Homeಫ್ಯಾಕ್ಟ್‌ಚೆಕ್FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

- Advertisement -
- Advertisement -

ಸಾವರ್ಕರ್ ಕುರಿತ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಕಳೆದ ಸೆಪ್ಟೆಂಬರ್ 24ರಂದು ಎಲ್ಲೆಡೆ ಸುದ್ದಿಯಾಗಿತ್ತು. ಭಾರತದಿಂದ ‘ಲಾಪತಾ ಲೇಡಿಸ್’ ಸಿನಿಮಾ ಆಸ್ಕರ್‌ಗೆ ಸಲ್ಲಿಕೆಯಾಗಿದೆ ಎಂದ ಮರುದಿನವೇ ಸಾರ್ವಕರ್ ಸಿನಿಮಾ ಕೂಡ ಪ್ರವೇಶ ಪಡೆದಿದೆ ಎಂದು ವರದಿಯಾಗಿತ್ತು.

ಸಾವರ್ಕರ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾದ ಸಂದೀಪ್ ಸಿಂಗ್ ಸ್ವತಃ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ “ನಮ್ಮ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಅನ್ನು ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಫಿಲ್ಮ್‌ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್ಐ) ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು. ಇದೊಂದು ಅಧ್ಯತ್ಭುತ ಪಯಣ. ನಮ್ಮನ್ನು ಪ್ರೋತ್ಸಾಹಿಸಿದ ಸರ್ವರಿಗೂ ಅಭಾರಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದರು.

ಸಂದೀಪ್ ಸಿಂಗ್ ಅವರ ಪೋಸ್ಟ್ ಆಧರಿಸಿ ನೂರಾರು ಮಾಧ್ಯಮಗಳು ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಸುದ್ದಿ ಪ್ರಕಟಿಸಿತ್ತು. ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ಸಾವರ್ಕರ್ ಚಿತ್ರಂಡಕ್ಕೆ ಅಭಿನಂದನೆ ಹೇಳಿ ಪೋಸ್ಟ್ ಹಾಕಿದ್ದರು.

ಆದರೆ, ಮರುದಿನ ಸಾರ್ವಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ಲ. ಸಿನಿಮಾ ತಂಡ ಸುಳ್ಳು ಹೇಳಿಕೆ ಕೊಟ್ಟು ನಗೆಪಾಟಲಿಗೀಡಾಗಿದೆ ಎಂದು ವರದಿಯಾಗಿತ್ತು. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಹಾಗಾದರೆ, ಸಾರ್ವಕರ್ ಕುರಿತ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂಬುವುದು ಸುಳ್ಳಾ? ಚಿತ್ರತಂಡ ಇಡೀ ದೇಶದ ಜನತೆಗೆ ಸುಳ್ಳು ಹೇಳಿತಾ? ಎಂಬವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಅಸಲಿಗೆ ಸಾವರ್ಕರ್ ಕುರಿತ ಸಿನಿಮಾ ಅಧಿಕೃತವಾಗಿ ಭಾರತದಿಂದ ಆಸ್ಕರ್‌ಗೆ ಸಲ್ಲಿಕೆಯಾಗಿಲ್ಲ. ಒಂದು ದೇಶವನ್ನು ಪ್ರತಿನಿಧಿಸಿ ಆಸ್ಕರ್‌ಗೆ ಸಿನಿಮಾ ಕಳಿಸಬೇಕಾದರೆ, ಅದನ್ನು ಆಯಾ ದೇಶದ ಉನ್ನತ ಮಟ್ಟದ ಸಮಿತಿ ಆಯ್ಕೆ ಮಾಡುತ್ತದೆ. ಭಾರತದಲ್ಲಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಆಯ್ಕೆ ಮಾಡುತ್ತದೆ. ಒಂದು ದೇಶದಿಂದ ಅಧಿಕೃತ ಪ್ರವೇಶಕ್ಕೆ ಒಂದು ಸಿನಿಮಾಗೆ ಮಾತ್ರ ಅವಕಾಶವಿರುತ್ತದೆ. ಈ ಬಾರಿ ಭಾರತದಿಂದ ‘ಲಾಪತಾ ಲೇಡಿಸ್‌’ ಸಿನಿಮಾವನ್ನು ಕಳಿಸಿಕೊಡಲಾಗಿದೆ.

ವೈಯಕ್ತಿಕವಾಗಿ ಅಥವಾ ಸ್ವತಂತ್ರವಾಗಿ ಯಾವುದೇ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಆಸ್ಕರ್‌ಗೆ ಸಲ್ಲಿಕೆ ಮಾಡಬಹುದು. ಈ ರೀತಿ ಸಾವರ್ಕರ್ ಸಿನಿಮಾವನ್ನು ಸಲ್ಲಿಕೆ ಮಾಡಲಾಗಿದೆಯೇ? ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೋಟ್ಟಕ್ಕರ “ಎಫ್‌ಫ್‌ಐ ಸಾವರ್ಕರ್ ಕುರಿತ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಲ್ಲ. ಸಾವರ್ಕರ್ ಸಿನಿಮಾ ನಿರ್ಮಾಪಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡುತ್ತೇವೆ.. ಸ್ವತಂತ್ರವಾಗಿ ಕಳಿಸಿಕೊಡುವ ಸಿನಿಮಾಗಳಿಗೂ ಎಫ್‌ಎಫ್‌ಐಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಸಿನಿಮಾ ನಿರ್ಮಾಪಕ ಸಂದೀಪ್ ಸಿಂಗ್ ತನ್ನ ಪೋಸ್ಟ್‌ನಲ್ಲಿ ತಮ್ಮ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಕೊಡಲು ಆಯ್ಕೆ ಮಾಡಿದ್ದಕ್ಕೆ ಎಫ್‌ಎಫ್‌ಐಗೆ ಧನ್ಯವಾದ ಎಂಬಂತೆ ಬರೆದುಕೊಂಡಿದ್ದಾರೆ. ಇದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

29 ಸಿನಿಮಾಗಳಲ್ಲಿ ‘ಲಾಪತಾ ಲೇಡಿಸ್’ ಆಯ್ಕೆ 

ಭಾರತದಿಂದ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಎಫ್‌ಎಫ್‌ಐ ಆಯ್ಕೆ ಮಾಡುತ್ತದೆ. ಈ ಆಯ್ಕೆಗೆ ದೇಶದಲ್ಲಿ ಯಾರು ಬೇಕಾದರೂ ನಿಯಮಗಳಿಗೆ ಅನುಸಾರವಾಗಿರುವ ಯಾವುದೇ ಸಿನಿಮಾಗಳನ್ನು ಕಳಿಸಿಕೊಡಬಹುದು. ಈ ವರ್ಷ ಒಟ್ಟು 29 ಸಿನಿಮಾಗಳು ಎಫ್‌ಎಫ್‌ಐಗೆ ಸಲ್ಲಿಕೆಯಾಗಿತ್ತು.

ಅವುಗಳಲ್ಲಿ ಪಾಯಲ್ ಕಪಾಡಿಯಾ ಅವರ ಕೇನ್ಸ್ ಪ್ರಶಸ್ತಿ ವಿಜೇತ ಆಲ್ ವಿ ಇಮ್ಯಾಜಿನ್ ಆಸ್ ಲೈಟ್, ಆನಂದ್ ಎಕ್ರಾಶಿ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಆಟಂ, ಕ್ರೀಡಾ ಡ್ರಾಮ ಮೈದಾನ್, ಚಂದು ಚಾಂಪಿಯನ್, ಆರ್ಟಿಕಲ್ 370, ಶ್ರೀಕಾಂತ್, ಸ್ಯಾಮ್ ಬಹದ್ದೂರ್, ಕಿಲ್, ಗುಡ್ ಲಕ್, ಅನಿಮಲ್, ಕಲ್ಕಿ 2898 ಎಡಿ, ತಂಗಲಾನ್, ವಾಝೈ, ಲಾಪತಾ ಲೇಡೀಸ್, ಸ್ವಾತಂತ್ರ್ಯ ವೀರ್ ಸಾವರ್ಕರ್. ಕೊಟ್ಟುಕ್ಕಲಿ, ಜಮಾ, ಜಿಗರ್ತಂಡ ಡಬಲ್ ಎಕ್ಸ್, ಉಲ್ಲೋಝುಕ್ಕು, ಅಭಾ, ಘರತ್ ಗಣಪತಿ, ಸ್ವರ್ಗಂಧರ್ವ ಸುಧೀರ್ ಫಡ್ಕೆ, ಮಹಾರಾಜ, ಮಂಗಳವಾರಂ ಮತ್ತು ಹನು-ಮಾನ್ ಒಳಗೊಂಡಿತ್ತು. ಈ ಪೈಕಿ ಲಾಪತಾ ಲೇಡಿಸ್ ಅನ್ನು ಎಫ್‌ಎಫ್‌ಐ ಆಯ್ಕೆ ಮಾಡಿದೆ.

ಮುಂದಿನ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 2, 2025ರಂದು ಭಾನುವಾರ ಸಂಜೆ 5:30ರಿಂದ ರಾತ್ರಿ 8:30ರ ನಡುವೆ ಯುಎಸ್‌ನ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ ನಗರದ ಹಾಲಿವುಡ್ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ : FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...