Homeಮುಖಪುಟಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ರಕ್ತದಲ್ಲಿ ತೊಯ್ದಿರುವ ಮಹಿಳೆಯೋರ್ವಳು ಮಾತನಾಡಿರುವ ವೀಡಿಯೋವೊಂದು ಸಾಂಆಜಿಕ ಜಾಲತಾಣದಲ್ಲಿ ವೈರಲಾಗಿದ್ದು ಅದರಲ್ಲಿ, RSS ಕಾರ್ಯಕರ್ತರು ಮುಸ್ಲಿಂ ವೈಧ್ಯೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿತ್ತು.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಈ ಬಗ್ಗೆ, ದಿ ಕ್ವಿಂಟ್‌ ಫ್ಯಾಕ್ಟ್‌ ಚೆಕ್‌ ಮಾಡಿದ್ದು, ವಿಡಿಯೋದಲ್ಲಿರುವ ಮಹಿಳೆ ಮತ್ತು ಅವರ ತಂಡವು ನಾಯಿಗಳನ್ನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಅದು ತಿಳಿಸಿದೆ.

ಈ ಬಗ್ಗೆ ವಿಡಿಯೊದಲ್ಲಿರುವ ಮಹಿಳೆಯೆ ಮಹಿತಿ ನೀಡಿದ್ದಾರೆ. ಮಹಿಳೆಯು ದೆಹಲಿ ಮೂಲದ ‘ನೈಬರ್ ವೂಫ್’ ಸಂಸ್ಥಾಪಕಿ ಆಯೆಷಾ ಕ್ರಿಸ್ಟಿನಾ ಎಂಬವರಾಗಿದ್ದಾರೆ. ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲವೆಂದು ಸ್ವತಃ ಮಹಿಳೆಯೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಆಡಳಿತ ಪಕ್ಷದ ಬೆಂಬಲವನ್ನು ಹೊಂದಿರುವ ಹಿಂದೂ ಉಗ್ರಗಾಮಿ ಸಂಘಟನೆ ಆರ್‌ಎಸ್‌ಎಸ್‌, ಮುಸ್ಲಿಮರು ಕೊರೊನಾ ವೈರಸ್‌ ಹರಡುತ್ತಿದ್ದಾರೆಂಬ ಆರೋಪ ಹೊರಿಸಿ ಮುಸ್ಲಿಂ ವೈದ್ಯೆ ಆಯೆಷಾ ಅವರ ಮೇಲೆ ಹಲ್ಲೆ ನಡೆಸಿದೆ. ಇದು ಭಾರತವು ಮುಸ್ಲಿಮರ ವಿರುದ್ಧ ನಡೆಸುತ್ತಿರುವ ತೀವ್ರತರದ ಧ್ವೇಷ ಅಭಿಯಾನಕ್ಕೆ ಸಾಕ್ಷಿಯಾಗಿದೆ” ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನು ಹಲವಾರು ಟ್ವಿಟ್ಟರ್ ಬಳಕೆದಾರರು ಇದೇ ರೀತಿಯ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಫ್ಯಾಕ್ಟ್‌‌ಚೆಕ್:

ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ Neighbourhood Woof ಎಂಬ ಎನ್‌ಜಿಒ ಸದಸ್ಯರು ಜುಲೈ 3 ರಂದು ದೆಹಲಿಯ ರಾಣಿ ಬಾಗ್‌ನ ರಾಶಿ ನಗರದ ಕೆಲವು ನಿವಾಸಿಗಳಿಂದ ಹಲ್ಲೆಗೆ ಒಳಗಾಗಿದ್ದೇವೆ ಎಂದು ಆರೋಪಿಸಿದ್ದಾರೆ.

ಈ ಘಟನೆಯ ನಂತರ, ಈ ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

ಎನ್‌ಜಿಒ ಸದಸ್ಯರು ಈ ಹಿಂದೆ ಘಟನೆಯ ವಿವರಗಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಆದರೆ, ಧಾರ್ಮಿಕ ಕಾರಣದಿಂದಾಗಿ ದಾಳಿಗೆ ಒಳಗಾಗಿರುವುದಾಗಿ ಅವರು ಎಲ್ಲಿಯೂ ಉಲ್ಲೇಖಿಸಿಲ್ಲ.

ಈ ಘಟನೆಯ ವಿಚಾರವಾಗಿ ಆಯೆಷಾ ಕ್ರಿಸ್ಟಿನಾ ಅವರನ್ನು ಸಂಪರ್ಕಿಸಿದಾಗ, ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅವರು ಯಾರೇ ಆಗಿರಬಹುದು, ಇದನ್ನು ಧಾರ್ಮಿಕ ಉದ್ದೇಶದಿಂದ ಹರಡುತ್ತಿದ್ದಾರೆ. ಅವರ ಆಲೋಚನೆ ಮತ್ತು ಕಾರ್ಯಸೂಚಿ ಬಹಳ ಸ್ಪಷ್ಟವಾಗಿದೆ. ಆದ್ದರಿಂದ, ನಾನು ಅಂತಹ ಜನರೊಂದಿಗೆ ತೊಡಗಿಸಿಕೊಳ್ಳಲು ಸಹ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದರ ನಡುವೆ, ಹಲ್ಲೆನಡೆಸಿದ ನಿವಾಸಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 341 (ತಪ್ಪಾದ ಸಂಯಮ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜುಲೈ 4 ರ ಪತ್ರಿಕಾ ಪ್ರಕಟಣೆಯಲ್ಲಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

“ತಡರಾತ್ರಿಯ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್‌ಜಿಓದವರ ಗುರುತಿನ ಚೀಟಿಗಳನ್ನು ಸ್ಥಳೀಯ ನಿವಾಸಿಗಳು ಕೇಳಿದ್ದು, ನಂತರ ಎನ್‌ಜಿಒ ಮತ್ತು ಸ್ಥಳೀಯರ ನಡುವಿನ ವಾಗ್ವಾದ ತಾರಕ್ಕೇರಿದೆ. ಇದರ ನಂತರ, ಎನ್‌ಜಿಒ ಸದಸ್ಯರು ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡಲು ಅನುವಾದಾಗ 3 ಸ್ಥಳೀಯ ನಿವಾಸಿಗಳು ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಅವರಿಗೆ ಕೆಲವು ಸಣ್ಣಪುಟ್ಟ ಗಾಯಗಳಾಗಿವೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ರಿಷಿ ನಗರದಲ್ಲಿ ಈ ಘಟನೆ ನಡೆದಿರುವುದು ನಿಜವಾಗಿದ್ದರೂ, ಅದನ್ನು ಪ್ರಸಾರ ಮಾಡಿರುವ ಉದ್ದೇಶ ಮತ್ತು ನೀಡಿರುವ ಕಾರಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...