Homeಮುಖಪುಟಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ರಕ್ತದಲ್ಲಿ ತೊಯ್ದಿರುವ ಮಹಿಳೆಯೋರ್ವಳು ಮಾತನಾಡಿರುವ ವೀಡಿಯೋವೊಂದು ಸಾಂಆಜಿಕ ಜಾಲತಾಣದಲ್ಲಿ ವೈರಲಾಗಿದ್ದು ಅದರಲ್ಲಿ, RSS ಕಾರ್ಯಕರ್ತರು ಮುಸ್ಲಿಂ ವೈಧ್ಯೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿತ್ತು.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಈ ಬಗ್ಗೆ, ದಿ ಕ್ವಿಂಟ್‌ ಫ್ಯಾಕ್ಟ್‌ ಚೆಕ್‌ ಮಾಡಿದ್ದು, ವಿಡಿಯೋದಲ್ಲಿರುವ ಮಹಿಳೆ ಮತ್ತು ಅವರ ತಂಡವು ನಾಯಿಗಳನ್ನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಅದು ತಿಳಿಸಿದೆ.

ಈ ಬಗ್ಗೆ ವಿಡಿಯೊದಲ್ಲಿರುವ ಮಹಿಳೆಯೆ ಮಹಿತಿ ನೀಡಿದ್ದಾರೆ. ಮಹಿಳೆಯು ದೆಹಲಿ ಮೂಲದ ‘ನೈಬರ್ ವೂಫ್’ ಸಂಸ್ಥಾಪಕಿ ಆಯೆಷಾ ಕ್ರಿಸ್ಟಿನಾ ಎಂಬವರಾಗಿದ್ದಾರೆ. ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲವೆಂದು ಸ್ವತಃ ಮಹಿಳೆಯೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಆಡಳಿತ ಪಕ್ಷದ ಬೆಂಬಲವನ್ನು ಹೊಂದಿರುವ ಹಿಂದೂ ಉಗ್ರಗಾಮಿ ಸಂಘಟನೆ ಆರ್‌ಎಸ್‌ಎಸ್‌, ಮುಸ್ಲಿಮರು ಕೊರೊನಾ ವೈರಸ್‌ ಹರಡುತ್ತಿದ್ದಾರೆಂಬ ಆರೋಪ ಹೊರಿಸಿ ಮುಸ್ಲಿಂ ವೈದ್ಯೆ ಆಯೆಷಾ ಅವರ ಮೇಲೆ ಹಲ್ಲೆ ನಡೆಸಿದೆ. ಇದು ಭಾರತವು ಮುಸ್ಲಿಮರ ವಿರುದ್ಧ ನಡೆಸುತ್ತಿರುವ ತೀವ್ರತರದ ಧ್ವೇಷ ಅಭಿಯಾನಕ್ಕೆ ಸಾಕ್ಷಿಯಾಗಿದೆ” ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನು ಹಲವಾರು ಟ್ವಿಟ್ಟರ್ ಬಳಕೆದಾರರು ಇದೇ ರೀತಿಯ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಫ್ಯಾಕ್ಟ್‌‌ಚೆಕ್:

ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ Neighbourhood Woof ಎಂಬ ಎನ್‌ಜಿಒ ಸದಸ್ಯರು ಜುಲೈ 3 ರಂದು ದೆಹಲಿಯ ರಾಣಿ ಬಾಗ್‌ನ ರಾಶಿ ನಗರದ ಕೆಲವು ನಿವಾಸಿಗಳಿಂದ ಹಲ್ಲೆಗೆ ಒಳಗಾಗಿದ್ದೇವೆ ಎಂದು ಆರೋಪಿಸಿದ್ದಾರೆ.

ಈ ಘಟನೆಯ ನಂತರ, ಈ ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

ಎನ್‌ಜಿಒ ಸದಸ್ಯರು ಈ ಹಿಂದೆ ಘಟನೆಯ ವಿವರಗಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಆದರೆ, ಧಾರ್ಮಿಕ ಕಾರಣದಿಂದಾಗಿ ದಾಳಿಗೆ ಒಳಗಾಗಿರುವುದಾಗಿ ಅವರು ಎಲ್ಲಿಯೂ ಉಲ್ಲೇಖಿಸಿಲ್ಲ.

ಈ ಘಟನೆಯ ವಿಚಾರವಾಗಿ ಆಯೆಷಾ ಕ್ರಿಸ್ಟಿನಾ ಅವರನ್ನು ಸಂಪರ್ಕಿಸಿದಾಗ, ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅವರು ಯಾರೇ ಆಗಿರಬಹುದು, ಇದನ್ನು ಧಾರ್ಮಿಕ ಉದ್ದೇಶದಿಂದ ಹರಡುತ್ತಿದ್ದಾರೆ. ಅವರ ಆಲೋಚನೆ ಮತ್ತು ಕಾರ್ಯಸೂಚಿ ಬಹಳ ಸ್ಪಷ್ಟವಾಗಿದೆ. ಆದ್ದರಿಂದ, ನಾನು ಅಂತಹ ಜನರೊಂದಿಗೆ ತೊಡಗಿಸಿಕೊಳ್ಳಲು ಸಹ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದರ ನಡುವೆ, ಹಲ್ಲೆನಡೆಸಿದ ನಿವಾಸಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 341 (ತಪ್ಪಾದ ಸಂಯಮ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜುಲೈ 4 ರ ಪತ್ರಿಕಾ ಪ್ರಕಟಣೆಯಲ್ಲಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

“ತಡರಾತ್ರಿಯ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್‌ಜಿಓದವರ ಗುರುತಿನ ಚೀಟಿಗಳನ್ನು ಸ್ಥಳೀಯ ನಿವಾಸಿಗಳು ಕೇಳಿದ್ದು, ನಂತರ ಎನ್‌ಜಿಒ ಮತ್ತು ಸ್ಥಳೀಯರ ನಡುವಿನ ವಾಗ್ವಾದ ತಾರಕ್ಕೇರಿದೆ. ಇದರ ನಂತರ, ಎನ್‌ಜಿಒ ಸದಸ್ಯರು ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡಲು ಅನುವಾದಾಗ 3 ಸ್ಥಳೀಯ ನಿವಾಸಿಗಳು ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಅವರಿಗೆ ಕೆಲವು ಸಣ್ಣಪುಟ್ಟ ಗಾಯಗಳಾಗಿವೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ರಿಷಿ ನಗರದಲ್ಲಿ ಈ ಘಟನೆ ನಡೆದಿರುವುದು ನಿಜವಾಗಿದ್ದರೂ, ಅದನ್ನು ಪ್ರಸಾರ ಮಾಡಿರುವ ಉದ್ದೇಶ ಮತ್ತು ನೀಡಿರುವ ಕಾರಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...