Homeಫ್ಯಾಕ್ಟ್‌ಚೆಕ್FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

- Advertisement -
- Advertisement -

ಸಾವರ್ಕರ್ ಕುರಿತ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಕಳೆದ ಸೆಪ್ಟೆಂಬರ್ 24ರಂದು ಎಲ್ಲೆಡೆ ಸುದ್ದಿಯಾಗಿತ್ತು. ಭಾರತದಿಂದ ‘ಲಾಪತಾ ಲೇಡಿಸ್’ ಸಿನಿಮಾ ಆಸ್ಕರ್‌ಗೆ ಸಲ್ಲಿಕೆಯಾಗಿದೆ ಎಂದ ಮರುದಿನವೇ ಸಾರ್ವಕರ್ ಸಿನಿಮಾ ಕೂಡ ಪ್ರವೇಶ ಪಡೆದಿದೆ ಎಂದು ವರದಿಯಾಗಿತ್ತು.

ಸಾವರ್ಕರ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾದ ಸಂದೀಪ್ ಸಿಂಗ್ ಸ್ವತಃ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ “ನಮ್ಮ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಅನ್ನು ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಫಿಲ್ಮ್‌ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್ಐ) ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು. ಇದೊಂದು ಅಧ್ಯತ್ಭುತ ಪಯಣ. ನಮ್ಮನ್ನು ಪ್ರೋತ್ಸಾಹಿಸಿದ ಸರ್ವರಿಗೂ ಅಭಾರಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದರು.

ಸಂದೀಪ್ ಸಿಂಗ್ ಅವರ ಪೋಸ್ಟ್ ಆಧರಿಸಿ ನೂರಾರು ಮಾಧ್ಯಮಗಳು ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಸುದ್ದಿ ಪ್ರಕಟಿಸಿತ್ತು. ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ಸಾವರ್ಕರ್ ಚಿತ್ರಂಡಕ್ಕೆ ಅಭಿನಂದನೆ ಹೇಳಿ ಪೋಸ್ಟ್ ಹಾಕಿದ್ದರು.

ಆದರೆ, ಮರುದಿನ ಸಾರ್ವಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ಲ. ಸಿನಿಮಾ ತಂಡ ಸುಳ್ಳು ಹೇಳಿಕೆ ಕೊಟ್ಟು ನಗೆಪಾಟಲಿಗೀಡಾಗಿದೆ ಎಂದು ವರದಿಯಾಗಿತ್ತು. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಹಾಗಾದರೆ, ಸಾರ್ವಕರ್ ಕುರಿತ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂಬುವುದು ಸುಳ್ಳಾ? ಚಿತ್ರತಂಡ ಇಡೀ ದೇಶದ ಜನತೆಗೆ ಸುಳ್ಳು ಹೇಳಿತಾ? ಎಂಬವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಅಸಲಿಗೆ ಸಾವರ್ಕರ್ ಕುರಿತ ಸಿನಿಮಾ ಅಧಿಕೃತವಾಗಿ ಭಾರತದಿಂದ ಆಸ್ಕರ್‌ಗೆ ಸಲ್ಲಿಕೆಯಾಗಿಲ್ಲ. ಒಂದು ದೇಶವನ್ನು ಪ್ರತಿನಿಧಿಸಿ ಆಸ್ಕರ್‌ಗೆ ಸಿನಿಮಾ ಕಳಿಸಬೇಕಾದರೆ, ಅದನ್ನು ಆಯಾ ದೇಶದ ಉನ್ನತ ಮಟ್ಟದ ಸಮಿತಿ ಆಯ್ಕೆ ಮಾಡುತ್ತದೆ. ಭಾರತದಲ್ಲಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಆಯ್ಕೆ ಮಾಡುತ್ತದೆ. ಒಂದು ದೇಶದಿಂದ ಅಧಿಕೃತ ಪ್ರವೇಶಕ್ಕೆ ಒಂದು ಸಿನಿಮಾಗೆ ಮಾತ್ರ ಅವಕಾಶವಿರುತ್ತದೆ. ಈ ಬಾರಿ ಭಾರತದಿಂದ ‘ಲಾಪತಾ ಲೇಡಿಸ್‌’ ಸಿನಿಮಾವನ್ನು ಕಳಿಸಿಕೊಡಲಾಗಿದೆ.

ವೈಯಕ್ತಿಕವಾಗಿ ಅಥವಾ ಸ್ವತಂತ್ರವಾಗಿ ಯಾವುದೇ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಆಸ್ಕರ್‌ಗೆ ಸಲ್ಲಿಕೆ ಮಾಡಬಹುದು. ಈ ರೀತಿ ಸಾವರ್ಕರ್ ಸಿನಿಮಾವನ್ನು ಸಲ್ಲಿಕೆ ಮಾಡಲಾಗಿದೆಯೇ? ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೋಟ್ಟಕ್ಕರ “ಎಫ್‌ಫ್‌ಐ ಸಾವರ್ಕರ್ ಕುರಿತ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಲ್ಲ. ಸಾವರ್ಕರ್ ಸಿನಿಮಾ ನಿರ್ಮಾಪಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡುತ್ತೇವೆ.. ಸ್ವತಂತ್ರವಾಗಿ ಕಳಿಸಿಕೊಡುವ ಸಿನಿಮಾಗಳಿಗೂ ಎಫ್‌ಎಫ್‌ಐಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಸಿನಿಮಾ ನಿರ್ಮಾಪಕ ಸಂದೀಪ್ ಸಿಂಗ್ ತನ್ನ ಪೋಸ್ಟ್‌ನಲ್ಲಿ ತಮ್ಮ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಕೊಡಲು ಆಯ್ಕೆ ಮಾಡಿದ್ದಕ್ಕೆ ಎಫ್‌ಎಫ್‌ಐಗೆ ಧನ್ಯವಾದ ಎಂಬಂತೆ ಬರೆದುಕೊಂಡಿದ್ದಾರೆ. ಇದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

29 ಸಿನಿಮಾಗಳಲ್ಲಿ ‘ಲಾಪತಾ ಲೇಡಿಸ್’ ಆಯ್ಕೆ 

ಭಾರತದಿಂದ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಎಫ್‌ಎಫ್‌ಐ ಆಯ್ಕೆ ಮಾಡುತ್ತದೆ. ಈ ಆಯ್ಕೆಗೆ ದೇಶದಲ್ಲಿ ಯಾರು ಬೇಕಾದರೂ ನಿಯಮಗಳಿಗೆ ಅನುಸಾರವಾಗಿರುವ ಯಾವುದೇ ಸಿನಿಮಾಗಳನ್ನು ಕಳಿಸಿಕೊಡಬಹುದು. ಈ ವರ್ಷ ಒಟ್ಟು 29 ಸಿನಿಮಾಗಳು ಎಫ್‌ಎಫ್‌ಐಗೆ ಸಲ್ಲಿಕೆಯಾಗಿತ್ತು.

ಅವುಗಳಲ್ಲಿ ಪಾಯಲ್ ಕಪಾಡಿಯಾ ಅವರ ಕೇನ್ಸ್ ಪ್ರಶಸ್ತಿ ವಿಜೇತ ಆಲ್ ವಿ ಇಮ್ಯಾಜಿನ್ ಆಸ್ ಲೈಟ್, ಆನಂದ್ ಎಕ್ರಾಶಿ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಆಟಂ, ಕ್ರೀಡಾ ಡ್ರಾಮ ಮೈದಾನ್, ಚಂದು ಚಾಂಪಿಯನ್, ಆರ್ಟಿಕಲ್ 370, ಶ್ರೀಕಾಂತ್, ಸ್ಯಾಮ್ ಬಹದ್ದೂರ್, ಕಿಲ್, ಗುಡ್ ಲಕ್, ಅನಿಮಲ್, ಕಲ್ಕಿ 2898 ಎಡಿ, ತಂಗಲಾನ್, ವಾಝೈ, ಲಾಪತಾ ಲೇಡೀಸ್, ಸ್ವಾತಂತ್ರ್ಯ ವೀರ್ ಸಾವರ್ಕರ್. ಕೊಟ್ಟುಕ್ಕಲಿ, ಜಮಾ, ಜಿಗರ್ತಂಡ ಡಬಲ್ ಎಕ್ಸ್, ಉಲ್ಲೋಝುಕ್ಕು, ಅಭಾ, ಘರತ್ ಗಣಪತಿ, ಸ್ವರ್ಗಂಧರ್ವ ಸುಧೀರ್ ಫಡ್ಕೆ, ಮಹಾರಾಜ, ಮಂಗಳವಾರಂ ಮತ್ತು ಹನು-ಮಾನ್ ಒಳಗೊಂಡಿತ್ತು. ಈ ಪೈಕಿ ಲಾಪತಾ ಲೇಡಿಸ್ ಅನ್ನು ಎಫ್‌ಎಫ್‌ಐ ಆಯ್ಕೆ ಮಾಡಿದೆ.

ಮುಂದಿನ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 2, 2025ರಂದು ಭಾನುವಾರ ಸಂಜೆ 5:30ರಿಂದ ರಾತ್ರಿ 8:30ರ ನಡುವೆ ಯುಎಸ್‌ನ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ ನಗರದ ಹಾಲಿವುಡ್ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ : FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...