HomeಮುಖಪುಟFact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

Fact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

- Advertisement -
- Advertisement -

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಬೇಕಿತ್ತೇ? ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಎಷ್ಟು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ನೀವೂ ಸರ್ಕಾರದ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಡುವುದು ಬಿಟ್ಟು ಈ ರೀತಿಯಾಗಿ, ಈ ಸಮಯದಲ್ಲಿ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯೇ? ಎಂದು ಪೋಸ್ಟ್‌ ಕಾರ್ಡ್‌ ಪೋಸ್ಟ್‌ ಮಾಡಿ ಹರಡಿದೆ.

ಫ್ಯಾಕ್ಟ್‌ಚೆಕ್

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಮೇ 1 ರಂದು ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಮೇ 2 ರಂದು ಒಂದೇ ದರ (ಸಿಂಗಲ್‌ ಫೇರ್‌) ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಭಿಕ್ಷೆ ಬೇಡಿಯಾದರೂ ಸರಿಯೇ ನಾವು ಹಣ ಕೊಡುತ್ತೇವೆ, ವಲಸೆ ಕಾರ್ಮಿಕರಿಗೆ ಉಚಿತವಾಗಿ ಅವರ ಊರಿಗೆ ಕಳಿಸಿ ಎಂದು ಮನವಿ ಮಾಡಿದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ನಂತರ ಮೇ 3 ರಂದು ವಲಸೆ ಕಾರ್ಮಿಕರ ಬಸ್‌ ಚಾರ್ಜ್‌‌ಗಾಗಿ ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಆ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಎಂಡಿಯವರಿಗೆ ಹಸ್ತಾಂತರಿಸಲು ಇಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇನ್ನಿತರ ನಾಯಕರು ಮೆಜೆಸ್ಟಿಕ್‌ಗೆ ನಡೆದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಉಚಿತ ಪ್ರಯಾಣಕ್ಕೆ ಅವಕಾಶಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆ ಎಸ್ ಆರ್ ಟಿಸಿ ಬಸ್‍ಗಳಲ್ಲಿ ಬೆಂಗಳೂರು…

Posted by Chief Minister of Karnataka on Saturday, May 2, 2020

ತದನಂತರ ಕಾಂಗ್ರೆಸ್‌ ಮುಖಂಡರು ಅಲ್ಲಿಯೇ ಪಕ್ಕದಲ್ಲಿದ್ದ ಬಸ್‌ನಿಲ್ದಾಣಕ್ಕೆ ತೆರಳಿ ಕಾರ್ಮಿಕರೊಡನೆ ಮಾತನಾಡಿದರು. ಒಂದಷ್ಟು ಜನರಿಗೆ ಊಟದ ವ್ಯವಸ್ಥೆ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದರು. ಆದರೆ ಆ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌‌ರವರು ಯಾವುದೇ ಪ್ರತಿಭಟನೆ ಮಾಡಲಿಲ್ಲ. ಈ ಕುರಿತು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ – ಕರ್ನಾಟಕ ಮತ್ತು ಸಿದ್ದರಾಮಯ್ಯನವರ ಫೇಸ್‌ಬುಕ್‌ ಪುಟದಲ್ಲಿ ಪೂರ್ಣ ಲೈವ್ ಇದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದರು

Posted by Indian National Congress – Karnataka on Saturday, May 2, 2020

ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟಿಸಿದ್ದೇಕೆ?

ಆದರೆ ತದನಂತರ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಆನೇಕಲ್‌ ಕ್ಷೇತ್ರದ ಬಿಜೆಪಿ ಮುಖಂಡರದ ಮುನಿರಾಜು ಎಂಬುವವರು ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಡುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ತನ್ನ ಮತ್ತು ಬಿಜೆಪಿಯ ಚಿತ್ರ ಹಾಕಿಸಿ ತಾನೇ ದಾನ ಕೊಡುತ್ತಿರುವುದಾಗಿ ಪೋಸು ಕೊಟ್ಟಿದ್ದಾರೆ. ಈ ಕುರಿತು ರೆಡ್‌ ಹ್ಯಾಂಡಾಗಿ ಸಿಕ್ಕಬಿದ್ದಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಕಾರ್ಮಿಕರ ವಿಚಾರಕ್ಕೂ ಸಂಬಂಧವಿಲ್ಲ. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿಲ್ಲ. ವಿಡಿಯೋ ನೋಡಿ.

Posted by Indian National Congress – Karnataka on Sunday, May 3, 2020


ಇದನ್ನೂ ಓದಿ: ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...