HomeಮುಖಪುಟFact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

Fact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

- Advertisement -
- Advertisement -

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಬೇಕಿತ್ತೇ? ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಎಷ್ಟು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ನೀವೂ ಸರ್ಕಾರದ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಡುವುದು ಬಿಟ್ಟು ಈ ರೀತಿಯಾಗಿ, ಈ ಸಮಯದಲ್ಲಿ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯೇ? ಎಂದು ಪೋಸ್ಟ್‌ ಕಾರ್ಡ್‌ ಪೋಸ್ಟ್‌ ಮಾಡಿ ಹರಡಿದೆ.

ಫ್ಯಾಕ್ಟ್‌ಚೆಕ್

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಮೇ 1 ರಂದು ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಮೇ 2 ರಂದು ಒಂದೇ ದರ (ಸಿಂಗಲ್‌ ಫೇರ್‌) ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಭಿಕ್ಷೆ ಬೇಡಿಯಾದರೂ ಸರಿಯೇ ನಾವು ಹಣ ಕೊಡುತ್ತೇವೆ, ವಲಸೆ ಕಾರ್ಮಿಕರಿಗೆ ಉಚಿತವಾಗಿ ಅವರ ಊರಿಗೆ ಕಳಿಸಿ ಎಂದು ಮನವಿ ಮಾಡಿದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ನಂತರ ಮೇ 3 ರಂದು ವಲಸೆ ಕಾರ್ಮಿಕರ ಬಸ್‌ ಚಾರ್ಜ್‌‌ಗಾಗಿ ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಆ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಎಂಡಿಯವರಿಗೆ ಹಸ್ತಾಂತರಿಸಲು ಇಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇನ್ನಿತರ ನಾಯಕರು ಮೆಜೆಸ್ಟಿಕ್‌ಗೆ ನಡೆದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಉಚಿತ ಪ್ರಯಾಣಕ್ಕೆ ಅವಕಾಶಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆ ಎಸ್ ಆರ್ ಟಿಸಿ ಬಸ್‍ಗಳಲ್ಲಿ ಬೆಂಗಳೂರು…

Posted by Chief Minister of Karnataka on Saturday, May 2, 2020

ತದನಂತರ ಕಾಂಗ್ರೆಸ್‌ ಮುಖಂಡರು ಅಲ್ಲಿಯೇ ಪಕ್ಕದಲ್ಲಿದ್ದ ಬಸ್‌ನಿಲ್ದಾಣಕ್ಕೆ ತೆರಳಿ ಕಾರ್ಮಿಕರೊಡನೆ ಮಾತನಾಡಿದರು. ಒಂದಷ್ಟು ಜನರಿಗೆ ಊಟದ ವ್ಯವಸ್ಥೆ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದರು. ಆದರೆ ಆ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌‌ರವರು ಯಾವುದೇ ಪ್ರತಿಭಟನೆ ಮಾಡಲಿಲ್ಲ. ಈ ಕುರಿತು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ – ಕರ್ನಾಟಕ ಮತ್ತು ಸಿದ್ದರಾಮಯ್ಯನವರ ಫೇಸ್‌ಬುಕ್‌ ಪುಟದಲ್ಲಿ ಪೂರ್ಣ ಲೈವ್ ಇದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದರು

Posted by Indian National Congress – Karnataka on Saturday, May 2, 2020

ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟಿಸಿದ್ದೇಕೆ?

ಆದರೆ ತದನಂತರ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಆನೇಕಲ್‌ ಕ್ಷೇತ್ರದ ಬಿಜೆಪಿ ಮುಖಂಡರದ ಮುನಿರಾಜು ಎಂಬುವವರು ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಡುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ತನ್ನ ಮತ್ತು ಬಿಜೆಪಿಯ ಚಿತ್ರ ಹಾಕಿಸಿ ತಾನೇ ದಾನ ಕೊಡುತ್ತಿರುವುದಾಗಿ ಪೋಸು ಕೊಟ್ಟಿದ್ದಾರೆ. ಈ ಕುರಿತು ರೆಡ್‌ ಹ್ಯಾಂಡಾಗಿ ಸಿಕ್ಕಬಿದ್ದಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಕಾರ್ಮಿಕರ ವಿಚಾರಕ್ಕೂ ಸಂಬಂಧವಿಲ್ಲ. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿಲ್ಲ. ವಿಡಿಯೋ ನೋಡಿ.

Posted by Indian National Congress – Karnataka on Sunday, May 3, 2020


ಇದನ್ನೂ ಓದಿ: ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...