HomeಮುಖಪುಟFact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

Fact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

- Advertisement -
- Advertisement -

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಬೇಕಿತ್ತೇ? ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಎಷ್ಟು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ನೀವೂ ಸರ್ಕಾರದ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಡುವುದು ಬಿಟ್ಟು ಈ ರೀತಿಯಾಗಿ, ಈ ಸಮಯದಲ್ಲಿ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯೇ? ಎಂದು ಪೋಸ್ಟ್‌ ಕಾರ್ಡ್‌ ಪೋಸ್ಟ್‌ ಮಾಡಿ ಹರಡಿದೆ.

ಫ್ಯಾಕ್ಟ್‌ಚೆಕ್

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಮೇ 1 ರಂದು ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಮೇ 2 ರಂದು ಒಂದೇ ದರ (ಸಿಂಗಲ್‌ ಫೇರ್‌) ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಭಿಕ್ಷೆ ಬೇಡಿಯಾದರೂ ಸರಿಯೇ ನಾವು ಹಣ ಕೊಡುತ್ತೇವೆ, ವಲಸೆ ಕಾರ್ಮಿಕರಿಗೆ ಉಚಿತವಾಗಿ ಅವರ ಊರಿಗೆ ಕಳಿಸಿ ಎಂದು ಮನವಿ ಮಾಡಿದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ನಂತರ ಮೇ 3 ರಂದು ವಲಸೆ ಕಾರ್ಮಿಕರ ಬಸ್‌ ಚಾರ್ಜ್‌‌ಗಾಗಿ ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಆ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಎಂಡಿಯವರಿಗೆ ಹಸ್ತಾಂತರಿಸಲು ಇಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇನ್ನಿತರ ನಾಯಕರು ಮೆಜೆಸ್ಟಿಕ್‌ಗೆ ನಡೆದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಉಚಿತ ಪ್ರಯಾಣಕ್ಕೆ ಅವಕಾಶಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆ ಎಸ್ ಆರ್ ಟಿಸಿ ಬಸ್‍ಗಳಲ್ಲಿ ಬೆಂಗಳೂರು…

Posted by Chief Minister of Karnataka on Saturday, May 2, 2020

ತದನಂತರ ಕಾಂಗ್ರೆಸ್‌ ಮುಖಂಡರು ಅಲ್ಲಿಯೇ ಪಕ್ಕದಲ್ಲಿದ್ದ ಬಸ್‌ನಿಲ್ದಾಣಕ್ಕೆ ತೆರಳಿ ಕಾರ್ಮಿಕರೊಡನೆ ಮಾತನಾಡಿದರು. ಒಂದಷ್ಟು ಜನರಿಗೆ ಊಟದ ವ್ಯವಸ್ಥೆ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದರು. ಆದರೆ ಆ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌‌ರವರು ಯಾವುದೇ ಪ್ರತಿಭಟನೆ ಮಾಡಲಿಲ್ಲ. ಈ ಕುರಿತು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ – ಕರ್ನಾಟಕ ಮತ್ತು ಸಿದ್ದರಾಮಯ್ಯನವರ ಫೇಸ್‌ಬುಕ್‌ ಪುಟದಲ್ಲಿ ಪೂರ್ಣ ಲೈವ್ ಇದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದರು

Posted by Indian National Congress – Karnataka on Saturday, May 2, 2020

ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟಿಸಿದ್ದೇಕೆ?

ಆದರೆ ತದನಂತರ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಆನೇಕಲ್‌ ಕ್ಷೇತ್ರದ ಬಿಜೆಪಿ ಮುಖಂಡರದ ಮುನಿರಾಜು ಎಂಬುವವರು ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಡುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ತನ್ನ ಮತ್ತು ಬಿಜೆಪಿಯ ಚಿತ್ರ ಹಾಕಿಸಿ ತಾನೇ ದಾನ ಕೊಡುತ್ತಿರುವುದಾಗಿ ಪೋಸು ಕೊಟ್ಟಿದ್ದಾರೆ. ಈ ಕುರಿತು ರೆಡ್‌ ಹ್ಯಾಂಡಾಗಿ ಸಿಕ್ಕಬಿದ್ದಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಕಾರ್ಮಿಕರ ವಿಚಾರಕ್ಕೂ ಸಂಬಂಧವಿಲ್ಲ. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿಲ್ಲ. ವಿಡಿಯೋ ನೋಡಿ.

Posted by Indian National Congress – Karnataka on Sunday, May 3, 2020


ಇದನ್ನೂ ಓದಿ: ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...