Homeಮುಖಪುಟಫ್ಯಾಕ್ಟ್ ಚೆಕ್: ಟ್ವಿಟ್ಟರ್‌ನಲ್ಲಿ ಗೆಹ್ಲೋಟ್‌ರನ್ನು ಟೀಕಿಸಿದ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್?

ಫ್ಯಾಕ್ಟ್ ಚೆಕ್: ಟ್ವಿಟ್ಟರ್‌ನಲ್ಲಿ ಗೆಹ್ಲೋಟ್‌ರನ್ನು ಟೀಕಿಸಿದ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್?

ದೊಡ್ಡ ಜಾದೂಗಾರರು ಸಹ ಪೈಲಟ್‌ ದೆಹಲಿಗೆ ತೆರಳಿದರೆ ಬೆವರುತ್ತಾರೆ ಎಂದು ವ್ಯಂಗ್ಯ ಮಾಡಲಾಗಿದೆ. ಈ ಟ್ವೀಟ್‌ಗೆ 16,000 ಕ್ಕಿಂತಲೂ ಹೆಚ್ಚಿನ ಲೈಕ್ಸ್ ಬಂದಿವೆ. 

- Advertisement -
- Advertisement -

ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಅವರ ಹೆಸರಿನಲ್ಲಿ ಮಾಡಿರುವ ನಕಲಿ ಟ್ವಿಟ್ಟರ್ ಖಾತೆಯ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಟ್ವೀಟ್‌ನಲ್ಲಿ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ವ್ಯಂಗ್ಯ ಮಾಡಲಾಗಿದೆ.

ಆದರೆ ಸುದ್ದಿ ಸಂಸ್ಥೆ ಐಎಎನ್‌ಎಸ್ ಇದನ್ನು ನಿಜವೆಂದು ನಂಬಿ ಸಾರಾ ಪೈಲಟ್ ಧಮಕಿ ಹಾಕಿರುವುದಾಗಿ ಸುದ್ದಿ ಮಾಡಿದೆ. ಇದರಿಂದ ಈ ಟ್ವೀಟ್ ಮತ್ತಷ್ಟು ವೈರಲ್ ಆಯಿತು. ಆದರೆ ವಾಸ್ತವದಲ್ಲಿ, ಸಾರಾ ಅಂತಹ ಯಾವುದೇ ವಿಷಯವನ್ನು ಟ್ವೀಟ್ ಮಾಡಿಲ್ಲ ಎಂದು ತಿಳಿದುಬಂದಿದೆ.

ಸಾರಾ ಪೈಲಟ್‌ ಹೆಸರಿನ ಟ್ವೀಟ್‌ನಲ್ಲಿ, “ಗೆಹ್ಲೋಟ್‌ನ ಹೆಸರನ್ನು ಉಲ್ಲೇಖಿಸದೇ ಅವರ ಮೇಲೆ ಆಕ್ರಮಣ ಮಾಡಲಾಗಿದೆ. ದೊಡ್ಡ ಜಾದೂಗಾರರು ಸಹ ಪೈಲಟ್‌ ದೆಹಲಿಗೆ ತೆರಳಿದರೆ ಬೆವರುತ್ತಾರೆ ಎಂದು ವ್ಯಂಗ್ಯ ಮಾಡಲಾಗಿದೆ. ಈ ಟ್ವೀಟ್‌ಗೆ 16,000 ಕ್ಕಿಂತಲೂ ಹೆಚ್ಚಿನ ಲೈಕ್ಸ್ ಬಂದಿವೆ.

ಮತ್ತೊಂದು ಟ್ವೀಟ್‌ನಲ್ಲಿಯೂ ಕೂಡ ಮುಖ್ಯಮಂತ್ರಿ ಗೆಹ್ಲೋಟ್‌ರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಇದನ್ನು ಆಧರಿಸಿ ಐಎಎನ್‌ಎಸ್ ಸುದ್ದಿ ಮಾಡಿದ ನಂತರ, ಔಟ್‌ಲುಕ್, ದಿ ಫ್ರಿ ಪ್ರೆಸ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿವೆ.

ಫ್ಯಾಕ್ಟ್ ಚೆಕ್: ಈ ಅಕೌಂಟ್‌ಗೆ ಹಲವು ಫಾಲೋವರ್ಸ್‌ ಇದ್ದಾಗಲೂ ಕೂಡ ವೈರಿಫೈಡ್ ಆಗಿಲ್ಲ. ಅದರ ಬಯೋದಲ್ಲಿ ಹಲವು ಪದಗಳನ್ನು ತಪ್ಪಾಗಿ ಬರೆಯಲಾಗಿದೆ. ಜೊತೆಗೆ ಸಚಿನ್ ಪೈಲಟ್ ಪತ್ನಿ ಸಾರಾ ಪೈಲಟ್ ಟ್ವಿಟ್ಟರ್‌ ಖಾತೆ ಹೊಂದಿಲ್ಲ ಎಂದು ತಿಳಿದುಬಂದಿದೆ.

ರಾಜಸ್ಥಾನ ಮೂಲಕ ಪತ್ರಕರ್ತೆ ತಬೀನಾಹ್ ಅಂಜುಮ್ ಎಂಬುವವರು ಇದು ಫೇಕ್ ಅಕೌಂಟ್ ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಸಾರಾ ಹೆಸರಿನ ನಕಲಿ ಖಾತೆ ಇದಾಗಿದೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: 30 ಶಾಸಕರ ಬೆಂಬಲವಿದೆ; ವಿಡಿಯೋ ಬಿಡುಗಡೆ ಮಾಡಿದ ಸಚಿನ್ ಪೈಲಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...