Homeಫ್ಯಾಕ್ಟ್‌ಚೆಕ್FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

- Advertisement -
- Advertisement -

ಸಾವರ್ಕರ್ ಕುರಿತ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಕಳೆದ ಸೆಪ್ಟೆಂಬರ್ 24ರಂದು ಎಲ್ಲೆಡೆ ಸುದ್ದಿಯಾಗಿತ್ತು. ಭಾರತದಿಂದ ‘ಲಾಪತಾ ಲೇಡಿಸ್’ ಸಿನಿಮಾ ಆಸ್ಕರ್‌ಗೆ ಸಲ್ಲಿಕೆಯಾಗಿದೆ ಎಂದ ಮರುದಿನವೇ ಸಾರ್ವಕರ್ ಸಿನಿಮಾ ಕೂಡ ಪ್ರವೇಶ ಪಡೆದಿದೆ ಎಂದು ವರದಿಯಾಗಿತ್ತು.

ಸಾವರ್ಕರ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾದ ಸಂದೀಪ್ ಸಿಂಗ್ ಸ್ವತಃ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ “ನಮ್ಮ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಅನ್ನು ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಫಿಲ್ಮ್‌ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್ಐ) ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು. ಇದೊಂದು ಅಧ್ಯತ್ಭುತ ಪಯಣ. ನಮ್ಮನ್ನು ಪ್ರೋತ್ಸಾಹಿಸಿದ ಸರ್ವರಿಗೂ ಅಭಾರಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದರು.

ಸಂದೀಪ್ ಸಿಂಗ್ ಅವರ ಪೋಸ್ಟ್ ಆಧರಿಸಿ ನೂರಾರು ಮಾಧ್ಯಮಗಳು ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಸುದ್ದಿ ಪ್ರಕಟಿಸಿತ್ತು. ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ಸಾವರ್ಕರ್ ಚಿತ್ರಂಡಕ್ಕೆ ಅಭಿನಂದನೆ ಹೇಳಿ ಪೋಸ್ಟ್ ಹಾಕಿದ್ದರು.

ಆದರೆ, ಮರುದಿನ ಸಾರ್ವಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ಲ. ಸಿನಿಮಾ ತಂಡ ಸುಳ್ಳು ಹೇಳಿಕೆ ಕೊಟ್ಟು ನಗೆಪಾಟಲಿಗೀಡಾಗಿದೆ ಎಂದು ವರದಿಯಾಗಿತ್ತು. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಹಾಗಾದರೆ, ಸಾರ್ವಕರ್ ಕುರಿತ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂಬುವುದು ಸುಳ್ಳಾ? ಚಿತ್ರತಂಡ ಇಡೀ ದೇಶದ ಜನತೆಗೆ ಸುಳ್ಳು ಹೇಳಿತಾ? ಎಂಬವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಅಸಲಿಗೆ ಸಾವರ್ಕರ್ ಕುರಿತ ಸಿನಿಮಾ ಅಧಿಕೃತವಾಗಿ ಭಾರತದಿಂದ ಆಸ್ಕರ್‌ಗೆ ಸಲ್ಲಿಕೆಯಾಗಿಲ್ಲ. ಒಂದು ದೇಶವನ್ನು ಪ್ರತಿನಿಧಿಸಿ ಆಸ್ಕರ್‌ಗೆ ಸಿನಿಮಾ ಕಳಿಸಬೇಕಾದರೆ, ಅದನ್ನು ಆಯಾ ದೇಶದ ಉನ್ನತ ಮಟ್ಟದ ಸಮಿತಿ ಆಯ್ಕೆ ಮಾಡುತ್ತದೆ. ಭಾರತದಲ್ಲಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಆಯ್ಕೆ ಮಾಡುತ್ತದೆ. ಒಂದು ದೇಶದಿಂದ ಅಧಿಕೃತ ಪ್ರವೇಶಕ್ಕೆ ಒಂದು ಸಿನಿಮಾಗೆ ಮಾತ್ರ ಅವಕಾಶವಿರುತ್ತದೆ. ಈ ಬಾರಿ ಭಾರತದಿಂದ ‘ಲಾಪತಾ ಲೇಡಿಸ್‌’ ಸಿನಿಮಾವನ್ನು ಕಳಿಸಿಕೊಡಲಾಗಿದೆ.

ವೈಯಕ್ತಿಕವಾಗಿ ಅಥವಾ ಸ್ವತಂತ್ರವಾಗಿ ಯಾವುದೇ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಆಸ್ಕರ್‌ಗೆ ಸಲ್ಲಿಕೆ ಮಾಡಬಹುದು. ಈ ರೀತಿ ಸಾವರ್ಕರ್ ಸಿನಿಮಾವನ್ನು ಸಲ್ಲಿಕೆ ಮಾಡಲಾಗಿದೆಯೇ? ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೋಟ್ಟಕ್ಕರ “ಎಫ್‌ಫ್‌ಐ ಸಾವರ್ಕರ್ ಕುರಿತ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಲ್ಲ. ಸಾವರ್ಕರ್ ಸಿನಿಮಾ ನಿರ್ಮಾಪಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡುತ್ತೇವೆ.. ಸ್ವತಂತ್ರವಾಗಿ ಕಳಿಸಿಕೊಡುವ ಸಿನಿಮಾಗಳಿಗೂ ಎಫ್‌ಎಫ್‌ಐಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಸಿನಿಮಾ ನಿರ್ಮಾಪಕ ಸಂದೀಪ್ ಸಿಂಗ್ ತನ್ನ ಪೋಸ್ಟ್‌ನಲ್ಲಿ ತಮ್ಮ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಕೊಡಲು ಆಯ್ಕೆ ಮಾಡಿದ್ದಕ್ಕೆ ಎಫ್‌ಎಫ್‌ಐಗೆ ಧನ್ಯವಾದ ಎಂಬಂತೆ ಬರೆದುಕೊಂಡಿದ್ದಾರೆ. ಇದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

29 ಸಿನಿಮಾಗಳಲ್ಲಿ ‘ಲಾಪತಾ ಲೇಡಿಸ್’ ಆಯ್ಕೆ 

ಭಾರತದಿಂದ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಎಫ್‌ಎಫ್‌ಐ ಆಯ್ಕೆ ಮಾಡುತ್ತದೆ. ಈ ಆಯ್ಕೆಗೆ ದೇಶದಲ್ಲಿ ಯಾರು ಬೇಕಾದರೂ ನಿಯಮಗಳಿಗೆ ಅನುಸಾರವಾಗಿರುವ ಯಾವುದೇ ಸಿನಿಮಾಗಳನ್ನು ಕಳಿಸಿಕೊಡಬಹುದು. ಈ ವರ್ಷ ಒಟ್ಟು 29 ಸಿನಿಮಾಗಳು ಎಫ್‌ಎಫ್‌ಐಗೆ ಸಲ್ಲಿಕೆಯಾಗಿತ್ತು.

ಅವುಗಳಲ್ಲಿ ಪಾಯಲ್ ಕಪಾಡಿಯಾ ಅವರ ಕೇನ್ಸ್ ಪ್ರಶಸ್ತಿ ವಿಜೇತ ಆಲ್ ವಿ ಇಮ್ಯಾಜಿನ್ ಆಸ್ ಲೈಟ್, ಆನಂದ್ ಎಕ್ರಾಶಿ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಆಟಂ, ಕ್ರೀಡಾ ಡ್ರಾಮ ಮೈದಾನ್, ಚಂದು ಚಾಂಪಿಯನ್, ಆರ್ಟಿಕಲ್ 370, ಶ್ರೀಕಾಂತ್, ಸ್ಯಾಮ್ ಬಹದ್ದೂರ್, ಕಿಲ್, ಗುಡ್ ಲಕ್, ಅನಿಮಲ್, ಕಲ್ಕಿ 2898 ಎಡಿ, ತಂಗಲಾನ್, ವಾಝೈ, ಲಾಪತಾ ಲೇಡೀಸ್, ಸ್ವಾತಂತ್ರ್ಯ ವೀರ್ ಸಾವರ್ಕರ್. ಕೊಟ್ಟುಕ್ಕಲಿ, ಜಮಾ, ಜಿಗರ್ತಂಡ ಡಬಲ್ ಎಕ್ಸ್, ಉಲ್ಲೋಝುಕ್ಕು, ಅಭಾ, ಘರತ್ ಗಣಪತಿ, ಸ್ವರ್ಗಂಧರ್ವ ಸುಧೀರ್ ಫಡ್ಕೆ, ಮಹಾರಾಜ, ಮಂಗಳವಾರಂ ಮತ್ತು ಹನು-ಮಾನ್ ಒಳಗೊಂಡಿತ್ತು. ಈ ಪೈಕಿ ಲಾಪತಾ ಲೇಡಿಸ್ ಅನ್ನು ಎಫ್‌ಎಫ್‌ಐ ಆಯ್ಕೆ ಮಾಡಿದೆ.

ಮುಂದಿನ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 2, 2025ರಂದು ಭಾನುವಾರ ಸಂಜೆ 5:30ರಿಂದ ರಾತ್ರಿ 8:30ರ ನಡುವೆ ಯುಎಸ್‌ನ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ ನಗರದ ಹಾಲಿವುಡ್ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ : FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...