Homeಫ್ಯಾಕ್ಟ್‌ಚೆಕ್FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

- Advertisement -
- Advertisement -

ಸಾವರ್ಕರ್ ಕುರಿತ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಕಳೆದ ಸೆಪ್ಟೆಂಬರ್ 24ರಂದು ಎಲ್ಲೆಡೆ ಸುದ್ದಿಯಾಗಿತ್ತು. ಭಾರತದಿಂದ ‘ಲಾಪತಾ ಲೇಡಿಸ್’ ಸಿನಿಮಾ ಆಸ್ಕರ್‌ಗೆ ಸಲ್ಲಿಕೆಯಾಗಿದೆ ಎಂದ ಮರುದಿನವೇ ಸಾರ್ವಕರ್ ಸಿನಿಮಾ ಕೂಡ ಪ್ರವೇಶ ಪಡೆದಿದೆ ಎಂದು ವರದಿಯಾಗಿತ್ತು.

ಸಾವರ್ಕರ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾದ ಸಂದೀಪ್ ಸಿಂಗ್ ಸ್ವತಃ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ “ನಮ್ಮ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಅನ್ನು ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಫಿಲ್ಮ್‌ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್ಐ) ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು. ಇದೊಂದು ಅಧ್ಯತ್ಭುತ ಪಯಣ. ನಮ್ಮನ್ನು ಪ್ರೋತ್ಸಾಹಿಸಿದ ಸರ್ವರಿಗೂ ಅಭಾರಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದರು.

ಸಂದೀಪ್ ಸಿಂಗ್ ಅವರ ಪೋಸ್ಟ್ ಆಧರಿಸಿ ನೂರಾರು ಮಾಧ್ಯಮಗಳು ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಸುದ್ದಿ ಪ್ರಕಟಿಸಿತ್ತು. ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ಸಾವರ್ಕರ್ ಚಿತ್ರಂಡಕ್ಕೆ ಅಭಿನಂದನೆ ಹೇಳಿ ಪೋಸ್ಟ್ ಹಾಕಿದ್ದರು.

ಆದರೆ, ಮರುದಿನ ಸಾರ್ವಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ಲ. ಸಿನಿಮಾ ತಂಡ ಸುಳ್ಳು ಹೇಳಿಕೆ ಕೊಟ್ಟು ನಗೆಪಾಟಲಿಗೀಡಾಗಿದೆ ಎಂದು ವರದಿಯಾಗಿತ್ತು. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಹಾಗಾದರೆ, ಸಾರ್ವಕರ್ ಕುರಿತ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂಬುವುದು ಸುಳ್ಳಾ? ಚಿತ್ರತಂಡ ಇಡೀ ದೇಶದ ಜನತೆಗೆ ಸುಳ್ಳು ಹೇಳಿತಾ? ಎಂಬವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಅಸಲಿಗೆ ಸಾವರ್ಕರ್ ಕುರಿತ ಸಿನಿಮಾ ಅಧಿಕೃತವಾಗಿ ಭಾರತದಿಂದ ಆಸ್ಕರ್‌ಗೆ ಸಲ್ಲಿಕೆಯಾಗಿಲ್ಲ. ಒಂದು ದೇಶವನ್ನು ಪ್ರತಿನಿಧಿಸಿ ಆಸ್ಕರ್‌ಗೆ ಸಿನಿಮಾ ಕಳಿಸಬೇಕಾದರೆ, ಅದನ್ನು ಆಯಾ ದೇಶದ ಉನ್ನತ ಮಟ್ಟದ ಸಮಿತಿ ಆಯ್ಕೆ ಮಾಡುತ್ತದೆ. ಭಾರತದಲ್ಲಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಆಯ್ಕೆ ಮಾಡುತ್ತದೆ. ಒಂದು ದೇಶದಿಂದ ಅಧಿಕೃತ ಪ್ರವೇಶಕ್ಕೆ ಒಂದು ಸಿನಿಮಾಗೆ ಮಾತ್ರ ಅವಕಾಶವಿರುತ್ತದೆ. ಈ ಬಾರಿ ಭಾರತದಿಂದ ‘ಲಾಪತಾ ಲೇಡಿಸ್‌’ ಸಿನಿಮಾವನ್ನು ಕಳಿಸಿಕೊಡಲಾಗಿದೆ.

ವೈಯಕ್ತಿಕವಾಗಿ ಅಥವಾ ಸ್ವತಂತ್ರವಾಗಿ ಯಾವುದೇ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಆಸ್ಕರ್‌ಗೆ ಸಲ್ಲಿಕೆ ಮಾಡಬಹುದು. ಈ ರೀತಿ ಸಾವರ್ಕರ್ ಸಿನಿಮಾವನ್ನು ಸಲ್ಲಿಕೆ ಮಾಡಲಾಗಿದೆಯೇ? ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೋಟ್ಟಕ್ಕರ “ಎಫ್‌ಫ್‌ಐ ಸಾವರ್ಕರ್ ಕುರಿತ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಲ್ಲ. ಸಾವರ್ಕರ್ ಸಿನಿಮಾ ನಿರ್ಮಾಪಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡುತ್ತೇವೆ.. ಸ್ವತಂತ್ರವಾಗಿ ಕಳಿಸಿಕೊಡುವ ಸಿನಿಮಾಗಳಿಗೂ ಎಫ್‌ಎಫ್‌ಐಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಸಿನಿಮಾ ನಿರ್ಮಾಪಕ ಸಂದೀಪ್ ಸಿಂಗ್ ತನ್ನ ಪೋಸ್ಟ್‌ನಲ್ಲಿ ತಮ್ಮ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಕೊಡಲು ಆಯ್ಕೆ ಮಾಡಿದ್ದಕ್ಕೆ ಎಫ್‌ಎಫ್‌ಐಗೆ ಧನ್ಯವಾದ ಎಂಬಂತೆ ಬರೆದುಕೊಂಡಿದ್ದಾರೆ. ಇದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

29 ಸಿನಿಮಾಗಳಲ್ಲಿ ‘ಲಾಪತಾ ಲೇಡಿಸ್’ ಆಯ್ಕೆ 

ಭಾರತದಿಂದ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಎಫ್‌ಎಫ್‌ಐ ಆಯ್ಕೆ ಮಾಡುತ್ತದೆ. ಈ ಆಯ್ಕೆಗೆ ದೇಶದಲ್ಲಿ ಯಾರು ಬೇಕಾದರೂ ನಿಯಮಗಳಿಗೆ ಅನುಸಾರವಾಗಿರುವ ಯಾವುದೇ ಸಿನಿಮಾಗಳನ್ನು ಕಳಿಸಿಕೊಡಬಹುದು. ಈ ವರ್ಷ ಒಟ್ಟು 29 ಸಿನಿಮಾಗಳು ಎಫ್‌ಎಫ್‌ಐಗೆ ಸಲ್ಲಿಕೆಯಾಗಿತ್ತು.

ಅವುಗಳಲ್ಲಿ ಪಾಯಲ್ ಕಪಾಡಿಯಾ ಅವರ ಕೇನ್ಸ್ ಪ್ರಶಸ್ತಿ ವಿಜೇತ ಆಲ್ ವಿ ಇಮ್ಯಾಜಿನ್ ಆಸ್ ಲೈಟ್, ಆನಂದ್ ಎಕ್ರಾಶಿ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಆಟಂ, ಕ್ರೀಡಾ ಡ್ರಾಮ ಮೈದಾನ್, ಚಂದು ಚಾಂಪಿಯನ್, ಆರ್ಟಿಕಲ್ 370, ಶ್ರೀಕಾಂತ್, ಸ್ಯಾಮ್ ಬಹದ್ದೂರ್, ಕಿಲ್, ಗುಡ್ ಲಕ್, ಅನಿಮಲ್, ಕಲ್ಕಿ 2898 ಎಡಿ, ತಂಗಲಾನ್, ವಾಝೈ, ಲಾಪತಾ ಲೇಡೀಸ್, ಸ್ವಾತಂತ್ರ್ಯ ವೀರ್ ಸಾವರ್ಕರ್. ಕೊಟ್ಟುಕ್ಕಲಿ, ಜಮಾ, ಜಿಗರ್ತಂಡ ಡಬಲ್ ಎಕ್ಸ್, ಉಲ್ಲೋಝುಕ್ಕು, ಅಭಾ, ಘರತ್ ಗಣಪತಿ, ಸ್ವರ್ಗಂಧರ್ವ ಸುಧೀರ್ ಫಡ್ಕೆ, ಮಹಾರಾಜ, ಮಂಗಳವಾರಂ ಮತ್ತು ಹನು-ಮಾನ್ ಒಳಗೊಂಡಿತ್ತು. ಈ ಪೈಕಿ ಲಾಪತಾ ಲೇಡಿಸ್ ಅನ್ನು ಎಫ್‌ಎಫ್‌ಐ ಆಯ್ಕೆ ಮಾಡಿದೆ.

ಮುಂದಿನ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 2, 2025ರಂದು ಭಾನುವಾರ ಸಂಜೆ 5:30ರಿಂದ ರಾತ್ರಿ 8:30ರ ನಡುವೆ ಯುಎಸ್‌ನ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ ನಗರದ ಹಾಲಿವುಡ್ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ : FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...