HomeಮುಖಪುಟFact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

Fact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

- Advertisement -
- Advertisement -

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಬೇಕಿತ್ತೇ? ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಎಷ್ಟು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ನೀವೂ ಸರ್ಕಾರದ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಡುವುದು ಬಿಟ್ಟು ಈ ರೀತಿಯಾಗಿ, ಈ ಸಮಯದಲ್ಲಿ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯೇ? ಎಂದು ಪೋಸ್ಟ್‌ ಕಾರ್ಡ್‌ ಪೋಸ್ಟ್‌ ಮಾಡಿ ಹರಡಿದೆ.

ಫ್ಯಾಕ್ಟ್‌ಚೆಕ್

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಮೇ 1 ರಂದು ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಮೇ 2 ರಂದು ಒಂದೇ ದರ (ಸಿಂಗಲ್‌ ಫೇರ್‌) ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಭಿಕ್ಷೆ ಬೇಡಿಯಾದರೂ ಸರಿಯೇ ನಾವು ಹಣ ಕೊಡುತ್ತೇವೆ, ವಲಸೆ ಕಾರ್ಮಿಕರಿಗೆ ಉಚಿತವಾಗಿ ಅವರ ಊರಿಗೆ ಕಳಿಸಿ ಎಂದು ಮನವಿ ಮಾಡಿದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ನಂತರ ಮೇ 3 ರಂದು ವಲಸೆ ಕಾರ್ಮಿಕರ ಬಸ್‌ ಚಾರ್ಜ್‌‌ಗಾಗಿ ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಆ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಎಂಡಿಯವರಿಗೆ ಹಸ್ತಾಂತರಿಸಲು ಇಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇನ್ನಿತರ ನಾಯಕರು ಮೆಜೆಸ್ಟಿಕ್‌ಗೆ ನಡೆದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಉಚಿತ ಪ್ರಯಾಣಕ್ಕೆ ಅವಕಾಶಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆ ಎಸ್ ಆರ್ ಟಿಸಿ ಬಸ್‍ಗಳಲ್ಲಿ ಬೆಂಗಳೂರು…

Posted by Chief Minister of Karnataka on Saturday, May 2, 2020

ತದನಂತರ ಕಾಂಗ್ರೆಸ್‌ ಮುಖಂಡರು ಅಲ್ಲಿಯೇ ಪಕ್ಕದಲ್ಲಿದ್ದ ಬಸ್‌ನಿಲ್ದಾಣಕ್ಕೆ ತೆರಳಿ ಕಾರ್ಮಿಕರೊಡನೆ ಮಾತನಾಡಿದರು. ಒಂದಷ್ಟು ಜನರಿಗೆ ಊಟದ ವ್ಯವಸ್ಥೆ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದರು. ಆದರೆ ಆ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌‌ರವರು ಯಾವುದೇ ಪ್ರತಿಭಟನೆ ಮಾಡಲಿಲ್ಲ. ಈ ಕುರಿತು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ – ಕರ್ನಾಟಕ ಮತ್ತು ಸಿದ್ದರಾಮಯ್ಯನವರ ಫೇಸ್‌ಬುಕ್‌ ಪುಟದಲ್ಲಿ ಪೂರ್ಣ ಲೈವ್ ಇದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದರು

Posted by Indian National Congress – Karnataka on Saturday, May 2, 2020

ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟಿಸಿದ್ದೇಕೆ?

ಆದರೆ ತದನಂತರ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಆನೇಕಲ್‌ ಕ್ಷೇತ್ರದ ಬಿಜೆಪಿ ಮುಖಂಡರದ ಮುನಿರಾಜು ಎಂಬುವವರು ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಡುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ತನ್ನ ಮತ್ತು ಬಿಜೆಪಿಯ ಚಿತ್ರ ಹಾಕಿಸಿ ತಾನೇ ದಾನ ಕೊಡುತ್ತಿರುವುದಾಗಿ ಪೋಸು ಕೊಟ್ಟಿದ್ದಾರೆ. ಈ ಕುರಿತು ರೆಡ್‌ ಹ್ಯಾಂಡಾಗಿ ಸಿಕ್ಕಬಿದ್ದಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಕಾರ್ಮಿಕರ ವಿಚಾರಕ್ಕೂ ಸಂಬಂಧವಿಲ್ಲ. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿಲ್ಲ. ವಿಡಿಯೋ ನೋಡಿ.

Posted by Indian National Congress – Karnataka on Sunday, May 3, 2020


ಇದನ್ನೂ ಓದಿ: ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...