Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ...

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

- Advertisement -
- Advertisement -

”ಕೇರಳದ ವಯನಾಡ್‌ನಲ್ಲಿ ಇತ್ತಿಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಗೆಲುವನ್ನು ಆಚರಿಸುತ್ತಿರುವ ಕೇರಳ ಕಾಂಗ್ರೆಸ್‌ನ ಮಾಧ್ಯಮ ಮುಖ್ಯಸ್ಥ ಮೊಹಮ್ಮದ್ ಮುಜಾಹಿದ್ ಇಸ್ಲಾಂ” ಎಂದು ಪ್ರತಿಪಾದಿಸಿ ವ್ಯಕ್ತಿಯೊಬ್ಬ ಹಸುವಿನ ತಲೆಗೆ ಗುಂಡು ಹಾರಿಸಿ ಕೊಲ್ಲುತ್ತಿರುವ ವಿಡಿಯೊವನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಿಡಿಯೊವನ್ನು 2023ರ ಮೇ ತಿಂಗಳಲ್ಲಿ ಕೂಡಾ ವೈರಲ್ ಮಾಡಲಾಗಿತ್ತು. ಆಗಿನ ಸಂದೇಶದಲ್ಲಿ ಈ ವಿಡಿಯೊವನ್ನು ರಾಹುಲ್ ಗಾಂಧಿ ಅವರ ಗೆಲುವಿನ ಆಚರಣೆ ಎಂದು ಪ್ರತಿಪಾದಿಸಲಾಗಿತ್ತು. ವಿಡಿಯೊ ಇಂಗ್ಲಿಷ್, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ. ಅವುಗಳನ್ನು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್
ಪೇಸ್‌ಬುಕ್‌ನಲ್ಲಿ ವಿಡಿಯೊ ಹರಡುತ್ತಿದ್ದು, ಅವುಗಳನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಪ್ರಿಯಾಂಕ ಗಾಂಧಿ ಅವರ ವಯನಾಡು ಗೆಲುವಿಗೂ, ಈ ವಿಡಿಯೊಗೂ ಯಾವುದೆ ಸಂಬಂಧವಿಲ್ಲ. ವರದಿಗಳ ಪ್ರಕಾರ ಈ ವಿಡಿಯೋ ಹೆಚ್ಚಾಗಿ ಮಣಿಪುರದ್ದಾಗಿದ್ದು, 2024ರ ಮೇ ತಿಂಗಳಿನದ್ದಾಗಿದೆ. ವಯನಾಡ್ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಸಲಾಯಿತು. ಇದರರ್ಥ ವೈರಲ್ ವೀಡಿಯೊ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಗೆಲುವಿಗಿಂತಲೂ ಆರು ತಿಂಗಳಿಗಿಂತ ಹೆಚ್ಚು ಮುಂಚಿನದ್ದಾಗಿದೆ.

ಈ ವಿಡಿಯೊವನ್ನು 2024ರ ಮೇ 9ರಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದ ಸ್ಕ್ರೀನ್‌ಶಾಟ್ ಹೊಂದಿದೆ. ಚಿತ್ರದ ಶೀರ್ಷಿಕೆಯಲ್ಲಿ, “ಮಣಿಪುರದಲ್ಲಿ ಹಸುವಿನ ಮೇಲೆ ಎರಡು ಬಾರಿ ಗುಂಡು ಹಾರಿಸಿ ಹತ್ಯೆ” ಎಂದು ಬರೆಯಲಾಗಿದೆ.

7 ಮೇ 2024 ರಂದು ಫ್ರೀ ಪ್ರೆಸ್ ಜರ್ನಲ್ ಈ ಘಟನೆಯ ವರದಿ ಮಾಡಿದೆ. ವರದಿಯಲ್ಲಿ, ಘಟನೆಯು ಮಣಿಪುರದಲ್ಲಿ ನಡೆದಿದೆ ಎಂದು ಉಲ್ಲೇಖಿಸಿದೆ. ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾದರರು, ಹಸುವಿಗೆ ಗುಂಡು ಹಾರಿಸಿದ ವ್ಯಕ್ತಿ “ಕ್ರಿಶ್ಚಿಯನ್ ಕುಕಿ ಬಂಡುಕೋರ” ಎಂದು ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಮೈತೇಯಿ ಸಮುದಾಯಕ್ಕೆ ಸೇರಿದ ಸಾಕು ಪ್ರಾಣಿಗಳನ್ನು ಕಳ್ಳತನ ಮಾಡಿ ಕ್ರೂರವಾಗಿ ಕೊಲ್ಲಲಾಗುತ್ತಿದ್ದು, ಈ ಮೂಲಕ ಕುಕಿ ಬಂಡುಕೋರರು ತಮ್ಮ ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಅಷ್ಟೆ ಅಲ್ಲದೆ, ಮೇ 7 ರಂದು, ಪೇಟಾ ಇಂಡಿಯಾ ಕೂಡಾ ಘಟನೆಗೆ ಪ್ರತಿಕ್ರಿಯಿಸಿದ್ದು, ವೀಡಿಯೊದಲ್ಲಿರುವ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮಣಿಪುರ ಪೊಲೀಸರ ಸೈಬರ್ ಕ್ರೈಮ್ ಸೆಲ್‌ನೊಂದಿಗೆ ತಂಡವು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿತ್ತು.

ಅಷ್ಟೆ ಅಲ್ಲದೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದೀಪ್ತಿ ಮೇರಿ ವರ್ಗೀಸ್ ಅವರು ಕೇರಳ ಕಾಂಗ್ರೆಸ್‌ನ ಮಾಧ್ಯಮ ಮುಖ್ಯಸ್ಥೆ ಎಂದು ಸ್ವತಃ ಖಚಿತಪಡಿಸಿದ್ದಾರೆ. ಜೊತೆಗೆ ಅವರ ತಂಡದಲ್ಲಿ ಮೊಹಮ್ಮದ್ ಮುಜಾಹಿದ್ ಇಸ್ಲಾಂ ಎಂದು ಯಾರೂ ಇರಲಿಲ್ಲ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೇಳಬೇಕಾದರೆ, ಈ ವಿಡಿಯೊ ಕೇರಳದ್ದಲ್ಲ, ಜೊತೆಗೆ ರಾಹುಲ್ ಅಥವಾ ಪ್ರಿಯಾಂಕಾ ಗಾಂಧಿ ಅವರ ಗೆಲುವು ಸಂಭ್ರಮಿಸಲು ಹಸುವಿಗೆ ಗುಂಡು ಹಾರಿಸಿದ್ದೂ ಅಲ್ಲ. ಅಷ್ಟೆ ಅಲ್ಲದೆ, ವ್ಯಕ್ತಿಯು ಮುಸ್ಲಿಂ ಕೂಡಾ ಅಲ್ಲ. ಬಿಜೆಪಿಯ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವಿಚಾರ ಸುಳ್ಳಾಗಿದೆ.

ಇದನ್ನೂ ಓದಿ: ಕನಿಮೋಳಿ, ಪೆರಿಯಾರ್ ಪ್ರತಿಮೆ ಕುರಿತು ವಿವಾದಾತ್ಮಕ ಹೇಳಿಕೆ; ತಮಿಳುನಾಡು ಬಿಜೆಪಿ ನಾಯಕನಿಗೆ 6 ತಿಂಗಳ ಜೈಲು ಶಿಕ್ಷೆ

ಕನಿಮೋಳಿ, ಪೆರಿಯಾರ್ ಪ್ರತಿಮೆ ಕುರಿತು ವಿವಾದಾತ್ಮಕ ಹೇಳಿಕೆ; ತಮಿಳುನಾಡು ಬಿಜೆಪಿ ನಾಯಕನಿಗೆ 6 ತಿಂಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...