Homeಫ್ಯಾಕ್ಟ್‌ಚೆಕ್Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ 'ಉರ್ದು ಭಾಷೆ' ಕಡ್ಡಾಯಗೊಳಿಸಿದೆಯಾ?

Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ ‘ಉರ್ದು ಭಾಷೆ’ ಕಡ್ಡಾಯಗೊಳಿಸಿದೆಯಾ?

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂಬ ಸುದ್ದಿಯೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತುಮಕೂರು ನಗರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗೌರವಧನ ಆಧಾರಿತ ಅಂಗನವಾಡಿ ಕಾರ್ಯರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂಬ ಪತ್ರಿಕೆಯ ಪ್ರಕಟಣೆಯೊಂದನ್ನು ಮುಂದಿಟ್ಟುಕೊಂಡು ಈ ಸುದ್ದಿ ಹಬ್ಬಲಾಗಿದೆ.

Accidental Bhakth‘ಎಂಬ ಎಕ್ಸ್‌ ಖಾತೆಯಲ್ಲಿ “ಅಂಗನವಾಡಿ ಸಹಾಯಕಿಯರಿಗೆ ಉರ್ದು ಬರಲೇಬೇಕು, ಮಹಾನಗರ ಪಾಲಿಕೆ ಮೇಲೆ ಉರ್ದು ಬೋರ್ಡ್ ಇರಲೇ ಬೇಕು, ಕನ್ನಡ ಪರ ಬೋರ್ಡ್ ಹಾಕಿ ಅಂದವರನ್ನು ಒದ್ದು ಒಳಗೆ ಹಾಕಿದ್ದಾಯಿತು, ಕನ್ನಡರಾಮಯ್ಯ ಅಂತ ಅವನಿಗೆ ಮೆರವಣಿಗೆ ಮಾಡಿದ ಹೇಲಾಟಗಾರರ ಆತ್ಮಕ್ಕೆ ಎರಡು ನಿಮಿಷ ಮೌನಾಚರಣೆ ಮಾಡೋಣ ಬ್ರದರ್” ಎಂದು ಬರೆದುಕೊಂಡು ಮೇಲಿನ ಸುದ್ದಿಯ ಪತ್ರಿಕಾ ವರದಿ ಹಂಚಿಕೊಳ್ಳಲಾಗಿದೆ.

ಸಂವಾದ (Samvada) ಎಂಬ ಬಲಪಂಥೀಯ ಫೇಸ್‌ಬುಕ್ ಚಾನೆಲ್‌ನಲ್ಲಿ “ಉರ್ದು ಬಲ್ಲವರಿಗೆ ಮಾತ್ರ ಕೆಲಸ ಕರ್ನಾಟಕದಲ್ಲಿ ಘಾಜ್ವ-ಎ-ಹಿಂದ್‌ ಶುರು” ಎಂಬ ಶೀರ್ಷೆಕೆಯಲ್ಲಿ ವಿಡಿಯೋ ವರದಿಯನ್ನು ಮಾಡಲಾಗಿದೆ. ಈ ವರದಿಯಲ್ಲಿ ಈ ಹಿಂದಿನ ಆಗು-ಹೋಗುಗಳನ್ನು ಸೇರಿಸಿ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಕನ್ನಡ ವಿರೋಧಿ, ಉರ್ದು ಭಾಷೆ ಮತ್ತು ಮುಸ್ಲಿಮರ ಪರ ಎಂದು ಬಿಂಬಿಸಲಾಗಿದೆ. ವರದಿಯಲ್ಲಿ ಕನ್ನಡ ಹೋರಾಟಗಾರರು ಮತ್ತು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ.

ಫ್ಯಾಕ್ಟ್‌ಚೆಕ್‌ : ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆಯ ಜೊತೆಗೆ ಉರ್ದು ಗೊತ್ತಿರಬೇಕು ಎಂಬ ಪತ್ರಿಕಾ ಪ್ರಕಟಣೆ ಮತ್ತು ಅದರ ಸುತ್ತ ಹರಡುತ್ತಿರುವ ಕೋಮು ಆಯಾಮದ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲನೆಯನ್ನು ನಾನುಗೌರಿ. ಕಾಂ ಮಾಡಿದೆ.

ಸರ್ಕಾರ ಅಥವಾ ತುಮಕೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿಜವಾಗಿಯೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದೆಯಾ? ಎಂಬ ಸತ್ಯವನ್ನು ನಾವು ಹೊರಗೆಳೆದಿದ್ದೇವೆ.

ಇದಕ್ಕಾಗಿ ನಾವು ಮೊದಲು ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇವೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಪ್ರಸ್ತುತ ಅಂಗನವಾಡಿ ಹುದ್ದೆಗಳ ಭರ್ತಿಗೆ 2022ರ ಡಿಸೆಂಬರ್ ತಿಂಗಳಲ್ಲಿ ಅಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೀಡಿದ ಆದೇಶದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದ ಪ್ರಕಾರ ರಾಜ್ಯದ ಯಾವುದೇ ಪ್ರದೇಶದ ಅಂಗನವಾಡಿಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ನೇಮಕ ಮಾಡಿಕೊಳ್ಳುವಾಗ, ‘ಆ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಜನಸಂಖ್ಯೆಯ ಶೇ.25ರಷ್ಟು ಜನರು ಮಾತನಾಡುವ ಭಾಷೆ’ ಅರ್ಜಿ ಸಲ್ಲಿಸುವವರಿಗೆ ಗೊತ್ತಿರಬೇಕು.

ಉದಾಹರಣೆಗೆ : ಮುಸ್ಲಿಮರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗಳಿಗೆ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳುವಾಗ ಅವರಿಗೆ ಕನ್ನಡದ ಜೊತೆಗೆ ಉರ್ದು ಭಾಷೆ ಗೊತ್ತಿರಬೇಕು. ಕ್ರೈಸ್ತ ಸಮುದಾಯದ ಜನರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗೆ ನೇಮಿಸಿಕೊಳ್ಳುವುದಾದರೆ ಅವರಿಗೆ ಕ್ರೈಸ್ತರು ಮಾತನಾಡುವ ಕೊಂಕಣಿಯೋ ಇತರ ಯಾವುದೇ ಭಾಷೆ ತಿಳಿದಿರಬೇಕು.

ಇಲ್ಲಿ ಕನ್ನಡದ ಜೊತೆಗೆ ಉರ್ದು ಮಾತ್ರ ಗೊತ್ತಿರಬೇಕು ಎಂದು ಎಲ್ಲೂ ಕಡ್ಡಾಯ ಮಾಡಿಲ್ಲ. ಅಂಗನವಾಡಿ ಇರುವ ಪ್ರದೇಶದ ಜನ ಸಂಖ್ಯೆಯ ಶೇ.25ರಷ್ಟು ಅಲ್ಪ ಸಂಖ್ಯಾತರು ಮಾತನಾಡುವ ಭಾಷೆ ಗೊತ್ತಿರಬೇಕು ಎಂದು ಹೇಳಲಾಗಿದೆ. ಆ ಭಾಷೆ ಉರ್ದು, ಕೊಂಕಣಿ, ಪಂಜಾಬಿ ಇತರ ಯಾವುದೂ ಆಗಿರಬಹುದು. ಇಲ್ಲಿ ಗಮನಾರ್ಹ ಸಂಗತಿ ಏನೆಂದರೆ, ಎಲ್ಲಾ ಕಡೆಯೂ ಕನ್ನಡ ಗೊತ್ತಿರಬೇಕೆನ್ನುವುದು ಮೊದಲ ಆದ್ಯತೆಯಾಗಿದೆ. ನಂತರ ಇತರ ಭಾಷೆಗಳು ತಿಳಿದಿರಬೇಕು ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಕನ್ನಡ ಜೊತೆ ಉರ್ದು ಭಾಷೆಯನ್ನೇ ಯಾಕೆ ಕಡ್ಡಾಯ ಮಾಡಲಾಗಿದೆ?

ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ಗಳ ವಿವಿಧ ಪ್ರದೇಶಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಅರ್ಜಿ ಸಲ್ಲಿಸುವವರಿಗೆ ಕನ್ನಡದ ಜೊತೆ ಉರ್ದು ಭಾಷೆ ತಿಳಿದಿರಬೇಕು ಎಂದು ಹೇಳಲಾಗಿದೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಮೇಲೆ ಅರ್ಜಿ ಆಹ್ವಾನಿಸಿರುವ ತುಮಕೂರಿನ 11 ವಾರ್ಡ್‌ಗಳ ಎಲ್ಲಾ ಅಂಗನವಾಡಿಗಳು ಕೂಡ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ಇರುವ ಪ್ರದೇಶಗಳದ್ದಾಗಿವೆ. ಮುಸ್ಲಿಮರು ಉರ್ದು ಭಾಷೆ ಮಾತನಾಡುವ ಕಾರಣ, ಸರ್ಕಾರದ ನಿಯಮದಂತೆ ಕನ್ನಡದ ಜೊತೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಒಂದು ವೇಳೆ ಕೊಂಕಣಿ ಮಾತನಾಡುವವರು ಹೆಚ್ಚಿದ್ದರೆ, ಕನ್ನಡದ ಜೊತೆ ಅವರ ಭಾಷೆಯನ್ನು ಕಡ್ಡಾಯಗೊಳಿಸಲಾಗುತ್ತಿತ್ತು.

‘Accidental Bhakth’ಎಕ್ಸ್‌ ಖಾತೆಯ ಪೋಸ್ಟ್‌ಗೆ ಜನವರಿ 18ರಂದು ಪ್ರತಿಕ್ರಿಯೆ ನೀಡಿದ್ದ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ “ನಾಳೆ ಇದರ ಅಸಲಿ ಸತ್ಯ ಎಲ್ಲೆರೆದುರು ಗೊತ್ತು ಮಾಡುತ್ತೇವೆ. ಈ ವಿಷಯವಾಗಿ ನೂರಾರು ಜನ ನನ್ನನ್ನು ಟ್ಯಾಗ್ ಮಾಡಿ ಕನ್ನಡ ಹೋರಾಟಗಾರರ ಮೇಲೆ ಅಸಭ್ಯ ಪದಗಳನ್ನು ಬಳಸಿ ಪ್ರಶ್ನೆ ಮಾಡಿದ್ದೀರಿ. ಇರಲಿ ನಾವಂತೂ ಯಾವುದಕ್ಕೂ ಹಿಂದೆ ಬೀಳೊಲ್ಲ. ನಾಳೆ ಇದಕ್ಕೆ ಉತ್ತರ ಸಿಗಲಿದೆ. ಪೋಸ್ಟ್ ಡಿಲೀಟ್ ಮಾಡದೆ ನಮ್ಮ ಉತ್ತರವನ್ನು ಹೀಗೆ ತಮ್ಮ ವಾಲ್ ಮೇಲೆ ಹಾಕಬೇಕು” ಎಂದಿದ್ದರು.

ಜನವರಿ 19ರಂದು ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದ ಅವರು, “ಅಂಗನವಾಡಿ ಶಿಕ್ಷಕರ ನೇಮಕ ವಿಚಾರವಾಗಿ ಇಂದು ತುಮಕೂರಿನ ಮಹಿಳಾ ಮಕ್ಕಳ ಇಲಾಖೆಗೆ ಹೋಗಿ ವಿಚಾರಿಸಲಾಗಿದೆ. ಈ ಆದೇಶ ಕಳೆದ ಸರ್ಕಾರದ ಅವಧಿ ದಿನಾಂಕ 3-12-2022 ರಂದು ಆಗಿದ್ದು, ಅದನ್ನು ಈಗ ಜಾರಿ ಮಾಡಿರೋದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಆದೇಶ ಪರಿಶೀಲಿಸಿ ಕನ್ನಡ ಕಡ್ಡಾಯ ಮಾಡಲು ಮುಖ್ಯ ಇಲಾಖೆಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ” ಎಂದು ತಿಳಿಸಿದ್ದರು.

ದಿನಾಂಕ 3 ಡಿಸೆಂಬರ್ 2022ರಂದು ಮಹಿಳಾ ಮತ್ತು ಮಕ್ಕಳ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ಅಂದಿನ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ಮಲಾ ಎಸ್‌ ಖಟಾವರ್‌ಕರ್‌ ಅವರ ಹೆಸರಿನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯ ಪ್ರತಿಯನ್ನು ಹಂಚಿಕೊಂಡಿದ್ದರು.

ಖಚಿತ ಮೂಲಗಳಿಂದ ನಮಗೆ ದೊರೆತಿರುವ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಆದೇಶದಂತೆ ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ ವ್ಯಾಪ್ತಿಯ ಅಂಗನವಾಡಿಗಳಿಗೆ ಕಾರ್ಯರ್ತೆಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಮುಸ್ಲಿಂ ಜನ ಸಂಖ್ಯೆ ಹೆಚ್ಚಿರುವ ಪ್ರದೇಶವಾದ್ದರಿಂದ ಕನ್ನಡದ ಜೊತೆ ಉರ್ದು ಭಾಷೆ ಕಡ್ಡಾಯಗೊಳಿಸಲಾಗಿದೆ. ಇಲ್ಲಿ ಮುಸ್ಲಿಮರನ್ನು ಓಲೈಸಲು ಪ್ರಸ್ತುತ ಇರುವ ರಾಜ್ಯ ಕಾಂಗ್ರೆಸ್ ಸರ್ಕಾರ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿಲ್ಲ.

ಸಂವಾದ ಸೇರಿದಂತ ಬಲಪಂಥೀಯ ಮಾಧ್ಯಮಗಳಲ್ಲಿ ಉರ್ದು ಭಾಷೆಯನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ, ಹಿಂದೂ ವಿರೋಧಿ ಸರ್ಕಾರ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...