Homeಮುಖಪುಟಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ರಕ್ತದಲ್ಲಿ ತೊಯ್ದಿರುವ ಮಹಿಳೆಯೋರ್ವಳು ಮಾತನಾಡಿರುವ ವೀಡಿಯೋವೊಂದು ಸಾಂಆಜಿಕ ಜಾಲತಾಣದಲ್ಲಿ ವೈರಲಾಗಿದ್ದು ಅದರಲ್ಲಿ, RSS ಕಾರ್ಯಕರ್ತರು ಮುಸ್ಲಿಂ ವೈಧ್ಯೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿತ್ತು.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಈ ಬಗ್ಗೆ, ದಿ ಕ್ವಿಂಟ್‌ ಫ್ಯಾಕ್ಟ್‌ ಚೆಕ್‌ ಮಾಡಿದ್ದು, ವಿಡಿಯೋದಲ್ಲಿರುವ ಮಹಿಳೆ ಮತ್ತು ಅವರ ತಂಡವು ನಾಯಿಗಳನ್ನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಅದು ತಿಳಿಸಿದೆ.

ಈ ಬಗ್ಗೆ ವಿಡಿಯೊದಲ್ಲಿರುವ ಮಹಿಳೆಯೆ ಮಹಿತಿ ನೀಡಿದ್ದಾರೆ. ಮಹಿಳೆಯು ದೆಹಲಿ ಮೂಲದ ‘ನೈಬರ್ ವೂಫ್’ ಸಂಸ್ಥಾಪಕಿ ಆಯೆಷಾ ಕ್ರಿಸ್ಟಿನಾ ಎಂಬವರಾಗಿದ್ದಾರೆ. ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲವೆಂದು ಸ್ವತಃ ಮಹಿಳೆಯೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಆಡಳಿತ ಪಕ್ಷದ ಬೆಂಬಲವನ್ನು ಹೊಂದಿರುವ ಹಿಂದೂ ಉಗ್ರಗಾಮಿ ಸಂಘಟನೆ ಆರ್‌ಎಸ್‌ಎಸ್‌, ಮುಸ್ಲಿಮರು ಕೊರೊನಾ ವೈರಸ್‌ ಹರಡುತ್ತಿದ್ದಾರೆಂಬ ಆರೋಪ ಹೊರಿಸಿ ಮುಸ್ಲಿಂ ವೈದ್ಯೆ ಆಯೆಷಾ ಅವರ ಮೇಲೆ ಹಲ್ಲೆ ನಡೆಸಿದೆ. ಇದು ಭಾರತವು ಮುಸ್ಲಿಮರ ವಿರುದ್ಧ ನಡೆಸುತ್ತಿರುವ ತೀವ್ರತರದ ಧ್ವೇಷ ಅಭಿಯಾನಕ್ಕೆ ಸಾಕ್ಷಿಯಾಗಿದೆ” ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನು ಹಲವಾರು ಟ್ವಿಟ್ಟರ್ ಬಳಕೆದಾರರು ಇದೇ ರೀತಿಯ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಫ್ಯಾಕ್ಟ್‌‌ಚೆಕ್:

ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ Neighbourhood Woof ಎಂಬ ಎನ್‌ಜಿಒ ಸದಸ್ಯರು ಜುಲೈ 3 ರಂದು ದೆಹಲಿಯ ರಾಣಿ ಬಾಗ್‌ನ ರಾಶಿ ನಗರದ ಕೆಲವು ನಿವಾಸಿಗಳಿಂದ ಹಲ್ಲೆಗೆ ಒಳಗಾಗಿದ್ದೇವೆ ಎಂದು ಆರೋಪಿಸಿದ್ದಾರೆ.

ಈ ಘಟನೆಯ ನಂತರ, ಈ ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

ಎನ್‌ಜಿಒ ಸದಸ್ಯರು ಈ ಹಿಂದೆ ಘಟನೆಯ ವಿವರಗಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಆದರೆ, ಧಾರ್ಮಿಕ ಕಾರಣದಿಂದಾಗಿ ದಾಳಿಗೆ ಒಳಗಾಗಿರುವುದಾಗಿ ಅವರು ಎಲ್ಲಿಯೂ ಉಲ್ಲೇಖಿಸಿಲ್ಲ.

ಈ ಘಟನೆಯ ವಿಚಾರವಾಗಿ ಆಯೆಷಾ ಕ್ರಿಸ್ಟಿನಾ ಅವರನ್ನು ಸಂಪರ್ಕಿಸಿದಾಗ, ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅವರು ಯಾರೇ ಆಗಿರಬಹುದು, ಇದನ್ನು ಧಾರ್ಮಿಕ ಉದ್ದೇಶದಿಂದ ಹರಡುತ್ತಿದ್ದಾರೆ. ಅವರ ಆಲೋಚನೆ ಮತ್ತು ಕಾರ್ಯಸೂಚಿ ಬಹಳ ಸ್ಪಷ್ಟವಾಗಿದೆ. ಆದ್ದರಿಂದ, ನಾನು ಅಂತಹ ಜನರೊಂದಿಗೆ ತೊಡಗಿಸಿಕೊಳ್ಳಲು ಸಹ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದರ ನಡುವೆ, ಹಲ್ಲೆನಡೆಸಿದ ನಿವಾಸಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 341 (ತಪ್ಪಾದ ಸಂಯಮ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜುಲೈ 4 ರ ಪತ್ರಿಕಾ ಪ್ರಕಟಣೆಯಲ್ಲಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

“ತಡರಾತ್ರಿಯ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್‌ಜಿಓದವರ ಗುರುತಿನ ಚೀಟಿಗಳನ್ನು ಸ್ಥಳೀಯ ನಿವಾಸಿಗಳು ಕೇಳಿದ್ದು, ನಂತರ ಎನ್‌ಜಿಒ ಮತ್ತು ಸ್ಥಳೀಯರ ನಡುವಿನ ವಾಗ್ವಾದ ತಾರಕ್ಕೇರಿದೆ. ಇದರ ನಂತರ, ಎನ್‌ಜಿಒ ಸದಸ್ಯರು ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡಲು ಅನುವಾದಾಗ 3 ಸ್ಥಳೀಯ ನಿವಾಸಿಗಳು ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಅವರಿಗೆ ಕೆಲವು ಸಣ್ಣಪುಟ್ಟ ಗಾಯಗಳಾಗಿವೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ರಿಷಿ ನಗರದಲ್ಲಿ ಈ ಘಟನೆ ನಡೆದಿರುವುದು ನಿಜವಾಗಿದ್ದರೂ, ಅದನ್ನು ಪ್ರಸಾರ ಮಾಡಿರುವ ಉದ್ದೇಶ ಮತ್ತು ನೀಡಿರುವ ಕಾರಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...