ ಮಕ್ಕಳು, ಪೋಷಕರು ಜೈಲಿನಲ್ಲಿರುವ ಮಕ್ಕಳು, ಲೈಂಗಿಕ ಕಾರ್ಯಕರ್ತೆಯರು, ದೇವದಾಸಿ ಪದ್ದತಿಗೆ ಒಳಗಾಗಿರುವವ ಮಕ್ಕಳು, ಏಕ ಪೋಷಕ (ತಂದೆ ಅಥವಾ ತಾಯಿ) ಮಕ್ಕಳು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳು, ಭಿಕ್ಷುಕರ ಮಕ್ಕಳು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಶಿರೂರು ದುರಂತದಂತಹ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವವರ ಮಕ್ಕಳಿಗೆ ಧನ ಸಹಾಯ ನೀಡಲಾಗುತ್ತದೆ. ಮೇಲೆ ಉಲ್ಲೇಖಿಸಿದ ಮಕ್ಕಳ ಶಿಕ್ಷಣ, ಆರೋಗ್ಯ ಸುಧಾರಣೆ ಮತ್ತು ಅವರನ್ನು ಬಾಲ ಕಾರ್ಮಿಕ ಪದ್ದತಿಯಿಂದ ತಡೆಯುವ ಉದ್ದೇಶದಿಂದ ಈ ಪ್ರಾಯೋಜಕತ್ವ ಯೋಜನೆ ರೂಪಿಸಲಾಗಿದೆ.

ಗಮನಿಸಿ : ವೈರಲ್ ಸಂದೇಶದಲ್ಲಿ ‘ತಂದೆ ಇಲ್ಲದ ಮಕ್ಕಳಿಗೆ ‘ಎಂದು ಉಲ್ಲೇಖಿಸಲಾಗಿದೆ. ಆದರೆ, ಅದು ತಪ್ಪು ಮಾಹಿತಿ. ಈ ಯೋಜನೆಯ ಅರ್ಹರು ಯಾರೆಂದು ನಾವು ಮೇಲೆ ತಿಳಿಸಿದ್ದೇವೆ.   

ವಾರ್ಷಿಕ 24 ಸಾವಿರ ಸ್ಕಾಲರ್‌ ಶಿಪ್ ಸಿಗುತ್ತಿದೆ ಎಂದೂ ವೈರಲ್ ಸಂದೇಶದಲ್ಲಿದೆ. ಆದರೆ, ಅದು ತಪ್ಪು ಮಾಹಿತಿ, ಸೋನಲ್ ಐಗಲ್ ಅವರು ಹೇಳಿರುವಂತೆ ಮಾಸಿಕ 4 ಸಾವಿರ ರೂಪಾಯಿಯಂತೆ ವಾರ್ಷಿಕ 48 ಸಾವಿರ ರೂಪಾಯಿ ಧನ ಸಹಾಯ ಸಿಗುತ್ತದೆ. 18 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಈ ಯೋಜನೆಗೆ ಅರ್ಹರು. ಅರ್ಹರು ಅವರಾಗಿಯೇ ಅರ್ಜಿ ಸಲ್ಲಿಸಬಹುದು ಅಥವಾ ಸಿಬ್ಬಂದಿಯ ಮೂಲಕ ಇಲಾಖೆಯೇ ಅರ್ಹರನ್ನು ಪತ್ತೆ ಮಾಡುತ್ತದೆ.

ಅರ್ಜಿಗಳನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಅಥವಾ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೂಲಕವೂ ನೀಡಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯಿಲ್ಲ, ಕೇವಲ ಆಫ್‌ಲೈನ್ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್‌, ಬ್ಯಾಂಕ್ ಸ್ಟೇಟ್‌ಮೆಂಟ್, ಮಗುವಿನ ಜನನ ಪ್ರಮಾಣ ಪತ್ರ, ತಂದೆ ತಾಯಿ ನಿಧರಾಗಿದ್ದರೆ ಅವರ ಮರಣ ಪ್ರಮಾಣ ಪತ್ರ ಬೇಕಿದೆ. ಸಲ್ಲಿಕೆಯಾದ ಅರ್ಜಿಯನ್ನು ಮಕ್ಕಳ ರಕ್ಷಣಾ ಇಲಾಖೆ ಆಂತರಿಕವಾಗಿ ಪರಿಶೀಲನೆ ಮಾಡುತ್ತದೆ ಮತ್ತು ಅರ್ಜಿ ಸಲ್ಲಿಸಿದವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಾರೆ. ಬಳಿಕ ಅರ್ಹರನ್ನು ಯೋಜನೆಗೆ ಆಯ್ಕೆ ಮಾಡಲಾಗುತ್ತದೆ.

ಈ ಹಿಂದೆ ಯೋಜನೆಯ ಅವಧಿ ಮೂರು ವರ್ಷ ಇತ್ತು. ಈಗ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಪ್ರಸ್ತುತ ಒಂದು ಮಗುವಿಗೆ ಒಂದು ವರ್ಷದವರೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ತೀರ ಅನಿವಾರ್ಯವಿದ್ದರೆ ಮೂರು ವರ್ಷದವರೆಗೆ ಮುಂದುವರೆಸಲಾಗುತ್ತದೆ.

ವರ್ಷಕ್ಕೆ ಒಂದು ಬಾರಿ ಮಾತ್ರ ಯೋಜನೆಗೆ ಪ್ರಸ್ತಾವ ಸಲ್ಲಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷ 200 ಮತ್ತು ಈ ವರ್ಷ 300 ಮಕ್ಕಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಲಾಗಿದೆ ಎಂದು ಸೋನಲ್ ಐಗಲ್ ಹೇಳಿದ್ದಾರೆ.

ಒಟ್ಟಿನಲ್ಲಿ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶಲ್ಲಿ ಹೇಳಿರುವಂತೆ 18 ವರ್ಷದೊಳಗಿನ ಮಕ್ಕಳಿಗೆ ಧನ ಸಹಾಯ ನೀಡುವ ಯೋಜನೆ ಜಾರಿಯಲ್ಲಿರುವುದು ನಿಜ. ಆದರೆ, ಅದು ತಂದೆಯಿಲ್ಲದ ಮಕ್ಕಳಿಗೆ ಮಾತ್ರ ಇರುವ ಯೋಜನೆಯಲ್ಲ. ಹಲವು ಅರ್ಹರು ಯೋಜನೆಯ ಲಾಭ ಪಡೆಯಬಹುದು. ಅಲ್ಲದೆ, ವಾರ್ಷಿಕವಾಗಿ 48 ಸಾವಿರ ರೂ. ಧನ ಸಹಾಯ ಸಿಗುತ್ತದೆ.

ಇದನ್ನೂ ಓದಿ : FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...