Homeಮುಖಪುಟಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ರಕ್ತದಲ್ಲಿ ತೊಯ್ದಿರುವ ಮಹಿಳೆಯೋರ್ವಳು ಮಾತನಾಡಿರುವ ವೀಡಿಯೋವೊಂದು ಸಾಂಆಜಿಕ ಜಾಲತಾಣದಲ್ಲಿ ವೈರಲಾಗಿದ್ದು ಅದರಲ್ಲಿ, RSS ಕಾರ್ಯಕರ್ತರು ಮುಸ್ಲಿಂ ವೈಧ್ಯೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿತ್ತು.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಈ ಬಗ್ಗೆ, ದಿ ಕ್ವಿಂಟ್‌ ಫ್ಯಾಕ್ಟ್‌ ಚೆಕ್‌ ಮಾಡಿದ್ದು, ವಿಡಿಯೋದಲ್ಲಿರುವ ಮಹಿಳೆ ಮತ್ತು ಅವರ ತಂಡವು ನಾಯಿಗಳನ್ನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಅದು ತಿಳಿಸಿದೆ.

ಈ ಬಗ್ಗೆ ವಿಡಿಯೊದಲ್ಲಿರುವ ಮಹಿಳೆಯೆ ಮಹಿತಿ ನೀಡಿದ್ದಾರೆ. ಮಹಿಳೆಯು ದೆಹಲಿ ಮೂಲದ ‘ನೈಬರ್ ವೂಫ್’ ಸಂಸ್ಥಾಪಕಿ ಆಯೆಷಾ ಕ್ರಿಸ್ಟಿನಾ ಎಂಬವರಾಗಿದ್ದಾರೆ. ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲವೆಂದು ಸ್ವತಃ ಮಹಿಳೆಯೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಆಡಳಿತ ಪಕ್ಷದ ಬೆಂಬಲವನ್ನು ಹೊಂದಿರುವ ಹಿಂದೂ ಉಗ್ರಗಾಮಿ ಸಂಘಟನೆ ಆರ್‌ಎಸ್‌ಎಸ್‌, ಮುಸ್ಲಿಮರು ಕೊರೊನಾ ವೈರಸ್‌ ಹರಡುತ್ತಿದ್ದಾರೆಂಬ ಆರೋಪ ಹೊರಿಸಿ ಮುಸ್ಲಿಂ ವೈದ್ಯೆ ಆಯೆಷಾ ಅವರ ಮೇಲೆ ಹಲ್ಲೆ ನಡೆಸಿದೆ. ಇದು ಭಾರತವು ಮುಸ್ಲಿಮರ ವಿರುದ್ಧ ನಡೆಸುತ್ತಿರುವ ತೀವ್ರತರದ ಧ್ವೇಷ ಅಭಿಯಾನಕ್ಕೆ ಸಾಕ್ಷಿಯಾಗಿದೆ” ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನು ಹಲವಾರು ಟ್ವಿಟ್ಟರ್ ಬಳಕೆದಾರರು ಇದೇ ರೀತಿಯ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಫ್ಯಾಕ್ಟ್‌‌ಚೆಕ್:

ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ Neighbourhood Woof ಎಂಬ ಎನ್‌ಜಿಒ ಸದಸ್ಯರು ಜುಲೈ 3 ರಂದು ದೆಹಲಿಯ ರಾಣಿ ಬಾಗ್‌ನ ರಾಶಿ ನಗರದ ಕೆಲವು ನಿವಾಸಿಗಳಿಂದ ಹಲ್ಲೆಗೆ ಒಳಗಾಗಿದ್ದೇವೆ ಎಂದು ಆರೋಪಿಸಿದ್ದಾರೆ.

ಈ ಘಟನೆಯ ನಂತರ, ಈ ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

ಎನ್‌ಜಿಒ ಸದಸ್ಯರು ಈ ಹಿಂದೆ ಘಟನೆಯ ವಿವರಗಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಆದರೆ, ಧಾರ್ಮಿಕ ಕಾರಣದಿಂದಾಗಿ ದಾಳಿಗೆ ಒಳಗಾಗಿರುವುದಾಗಿ ಅವರು ಎಲ್ಲಿಯೂ ಉಲ್ಲೇಖಿಸಿಲ್ಲ.

ಈ ಘಟನೆಯ ವಿಚಾರವಾಗಿ ಆಯೆಷಾ ಕ್ರಿಸ್ಟಿನಾ ಅವರನ್ನು ಸಂಪರ್ಕಿಸಿದಾಗ, ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅವರು ಯಾರೇ ಆಗಿರಬಹುದು, ಇದನ್ನು ಧಾರ್ಮಿಕ ಉದ್ದೇಶದಿಂದ ಹರಡುತ್ತಿದ್ದಾರೆ. ಅವರ ಆಲೋಚನೆ ಮತ್ತು ಕಾರ್ಯಸೂಚಿ ಬಹಳ ಸ್ಪಷ್ಟವಾಗಿದೆ. ಆದ್ದರಿಂದ, ನಾನು ಅಂತಹ ಜನರೊಂದಿಗೆ ತೊಡಗಿಸಿಕೊಳ್ಳಲು ಸಹ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದರ ನಡುವೆ, ಹಲ್ಲೆನಡೆಸಿದ ನಿವಾಸಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 341 (ತಪ್ಪಾದ ಸಂಯಮ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜುಲೈ 4 ರ ಪತ್ರಿಕಾ ಪ್ರಕಟಣೆಯಲ್ಲಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

“ತಡರಾತ್ರಿಯ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್‌ಜಿಓದವರ ಗುರುತಿನ ಚೀಟಿಗಳನ್ನು ಸ್ಥಳೀಯ ನಿವಾಸಿಗಳು ಕೇಳಿದ್ದು, ನಂತರ ಎನ್‌ಜಿಒ ಮತ್ತು ಸ್ಥಳೀಯರ ನಡುವಿನ ವಾಗ್ವಾದ ತಾರಕ್ಕೇರಿದೆ. ಇದರ ನಂತರ, ಎನ್‌ಜಿಒ ಸದಸ್ಯರು ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡಲು ಅನುವಾದಾಗ 3 ಸ್ಥಳೀಯ ನಿವಾಸಿಗಳು ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಅವರಿಗೆ ಕೆಲವು ಸಣ್ಣಪುಟ್ಟ ಗಾಯಗಳಾಗಿವೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ರಿಷಿ ನಗರದಲ್ಲಿ ಈ ಘಟನೆ ನಡೆದಿರುವುದು ನಿಜವಾಗಿದ್ದರೂ, ಅದನ್ನು ಪ್ರಸಾರ ಮಾಡಿರುವ ಉದ್ದೇಶ ಮತ್ತು ನೀಡಿರುವ ಕಾರಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...