Homeಫ್ಯಾಕ್ಟ್‌ಚೆಕ್FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್...ವೈರಲ್...

FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

- Advertisement -
- Advertisement -

“ತಂದೆ ಇಲ್ಲದ ಮಕ್ಕಳ ಖಾತೆಗೆ ಒಂದು ವರ್ಷ 24,000 ರೂ.ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ. ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ ಮತ್ತು ಸೀಲ್ ಮಾಡಿದ ಮೇಲೆ ಪುನಃ ಡಿಸಿ ಆಫೀಸಿಗೆ ಸಲ್ಲಿಸಬೇಕು. ನಂತರ ಅವರ ಸಿಬ್ಬಂದಿಗಳು ಮನೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೇಲೆ ಯೋಜನೆ ಪ್ರಾರಂಭವಾಗುತ್ತದೆ”

ಈ ರೀತಿಯ ಸಂದೇಶವೊಂದು ವಿವಿಧ ಜಿಲ್ಲೆಗಳ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗಳ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ಆರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯ ಹೆಸರಿನಲ್ಲಿರುವ ಸಂದೇಶ ನಮಗೆ ವಾಟ್ಸಾಪ್‌ನಲ್ಲಿ ಲಭ್ಯವಾಗಿತ್ತು. ಆದ್ದರಿಂದ ನಾವು ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಲ್ ಅವರಿಗೆ ಕರೆಮಾಡಿ ಮಾಹಿತಿ ಪಡೆದಿದ್ದೇವೆ.

ಸೋನಲ್ ಐಗಲ್ ಅವರು ನೀಡಿರುವ ಮಾಹಿತಿ ಪ್ರಕಾರ, “ಕೇಂದ್ರ ಸರ್ಕಾರದ ಶೇ.60 ಅನುದಾನ ಮತ್ತು ರಾಜ್ಯ ಸರ್ಕಾರದ ಶೇ. 40 ಅನುದಾನೊಂದಿಗೆ ಪ್ರಾಯೋಜಕತ್ವ ಯೋಜನೆಯೊಂದು ಜಾರಿಯಲ್ಲಿದೆ. ಈ ಯೋಜನೆಯಡಿ ಅನಾಥ ಮಕ್ಕಳು, ಪೋಷಕರು ಜೈಲಿನಲ್ಲಿರುವ ಮಕ್ಕಳು, ಲೈಂಗಿಕ ಕಾರ್ಯಕರ್ತೆಯರು, ದೇವದಾಸಿ ಪದ್ದತಿಗೆ ಒಳಗಾಗಿರುವವ ಮಕ್ಕಳು, ಏಕ ಪೋಷಕ (ತಂದೆ ಅಥವಾ ತಾಯಿ) ಮಕ್ಕಳು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳು, ಭಿಕ್ಷುಕರ ಮಕ್ಕಳು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಶಿರೂರು ದುರಂತದಂತಹ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವವರ ಮಕ್ಕಳಿಗೆ ಧನ ಸಹಾಯ ನೀಡಲಾಗುತ್ತದೆ. ಮೇಲೆ ಉಲ್ಲೇಖಿಸಿದ ಮಕ್ಕಳ ಶಿಕ್ಷಣ, ಆರೋಗ್ಯ ಸುಧಾರಣೆ ಮತ್ತು ಅವರನ್ನು ಬಾಲ ಕಾರ್ಮಿಕ ಪದ್ದತಿಯಿಂದ ತಡೆಯುವ ಉದ್ದೇಶದಿಂದ ಈ ಪ್ರಾಯೋಜಕತ್ವ ಯೋಜನೆ ರೂಪಿಸಲಾಗಿದೆ.

ಗಮನಿಸಿ : ವೈರಲ್ ಸಂದೇಶದಲ್ಲಿ ‘ತಂದೆ ಇಲ್ಲದ ಮಕ್ಕಳಿಗೆ ‘ಎಂದು ಉಲ್ಲೇಖಿಸಲಾಗಿದೆ. ಆದರೆ, ಅದು ತಪ್ಪು ಮಾಹಿತಿ. ಈ ಯೋಜನೆಯ ಅರ್ಹರು ಯಾರೆಂದು ನಾವು ಮೇಲೆ ತಿಳಿಸಿದ್ದೇವೆ.   

ವಾರ್ಷಿಕ 24 ಸಾವಿರ ಸ್ಕಾಲರ್‌ ಶಿಪ್ ಸಿಗುತ್ತಿದೆ ಎಂದೂ ವೈರಲ್ ಸಂದೇಶದಲ್ಲಿದೆ. ಆದರೆ, ಅದು ತಪ್ಪು ಮಾಹಿತಿ, ಸೋನಲ್ ಐಗಲ್ ಅವರು ಹೇಳಿರುವಂತೆ ಮಾಸಿಕ 4 ಸಾವಿರ ರೂಪಾಯಿಯಂತೆ ವಾರ್ಷಿಕ 48 ಸಾವಿರ ರೂಪಾಯಿ ಧನ ಸಹಾಯ ಸಿಗುತ್ತದೆ. 18 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಈ ಯೋಜನೆಗೆ ಅರ್ಹರು. ಅರ್ಹರು ಅವರಾಗಿಯೇ ಅರ್ಜಿ ಸಲ್ಲಿಸಬಹುದು ಅಥವಾ ಸಿಬ್ಬಂದಿಯ ಮೂಲಕ ಇಲಾಖೆಯೇ ಅರ್ಹರನ್ನು ಪತ್ತೆ ಮಾಡುತ್ತದೆ.

ಅರ್ಜಿಗಳನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಅಥವಾ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೂಲಕವೂ ನೀಡಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯಿಲ್ಲ, ಕೇವಲ ಆಫ್‌ಲೈನ್ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್‌, ಬ್ಯಾಂಕ್ ಸ್ಟೇಟ್‌ಮೆಂಟ್, ಮಗುವಿನ ಜನನ ಪ್ರಮಾಣ ಪತ್ರ, ತಂದೆ ತಾಯಿ ನಿಧರಾಗಿದ್ದರೆ ಅವರ ಮರಣ ಪ್ರಮಾಣ ಪತ್ರ ಬೇಕಿದೆ. ಸಲ್ಲಿಕೆಯಾದ ಅರ್ಜಿಯನ್ನು ಮಕ್ಕಳ ರಕ್ಷಣಾ ಇಲಾಖೆ ಆಂತರಿಕವಾಗಿ ಪರಿಶೀಲನೆ ಮಾಡುತ್ತದೆ ಮತ್ತು ಅರ್ಜಿ ಸಲ್ಲಿಸಿದವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಾರೆ. ಬಳಿಕ ಅರ್ಹರನ್ನು ಯೋಜನೆಗೆ ಆಯ್ಕೆ ಮಾಡಲಾಗುತ್ತದೆ.

ಈ ಹಿಂದೆ ಯೋಜನೆಯ ಅವಧಿ ಮೂರು ವರ್ಷ ಇತ್ತು. ಈಗ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಪ್ರಸ್ತುತ ಒಂದು ಮಗುವಿಗೆ ಒಂದು ವರ್ಷದವರೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ತೀರ ಅನಿವಾರ್ಯವಿದ್ದರೆ ಮೂರು ವರ್ಷದವರೆಗೆ ಮುಂದುವರೆಸಲಾಗುತ್ತದೆ.

ವರ್ಷಕ್ಕೆ ಒಂದು ಬಾರಿ ಮಾತ್ರ ಯೋಜನೆಗೆ ಪ್ರಸ್ತಾವ ಸಲ್ಲಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷ 200 ಮತ್ತು ಈ ವರ್ಷ 300 ಮಕ್ಕಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಲಾಗಿದೆ ಎಂದು ಸೋನಲ್ ಐಗಲ್ ಹೇಳಿದ್ದಾರೆ.

ಒಟ್ಟಿನಲ್ಲಿ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶಲ್ಲಿ ಹೇಳಿರುವಂತೆ 18 ವರ್ಷದೊಳಗಿನ ಮಕ್ಕಳಿಗೆ ಧನ ಸಹಾಯ ನೀಡುವ ಯೋಜನೆ ಜಾರಿಯಲ್ಲಿರುವುದು ನಿಜ. ಆದರೆ, ಅದು ತಂದೆಯಿಲ್ಲದ ಮಕ್ಕಳಿಗೆ ಮಾತ್ರ ಇರುವ ಯೋಜನೆಯಲ್ಲ. ಹಲವು ಅರ್ಹರು ಯೋಜನೆಯ ಲಾಭ ಪಡೆಯಬಹುದು. ಅಲ್ಲದೆ, ವಾರ್ಷಿಕವಾಗಿ 48 ಸಾವಿರ ರೂ. ಧನ ಸಹಾಯ ಸಿಗುತ್ತದೆ.

ಇದನ್ನೂ ಓದಿ : FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...