Homeಫ್ಯಾಕ್ಟ್‌ಚೆಕ್FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್...ವೈರಲ್...

FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

- Advertisement -
- Advertisement -

“ತಂದೆ ಇಲ್ಲದ ಮಕ್ಕಳ ಖಾತೆಗೆ ಒಂದು ವರ್ಷ 24,000 ರೂ.ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ. ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ ಮತ್ತು ಸೀಲ್ ಮಾಡಿದ ಮೇಲೆ ಪುನಃ ಡಿಸಿ ಆಫೀಸಿಗೆ ಸಲ್ಲಿಸಬೇಕು. ನಂತರ ಅವರ ಸಿಬ್ಬಂದಿಗಳು ಮನೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೇಲೆ ಯೋಜನೆ ಪ್ರಾರಂಭವಾಗುತ್ತದೆ”

ಈ ರೀತಿಯ ಸಂದೇಶವೊಂದು ವಿವಿಧ ಜಿಲ್ಲೆಗಳ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗಳ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ಆರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯ ಹೆಸರಿನಲ್ಲಿರುವ ಸಂದೇಶ ನಮಗೆ ವಾಟ್ಸಾಪ್‌ನಲ್ಲಿ ಲಭ್ಯವಾಗಿತ್ತು. ಆದ್ದರಿಂದ ನಾವು ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಲ್ ಅವರಿಗೆ ಕರೆಮಾಡಿ ಮಾಹಿತಿ ಪಡೆದಿದ್ದೇವೆ.

ಸೋನಲ್ ಐಗಲ್ ಅವರು ನೀಡಿರುವ ಮಾಹಿತಿ ಪ್ರಕಾರ, “ಕೇಂದ್ರ ಸರ್ಕಾರದ ಶೇ.60 ಅನುದಾನ ಮತ್ತು ರಾಜ್ಯ ಸರ್ಕಾರದ ಶೇ. 40 ಅನುದಾನೊಂದಿಗೆ ಪ್ರಾಯೋಜಕತ್ವ ಯೋಜನೆಯೊಂದು ಜಾರಿಯಲ್ಲಿದೆ. ಈ ಯೋಜನೆಯಡಿ ಅನಾಥ ಮಕ್ಕಳು, ಪೋಷಕರು ಜೈಲಿನಲ್ಲಿರುವ ಮಕ್ಕಳು, ಲೈಂಗಿಕ ಕಾರ್ಯಕರ್ತೆಯರು, ದೇವದಾಸಿ ಪದ್ದತಿಗೆ ಒಳಗಾಗಿರುವವ ಮಕ್ಕಳು, ಏಕ ಪೋಷಕ (ತಂದೆ ಅಥವಾ ತಾಯಿ) ಮಕ್ಕಳು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳು, ಭಿಕ್ಷುಕರ ಮಕ್ಕಳು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಶಿರೂರು ದುರಂತದಂತಹ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವವರ ಮಕ್ಕಳಿಗೆ ಧನ ಸಹಾಯ ನೀಡಲಾಗುತ್ತದೆ. ಮೇಲೆ ಉಲ್ಲೇಖಿಸಿದ ಮಕ್ಕಳ ಶಿಕ್ಷಣ, ಆರೋಗ್ಯ ಸುಧಾರಣೆ ಮತ್ತು ಅವರನ್ನು ಬಾಲ ಕಾರ್ಮಿಕ ಪದ್ದತಿಯಿಂದ ತಡೆಯುವ ಉದ್ದೇಶದಿಂದ ಈ ಪ್ರಾಯೋಜಕತ್ವ ಯೋಜನೆ ರೂಪಿಸಲಾಗಿದೆ.

ಗಮನಿಸಿ : ವೈರಲ್ ಸಂದೇಶದಲ್ಲಿ ‘ತಂದೆ ಇಲ್ಲದ ಮಕ್ಕಳಿಗೆ ‘ಎಂದು ಉಲ್ಲೇಖಿಸಲಾಗಿದೆ. ಆದರೆ, ಅದು ತಪ್ಪು ಮಾಹಿತಿ. ಈ ಯೋಜನೆಯ ಅರ್ಹರು ಯಾರೆಂದು ನಾವು ಮೇಲೆ ತಿಳಿಸಿದ್ದೇವೆ.   

ವಾರ್ಷಿಕ 24 ಸಾವಿರ ಸ್ಕಾಲರ್‌ ಶಿಪ್ ಸಿಗುತ್ತಿದೆ ಎಂದೂ ವೈರಲ್ ಸಂದೇಶದಲ್ಲಿದೆ. ಆದರೆ, ಅದು ತಪ್ಪು ಮಾಹಿತಿ, ಸೋನಲ್ ಐಗಲ್ ಅವರು ಹೇಳಿರುವಂತೆ ಮಾಸಿಕ 4 ಸಾವಿರ ರೂಪಾಯಿಯಂತೆ ವಾರ್ಷಿಕ 48 ಸಾವಿರ ರೂಪಾಯಿ ಧನ ಸಹಾಯ ಸಿಗುತ್ತದೆ. 18 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಈ ಯೋಜನೆಗೆ ಅರ್ಹರು. ಅರ್ಹರು ಅವರಾಗಿಯೇ ಅರ್ಜಿ ಸಲ್ಲಿಸಬಹುದು ಅಥವಾ ಸಿಬ್ಬಂದಿಯ ಮೂಲಕ ಇಲಾಖೆಯೇ ಅರ್ಹರನ್ನು ಪತ್ತೆ ಮಾಡುತ್ತದೆ.

ಅರ್ಜಿಗಳನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಅಥವಾ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೂಲಕವೂ ನೀಡಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯಿಲ್ಲ, ಕೇವಲ ಆಫ್‌ಲೈನ್ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್‌, ಬ್ಯಾಂಕ್ ಸ್ಟೇಟ್‌ಮೆಂಟ್, ಮಗುವಿನ ಜನನ ಪ್ರಮಾಣ ಪತ್ರ, ತಂದೆ ತಾಯಿ ನಿಧರಾಗಿದ್ದರೆ ಅವರ ಮರಣ ಪ್ರಮಾಣ ಪತ್ರ ಬೇಕಿದೆ. ಸಲ್ಲಿಕೆಯಾದ ಅರ್ಜಿಯನ್ನು ಮಕ್ಕಳ ರಕ್ಷಣಾ ಇಲಾಖೆ ಆಂತರಿಕವಾಗಿ ಪರಿಶೀಲನೆ ಮಾಡುತ್ತದೆ ಮತ್ತು ಅರ್ಜಿ ಸಲ್ಲಿಸಿದವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಾರೆ. ಬಳಿಕ ಅರ್ಹರನ್ನು ಯೋಜನೆಗೆ ಆಯ್ಕೆ ಮಾಡಲಾಗುತ್ತದೆ.

ಈ ಹಿಂದೆ ಯೋಜನೆಯ ಅವಧಿ ಮೂರು ವರ್ಷ ಇತ್ತು. ಈಗ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಪ್ರಸ್ತುತ ಒಂದು ಮಗುವಿಗೆ ಒಂದು ವರ್ಷದವರೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ತೀರ ಅನಿವಾರ್ಯವಿದ್ದರೆ ಮೂರು ವರ್ಷದವರೆಗೆ ಮುಂದುವರೆಸಲಾಗುತ್ತದೆ.

ವರ್ಷಕ್ಕೆ ಒಂದು ಬಾರಿ ಮಾತ್ರ ಯೋಜನೆಗೆ ಪ್ರಸ್ತಾವ ಸಲ್ಲಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷ 200 ಮತ್ತು ಈ ವರ್ಷ 300 ಮಕ್ಕಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಲಾಗಿದೆ ಎಂದು ಸೋನಲ್ ಐಗಲ್ ಹೇಳಿದ್ದಾರೆ.

ಒಟ್ಟಿನಲ್ಲಿ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶಲ್ಲಿ ಹೇಳಿರುವಂತೆ 18 ವರ್ಷದೊಳಗಿನ ಮಕ್ಕಳಿಗೆ ಧನ ಸಹಾಯ ನೀಡುವ ಯೋಜನೆ ಜಾರಿಯಲ್ಲಿರುವುದು ನಿಜ. ಆದರೆ, ಅದು ತಂದೆಯಿಲ್ಲದ ಮಕ್ಕಳಿಗೆ ಮಾತ್ರ ಇರುವ ಯೋಜನೆಯಲ್ಲ. ಹಲವು ಅರ್ಹರು ಯೋಜನೆಯ ಲಾಭ ಪಡೆಯಬಹುದು. ಅಲ್ಲದೆ, ವಾರ್ಷಿಕವಾಗಿ 48 ಸಾವಿರ ರೂ. ಧನ ಸಹಾಯ ಸಿಗುತ್ತದೆ.

ಇದನ್ನೂ ಓದಿ : FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...