Homeಫ್ಯಾಕ್ಟ್‌ಚೆಕ್Fact Check : ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ...

Fact Check : ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ

- Advertisement -
- Advertisement -

ಮೈಸೂರಿನಲ್ಲಿ ಸುಮಾರು 2,200 ವರ್ಷಗಳಷ್ಟು ಹಳೆಯ ನಂದಿ ವಿಗ್ರಹಗಳು ಪತ್ತೆಯಾಗಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳಲಾಗಿದೆ.

Frontalforce (@FrontalForce) ಎಂಬ ಎಕ್ಸ್ ಖಾತೆಯಲ್ಲಿ “ಕರ್ನಾಟಕದ ಮೈಸೂರು ಬಳಿ ಅಗೆಯುವಾಗ ಸುಮಾರು 2,200 ವರ್ಷಗಳಷ್ಟು ಹಳೆಯದಾದ ನಂದಿಯ ಪ್ರತಿಮೆ ಪತ್ತೆಯಾಗಿದೆ. ಜಗತ್ತಿನಲ್ಲಿ ಎಲ್ಲಿ ಅಗೆದರೂ ನಮ್ಮ ಕುರುಹುಗಳು ಸಿಗುತ್ತವೆ. ನಾವು ಸನಾತನ ಹಿಂದೂ ಧರ್ಮದವರು.” ಎಂದು ಬರೆದುಕೊಂದು ಮಣ್ಣಿನಲ್ಲಿ ಹೂತು ಹೋಗಿರುವ ನಂದಿಯ ಫೋಟೋ ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ, ನಾವು ಈ ಕುರಿತು ಮಾಧ್ಯಮಗಳಲ್ಲಿ ಸುದ್ದಿಯಾಗಿದೆಯಾ? ಎಂದು ಗೂಗಲ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಜುಲೈ 15, 2019ರಂದು ‘ದಿ ಹಿಂದೂ ವೆಬ್‌ಸೈಟ್‌ ‘Centuries-old Nandi statues unearthed near Mysuru’ ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಸುದ್ದಿ ಲಭ್ಯವಾಗಿದೆ. ಈ ಸುದ್ದಿಯಲ್ಲಿ “ಮೈಸೂರಿನಿಂದ 20 ಕಿ.ಮೀ ದೂರದ ಅರಸಿನಕೆರೆ ಎಂಬಲ್ಲಿ ಕೆರೆಯ ತಳದಲ್ಲಿ ಮಣ್ಣಿನಲ್ಲಿ ಹೂತು ಹೋಗಿದ್ದ ನಂದಿಯ ವಿಗ್ರಹಗಳನ್ನು ಕೆರೆ ಬರಿದಾದಾಗ ಸ್ಥಳೀಯರು ಮೇಲೆತ್ತಿದ್ದಾರೆ” ಎಂದು ಹೇಳಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಜುಲೈ 14, 2019ರಂದು ಸುವರ್ಣನ್ಯೂಸ್ “ಮೈಸೂರು: 150 ವರ್ಷಗಳ ಹಿಂದಿನ ಬೃಹತ್ ನಂದಿ ವಿಗ್ರಹ ಪತ್ತೆ, ಗ್ರಾಮಸ್ಥರ ಮಾದರಿ ಕೆಲಸ” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಸುದ್ದಿಯಲ್ಲಿ “ಮೈಸೂರು ಜಿಲ್ಲೆಯ ಅರಸಿನಕೆರೆ ಗ್ರಾಮದಲ್ಲಿ ಬೃಹತ್ ನಂದಿ ವಿಗ್ರಹಗಳು ಸಿಕ್ಕಿವೆ. ಗ್ರಾಮದ ಜಮೀನಿನಲ್ಲಿ ಸುಮಾರು 12 ಅಡಿ ಮೀರಿದ ಎರಡು ನಂದಿ ವಿಗ್ರಹಗಳು ಪತ್ತೆಯಾಗಿವೆ. ಸುಮಾರು ನಲವತ್ತೈದು ವರ್ಷಗಳ ಹಿಂದಿಯೇ ಈ ವಿಗ್ರಹಗಳ ಕುರುಹು ಪತ್ತೆಯಾಗಿತ್ತು. ನಂದಿಯ ತಲೆ ಭಾಗ ಮಾತ್ರ ಪತ್ತೆಯಾಗಿತ್ತು. ಸದ್ಯ ಸಂಪೂರ್ಣ ವಿಗ್ರಹಗಳ ಉತ್ಖನನ ಕಾರ್ಯ ನಡೆದಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಮಣ್ಣಿನಲ್ಲಿ ಹುದುಗಿದ್ದ ನಂದಿ ವಿಗ್ರಹಗಳನ್ನು ಮೇಲಕ್ಕೆ ತಂದಿದ್ದಾರೆ.” ಎಂದು ತಿಳಿಸಲಾಗಿದೆ.

ವರದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ, ಮೈಸೂರಿನಲ್ಲಿ ನಂದಿ ವಿಗ್ರಹಗಳು ಪತ್ತೆಯಾಗಿವೆ ಎಂಬುವುದು ನಿಜ ಎಂದು ಮಾಧ್ಯಮ ವರದಿಗಳಿಂದ ತಿಳಿದು ಬಂದಿದೆ. ಆದರೆ, ಇದು ಹಳೆಯ (2019) ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK : ನೇಹಾ ಹಿರೇಮಠ್ ಮನೆಗೆ ಯಾವುದೇ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....