HomeಮುಖಪುಟFact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

Fact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

- Advertisement -
- Advertisement -

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಬೇಕಿತ್ತೇ? ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಎಷ್ಟು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ನೀವೂ ಸರ್ಕಾರದ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಡುವುದು ಬಿಟ್ಟು ಈ ರೀತಿಯಾಗಿ, ಈ ಸಮಯದಲ್ಲಿ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯೇ? ಎಂದು ಪೋಸ್ಟ್‌ ಕಾರ್ಡ್‌ ಪೋಸ್ಟ್‌ ಮಾಡಿ ಹರಡಿದೆ.

ಫ್ಯಾಕ್ಟ್‌ಚೆಕ್

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಮೇ 1 ರಂದು ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಮೇ 2 ರಂದು ಒಂದೇ ದರ (ಸಿಂಗಲ್‌ ಫೇರ್‌) ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಭಿಕ್ಷೆ ಬೇಡಿಯಾದರೂ ಸರಿಯೇ ನಾವು ಹಣ ಕೊಡುತ್ತೇವೆ, ವಲಸೆ ಕಾರ್ಮಿಕರಿಗೆ ಉಚಿತವಾಗಿ ಅವರ ಊರಿಗೆ ಕಳಿಸಿ ಎಂದು ಮನವಿ ಮಾಡಿದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ನಂತರ ಮೇ 3 ರಂದು ವಲಸೆ ಕಾರ್ಮಿಕರ ಬಸ್‌ ಚಾರ್ಜ್‌‌ಗಾಗಿ ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಆ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಎಂಡಿಯವರಿಗೆ ಹಸ್ತಾಂತರಿಸಲು ಇಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇನ್ನಿತರ ನಾಯಕರು ಮೆಜೆಸ್ಟಿಕ್‌ಗೆ ನಡೆದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಉಚಿತ ಪ್ರಯಾಣಕ್ಕೆ ಅವಕಾಶಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆ ಎಸ್ ಆರ್ ಟಿಸಿ ಬಸ್‍ಗಳಲ್ಲಿ ಬೆಂಗಳೂರು…

Posted by Chief Minister of Karnataka on Saturday, May 2, 2020

ತದನಂತರ ಕಾಂಗ್ರೆಸ್‌ ಮುಖಂಡರು ಅಲ್ಲಿಯೇ ಪಕ್ಕದಲ್ಲಿದ್ದ ಬಸ್‌ನಿಲ್ದಾಣಕ್ಕೆ ತೆರಳಿ ಕಾರ್ಮಿಕರೊಡನೆ ಮಾತನಾಡಿದರು. ಒಂದಷ್ಟು ಜನರಿಗೆ ಊಟದ ವ್ಯವಸ್ಥೆ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದರು. ಆದರೆ ಆ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌‌ರವರು ಯಾವುದೇ ಪ್ರತಿಭಟನೆ ಮಾಡಲಿಲ್ಲ. ಈ ಕುರಿತು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ – ಕರ್ನಾಟಕ ಮತ್ತು ಸಿದ್ದರಾಮಯ್ಯನವರ ಫೇಸ್‌ಬುಕ್‌ ಪುಟದಲ್ಲಿ ಪೂರ್ಣ ಲೈವ್ ಇದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದರು

Posted by Indian National Congress – Karnataka on Saturday, May 2, 2020

ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟಿಸಿದ್ದೇಕೆ?

ಆದರೆ ತದನಂತರ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಆನೇಕಲ್‌ ಕ್ಷೇತ್ರದ ಬಿಜೆಪಿ ಮುಖಂಡರದ ಮುನಿರಾಜು ಎಂಬುವವರು ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಡುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ತನ್ನ ಮತ್ತು ಬಿಜೆಪಿಯ ಚಿತ್ರ ಹಾಕಿಸಿ ತಾನೇ ದಾನ ಕೊಡುತ್ತಿರುವುದಾಗಿ ಪೋಸು ಕೊಟ್ಟಿದ್ದಾರೆ. ಈ ಕುರಿತು ರೆಡ್‌ ಹ್ಯಾಂಡಾಗಿ ಸಿಕ್ಕಬಿದ್ದಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಕಾರ್ಮಿಕರ ವಿಚಾರಕ್ಕೂ ಸಂಬಂಧವಿಲ್ಲ. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿಲ್ಲ. ವಿಡಿಯೋ ನೋಡಿ.

Posted by Indian National Congress – Karnataka on Sunday, May 3, 2020


ಇದನ್ನೂ ಓದಿ: ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...