HomeಮುಖಪುಟFact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

Fact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

- Advertisement -
- Advertisement -

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಬೇಕಿತ್ತೇ? ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಎಷ್ಟು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ನೀವೂ ಸರ್ಕಾರದ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಡುವುದು ಬಿಟ್ಟು ಈ ರೀತಿಯಾಗಿ, ಈ ಸಮಯದಲ್ಲಿ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯೇ? ಎಂದು ಪೋಸ್ಟ್‌ ಕಾರ್ಡ್‌ ಪೋಸ್ಟ್‌ ಮಾಡಿ ಹರಡಿದೆ.

ಫ್ಯಾಕ್ಟ್‌ಚೆಕ್

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಮೇ 1 ರಂದು ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಮೇ 2 ರಂದು ಒಂದೇ ದರ (ಸಿಂಗಲ್‌ ಫೇರ್‌) ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಭಿಕ್ಷೆ ಬೇಡಿಯಾದರೂ ಸರಿಯೇ ನಾವು ಹಣ ಕೊಡುತ್ತೇವೆ, ವಲಸೆ ಕಾರ್ಮಿಕರಿಗೆ ಉಚಿತವಾಗಿ ಅವರ ಊರಿಗೆ ಕಳಿಸಿ ಎಂದು ಮನವಿ ಮಾಡಿದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ನಂತರ ಮೇ 3 ರಂದು ವಲಸೆ ಕಾರ್ಮಿಕರ ಬಸ್‌ ಚಾರ್ಜ್‌‌ಗಾಗಿ ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಆ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಎಂಡಿಯವರಿಗೆ ಹಸ್ತಾಂತರಿಸಲು ಇಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇನ್ನಿತರ ನಾಯಕರು ಮೆಜೆಸ್ಟಿಕ್‌ಗೆ ನಡೆದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಉಚಿತ ಪ್ರಯಾಣಕ್ಕೆ ಅವಕಾಶಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆ ಎಸ್ ಆರ್ ಟಿಸಿ ಬಸ್‍ಗಳಲ್ಲಿ ಬೆಂಗಳೂರು…

Posted by Chief Minister of Karnataka on Saturday, May 2, 2020

ತದನಂತರ ಕಾಂಗ್ರೆಸ್‌ ಮುಖಂಡರು ಅಲ್ಲಿಯೇ ಪಕ್ಕದಲ್ಲಿದ್ದ ಬಸ್‌ನಿಲ್ದಾಣಕ್ಕೆ ತೆರಳಿ ಕಾರ್ಮಿಕರೊಡನೆ ಮಾತನಾಡಿದರು. ಒಂದಷ್ಟು ಜನರಿಗೆ ಊಟದ ವ್ಯವಸ್ಥೆ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದರು. ಆದರೆ ಆ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌‌ರವರು ಯಾವುದೇ ಪ್ರತಿಭಟನೆ ಮಾಡಲಿಲ್ಲ. ಈ ಕುರಿತು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ – ಕರ್ನಾಟಕ ಮತ್ತು ಸಿದ್ದರಾಮಯ್ಯನವರ ಫೇಸ್‌ಬುಕ್‌ ಪುಟದಲ್ಲಿ ಪೂರ್ಣ ಲೈವ್ ಇದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದರು

Posted by Indian National Congress – Karnataka on Saturday, May 2, 2020

ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟಿಸಿದ್ದೇಕೆ?

ಆದರೆ ತದನಂತರ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಆನೇಕಲ್‌ ಕ್ಷೇತ್ರದ ಬಿಜೆಪಿ ಮುಖಂಡರದ ಮುನಿರಾಜು ಎಂಬುವವರು ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಡುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ತನ್ನ ಮತ್ತು ಬಿಜೆಪಿಯ ಚಿತ್ರ ಹಾಕಿಸಿ ತಾನೇ ದಾನ ಕೊಡುತ್ತಿರುವುದಾಗಿ ಪೋಸು ಕೊಟ್ಟಿದ್ದಾರೆ. ಈ ಕುರಿತು ರೆಡ್‌ ಹ್ಯಾಂಡಾಗಿ ಸಿಕ್ಕಬಿದ್ದಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಕಾರ್ಮಿಕರ ವಿಚಾರಕ್ಕೂ ಸಂಬಂಧವಿಲ್ಲ. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿಲ್ಲ. ವಿಡಿಯೋ ನೋಡಿ.

Posted by Indian National Congress – Karnataka on Sunday, May 3, 2020


ಇದನ್ನೂ ಓದಿ: ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...