Homeಫ್ಯಾಕ್ಟ್‌ಚೆಕ್FACT CHECK : ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ...

FACT CHECK : ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ಸುಳ್ಳು

- Advertisement -
- Advertisement -

“ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭಾರತ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿತ್ತು. ಆದರೆ, ನಾವು ಪದಕಗಳ ಪಟ್ಟಿಯಲ್ಲಿ ಇರುತ್ತಿರಲಿಲ್ಲ. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದಲ್ಲಿ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ಕೆಲಸ ಮಾಡಲಾಗಿದೆ. ಈ ಮೂಲಕ ಈ ಬಾರಿಯ ಮೊದಲ ಪದಕವನ್ನು ಭಾರತೀಯ ಮಹಿಳೆಯೊಬ್ಬರು ಗೆದ್ದಿರುವುದು ನನಗೆ ತುಂಬಾ ಸಂತಸವನ್ನು ತಂದಿದೆ” ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಹಾಗಾದರೆ, ಶೋಭಾ ಕರಂದ್ಲಾಜೆ ಹೇಳಿದಂತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವ ಮೊದಲು ಭಾರತ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನೇ ಪಡೆದಿಲ್ವಾ? ಎಂಬುವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭಾರತ ಒಲಿಂಪಿಕ್ಸ್‌ ಪದಕಗಳ ಪಟ್ಟಿಯಲ್ಲಿ ಇರುತ್ತಿರಲಿಲ್ಲ ಅಥವಾ ಭಾರತ ಪದಕಗಳನ್ನು ಪಡೆಯುತ್ತಿರಲಿಲ್ಲ ಎಂಬ ಸಚಿವೆ ಶೋಭಾ ಕರಂದ್ಲಾಜೆಯ ಹೇಳಿಕೆ ಸುಳ್ಳು.

ಭಾರತ ಒಲಿಂಪಿಕ್ಸ್‌ನಲ್ಲಿ ಮೊದಲ ಪದಕ ಪಡೆದಿರುವುದು 1900ನೇ ಇಸವಿಯಲ್ಲಿ. ಕೊಲ್ಕತ್ತಾ ಮೂಲದ ನಾರ್ಮನ್ ಪ್ರಿಚರ್ಡ್ ದೇಶಕ್ಕೆ ಎರಡು ಬೆಳ್ಳಿಯ ಪದಕಗಳನ್ನು ತಂದು ಕೊಟ್ಟಿದ್ದರು. ಇದು ಎಷ್ಯಾದ ಮೊದಲ ಪದಕವೂ ಹೌದು. ಆದರೆ, ನಾರ್ಮನ್ ಪ್ರಿಚರ್ಡ್ ನಮ್ಮವ ಎಂದು ಆಂಗ್ಲರಾಷ್ಟ್ರ ಬ್ರಿಟನ್ ವಾದಿಸುತ್ತಿತ್ತು. ಭಾರತ ನಮ್ಮವನು ಎಂದಿತ್ತು. ಹಾಗಾಗಿ, 125 ವರ್ಷಗಳ ಬಳಿಕವೂ ಭಾರತದ ಮೊದಲ ಒಲಿಂಪಿಕ್ಸ್ ಪದಕ ವಿವಾದಾತ್ಮಕವಾಗಿಯೇ ಉಳಿದಿದೆ.

1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ ಬಳಿಕ ಮೊದಲ ಬಾರಿಗೆ 1952ರಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಕೆ.ಡಿ ಜಾಧವ್ ಅವರು ರೆಸ್ಲಿಂಗ್‌ನಲ್ಲಿ ಕಂಚಿನ ಪದಕ ಪಡೆದಿದ್ದರು.

ಇನ್ನು 2000ದಿಂದ 2010ರ ನಡುವೆ ದೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ಆಡಳಿತವಿದ್ದಾಗ 2004ರಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್, ಅಭಿನವ್ ಬಿಂದ್ರಾ, ವಿಜೇಂದರ್ ಸಿಂಗ್, ಸುಶೀಲ್ ಕುಮಾರ್ ಪದಕಗಳನ್ನು ಪಡೆದಿದ್ದರು.

1900ರ ಬಳಿಕ 2024ರವರೆಗೆ ಭಾರತದ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಹಲವು ಪದಕಗಳನ್ನು ಪಡೆದಿದ್ದಾರೆ. ಈ ಬಗ್ಗೆ ಅಂತರ್ಜಾಲದಲ್ಲಿ ಸುಲಭವಾಗಿ ಮಾಹಿತಿ ಲಭ್ಯವಿದ್ದು, ಯಾರು ಬೇಕಾದರು ಪರಿಶೀಲಿಸಬಹುದು. ವಿಕಿಪೀಡಿಯಾದಲ್ಲಿ ಲಭ್ಯವಿರುವ ಪದಕಗಳ ಪಟ್ಟಿಯನ್ನು ಪರಿಶೀಲಿಸಲು ಕೆಳಗಿನ ಲಿಂಕ್ ಒತ್ತಿ.

ಲಿಂಕ್ ಇಲ್ಲಿದೆ

ಒಟ್ಟಿನಲ್ಲಿ ಸ್ವಾತಂತ್ರ್ಯಪೂರ್ವದಿಂದಲೇ ಭಾರತ ಒಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಪಡೆಯುತ್ತಿದೆ. ಹಾಗಾಗಿ, ಮೋದಿ ಸರ್ಕಾರ ಬರುವ ಮೊದಲು ಭಾರತ ಪದಕಗಳ ಪಟ್ಟಿಯಲ್ಲಿ ಇರುತ್ತಿರಲಿಲ್ಲ ಎಂಬ ಸಚಿವೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಸುಳ್ಳು

ಇದನ್ನೂ ಓದಿ : FACT CHECK : ಬೃಂದಾವನ ಉದ್ಯಾನವನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...