Homeಮುಖಪುಟಫ್ಯಾಕ್ಟ್ ಚೆಕ್: ಟ್ವಿಟ್ಟರ್‌ನಲ್ಲಿ ಗೆಹ್ಲೋಟ್‌ರನ್ನು ಟೀಕಿಸಿದ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್?

ಫ್ಯಾಕ್ಟ್ ಚೆಕ್: ಟ್ವಿಟ್ಟರ್‌ನಲ್ಲಿ ಗೆಹ್ಲೋಟ್‌ರನ್ನು ಟೀಕಿಸಿದ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್?

ದೊಡ್ಡ ಜಾದೂಗಾರರು ಸಹ ಪೈಲಟ್‌ ದೆಹಲಿಗೆ ತೆರಳಿದರೆ ಬೆವರುತ್ತಾರೆ ಎಂದು ವ್ಯಂಗ್ಯ ಮಾಡಲಾಗಿದೆ. ಈ ಟ್ವೀಟ್‌ಗೆ 16,000 ಕ್ಕಿಂತಲೂ ಹೆಚ್ಚಿನ ಲೈಕ್ಸ್ ಬಂದಿವೆ. 

- Advertisement -
- Advertisement -

ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಅವರ ಹೆಸರಿನಲ್ಲಿ ಮಾಡಿರುವ ನಕಲಿ ಟ್ವಿಟ್ಟರ್ ಖಾತೆಯ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಟ್ವೀಟ್‌ನಲ್ಲಿ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ವ್ಯಂಗ್ಯ ಮಾಡಲಾಗಿದೆ.

ಆದರೆ ಸುದ್ದಿ ಸಂಸ್ಥೆ ಐಎಎನ್‌ಎಸ್ ಇದನ್ನು ನಿಜವೆಂದು ನಂಬಿ ಸಾರಾ ಪೈಲಟ್ ಧಮಕಿ ಹಾಕಿರುವುದಾಗಿ ಸುದ್ದಿ ಮಾಡಿದೆ. ಇದರಿಂದ ಈ ಟ್ವೀಟ್ ಮತ್ತಷ್ಟು ವೈರಲ್ ಆಯಿತು. ಆದರೆ ವಾಸ್ತವದಲ್ಲಿ, ಸಾರಾ ಅಂತಹ ಯಾವುದೇ ವಿಷಯವನ್ನು ಟ್ವೀಟ್ ಮಾಡಿಲ್ಲ ಎಂದು ತಿಳಿದುಬಂದಿದೆ.

ಸಾರಾ ಪೈಲಟ್‌ ಹೆಸರಿನ ಟ್ವೀಟ್‌ನಲ್ಲಿ, “ಗೆಹ್ಲೋಟ್‌ನ ಹೆಸರನ್ನು ಉಲ್ಲೇಖಿಸದೇ ಅವರ ಮೇಲೆ ಆಕ್ರಮಣ ಮಾಡಲಾಗಿದೆ. ದೊಡ್ಡ ಜಾದೂಗಾರರು ಸಹ ಪೈಲಟ್‌ ದೆಹಲಿಗೆ ತೆರಳಿದರೆ ಬೆವರುತ್ತಾರೆ ಎಂದು ವ್ಯಂಗ್ಯ ಮಾಡಲಾಗಿದೆ. ಈ ಟ್ವೀಟ್‌ಗೆ 16,000 ಕ್ಕಿಂತಲೂ ಹೆಚ್ಚಿನ ಲೈಕ್ಸ್ ಬಂದಿವೆ.

ಮತ್ತೊಂದು ಟ್ವೀಟ್‌ನಲ್ಲಿಯೂ ಕೂಡ ಮುಖ್ಯಮಂತ್ರಿ ಗೆಹ್ಲೋಟ್‌ರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಇದನ್ನು ಆಧರಿಸಿ ಐಎಎನ್‌ಎಸ್ ಸುದ್ದಿ ಮಾಡಿದ ನಂತರ, ಔಟ್‌ಲುಕ್, ದಿ ಫ್ರಿ ಪ್ರೆಸ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿವೆ.

ಫ್ಯಾಕ್ಟ್ ಚೆಕ್: ಈ ಅಕೌಂಟ್‌ಗೆ ಹಲವು ಫಾಲೋವರ್ಸ್‌ ಇದ್ದಾಗಲೂ ಕೂಡ ವೈರಿಫೈಡ್ ಆಗಿಲ್ಲ. ಅದರ ಬಯೋದಲ್ಲಿ ಹಲವು ಪದಗಳನ್ನು ತಪ್ಪಾಗಿ ಬರೆಯಲಾಗಿದೆ. ಜೊತೆಗೆ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್ ಟ್ವಿಟ್ಟರ್‌ ಖಾತೆ ಹೊಂದಿಲ್ಲ ಎಂದು ತಿಳಿದುಬಂದಿದೆ.

ರಾಜಸ್ಥಾನ ಮೂಲಕ ಪತ್ರಕರ್ತೆ ತಬೀನಾಹ್ ಅಂಜುಮ್ ಎಂಬುವವರು ಇದು ಫೇಕ್ ಅಕೌಂಟ್ ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಸಾರಾ ಹೆಸರಿನ ನಕಲಿ ಖಾತೆ ಇದಾಗಿದೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: 30 ಶಾಸಕರ ಬೆಂಬಲವಿದೆ; ವಿಡಿಯೋ ಬಿಡುಗಡೆ ಮಾಡಿದ ಸಚಿನ್ ಪೈಲಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...