Homeಮುಖಪುಟಫ್ಯಾಕ್ಟ್ ಚೆಕ್: ಟ್ವಿಟ್ಟರ್‌ನಲ್ಲಿ ಗೆಹ್ಲೋಟ್‌ರನ್ನು ಟೀಕಿಸಿದ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್?

ಫ್ಯಾಕ್ಟ್ ಚೆಕ್: ಟ್ವಿಟ್ಟರ್‌ನಲ್ಲಿ ಗೆಹ್ಲೋಟ್‌ರನ್ನು ಟೀಕಿಸಿದ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್?

ದೊಡ್ಡ ಜಾದೂಗಾರರು ಸಹ ಪೈಲಟ್‌ ದೆಹಲಿಗೆ ತೆರಳಿದರೆ ಬೆವರುತ್ತಾರೆ ಎಂದು ವ್ಯಂಗ್ಯ ಮಾಡಲಾಗಿದೆ. ಈ ಟ್ವೀಟ್‌ಗೆ 16,000 ಕ್ಕಿಂತಲೂ ಹೆಚ್ಚಿನ ಲೈಕ್ಸ್ ಬಂದಿವೆ. 

- Advertisement -
- Advertisement -

ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಅವರ ಹೆಸರಿನಲ್ಲಿ ಮಾಡಿರುವ ನಕಲಿ ಟ್ವಿಟ್ಟರ್ ಖಾತೆಯ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಟ್ವೀಟ್‌ನಲ್ಲಿ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ವ್ಯಂಗ್ಯ ಮಾಡಲಾಗಿದೆ.

ಆದರೆ ಸುದ್ದಿ ಸಂಸ್ಥೆ ಐಎಎನ್‌ಎಸ್ ಇದನ್ನು ನಿಜವೆಂದು ನಂಬಿ ಸಾರಾ ಪೈಲಟ್ ಧಮಕಿ ಹಾಕಿರುವುದಾಗಿ ಸುದ್ದಿ ಮಾಡಿದೆ. ಇದರಿಂದ ಈ ಟ್ವೀಟ್ ಮತ್ತಷ್ಟು ವೈರಲ್ ಆಯಿತು. ಆದರೆ ವಾಸ್ತವದಲ್ಲಿ, ಸಾರಾ ಅಂತಹ ಯಾವುದೇ ವಿಷಯವನ್ನು ಟ್ವೀಟ್ ಮಾಡಿಲ್ಲ ಎಂದು ತಿಳಿದುಬಂದಿದೆ.

ಸಾರಾ ಪೈಲಟ್‌ ಹೆಸರಿನ ಟ್ವೀಟ್‌ನಲ್ಲಿ, “ಗೆಹ್ಲೋಟ್‌ನ ಹೆಸರನ್ನು ಉಲ್ಲೇಖಿಸದೇ ಅವರ ಮೇಲೆ ಆಕ್ರಮಣ ಮಾಡಲಾಗಿದೆ. ದೊಡ್ಡ ಜಾದೂಗಾರರು ಸಹ ಪೈಲಟ್‌ ದೆಹಲಿಗೆ ತೆರಳಿದರೆ ಬೆವರುತ್ತಾರೆ ಎಂದು ವ್ಯಂಗ್ಯ ಮಾಡಲಾಗಿದೆ. ಈ ಟ್ವೀಟ್‌ಗೆ 16,000 ಕ್ಕಿಂತಲೂ ಹೆಚ್ಚಿನ ಲೈಕ್ಸ್ ಬಂದಿವೆ.

ಮತ್ತೊಂದು ಟ್ವೀಟ್‌ನಲ್ಲಿಯೂ ಕೂಡ ಮುಖ್ಯಮಂತ್ರಿ ಗೆಹ್ಲೋಟ್‌ರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಇದನ್ನು ಆಧರಿಸಿ ಐಎಎನ್‌ಎಸ್ ಸುದ್ದಿ ಮಾಡಿದ ನಂತರ, ಔಟ್‌ಲುಕ್, ದಿ ಫ್ರಿ ಪ್ರೆಸ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿವೆ.

ಫ್ಯಾಕ್ಟ್ ಚೆಕ್: ಈ ಅಕೌಂಟ್‌ಗೆ ಹಲವು ಫಾಲೋವರ್ಸ್‌ ಇದ್ದಾಗಲೂ ಕೂಡ ವೈರಿಫೈಡ್ ಆಗಿಲ್ಲ. ಅದರ ಬಯೋದಲ್ಲಿ ಹಲವು ಪದಗಳನ್ನು ತಪ್ಪಾಗಿ ಬರೆಯಲಾಗಿದೆ. ಜೊತೆಗೆ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್ ಟ್ವಿಟ್ಟರ್‌ ಖಾತೆ ಹೊಂದಿಲ್ಲ ಎಂದು ತಿಳಿದುಬಂದಿದೆ.

ರಾಜಸ್ಥಾನ ಮೂಲಕ ಪತ್ರಕರ್ತೆ ತಬೀನಾಹ್ ಅಂಜುಮ್ ಎಂಬುವವರು ಇದು ಫೇಕ್ ಅಕೌಂಟ್ ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಸಾರಾ ಹೆಸರಿನ ನಕಲಿ ಖಾತೆ ಇದಾಗಿದೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: 30 ಶಾಸಕರ ಬೆಂಬಲವಿದೆ; ವಿಡಿಯೋ ಬಿಡುಗಡೆ ಮಾಡಿದ ಸಚಿನ್ ಪೈಲಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...