Homeಫ್ಯಾಕ್ಟ್‌ಚೆಕ್Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ 'ಉರ್ದು ಭಾಷೆ' ಕಡ್ಡಾಯಗೊಳಿಸಿದೆಯಾ?

Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ ‘ಉರ್ದು ಭಾಷೆ’ ಕಡ್ಡಾಯಗೊಳಿಸಿದೆಯಾ?

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂಬ ಸುದ್ದಿಯೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತುಮಕೂರು ನಗರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗೌರವಧನ ಆಧಾರಿತ ಅಂಗನವಾಡಿ ಕಾರ್ಯರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂಬ ಪತ್ರಿಕೆಯ ಪ್ರಕಟಣೆಯೊಂದನ್ನು ಮುಂದಿಟ್ಟುಕೊಂಡು ಈ ಸುದ್ದಿ ಹಬ್ಬಲಾಗಿದೆ.

Accidental Bhakth‘ಎಂಬ ಎಕ್ಸ್‌ ಖಾತೆಯಲ್ಲಿ “ಅಂಗನವಾಡಿ ಸಹಾಯಕಿಯರಿಗೆ ಉರ್ದು ಬರಲೇಬೇಕು, ಮಹಾನಗರ ಪಾಲಿಕೆ ಮೇಲೆ ಉರ್ದು ಬೋರ್ಡ್ ಇರಲೇ ಬೇಕು, ಕನ್ನಡ ಪರ ಬೋರ್ಡ್ ಹಾಕಿ ಅಂದವರನ್ನು ಒದ್ದು ಒಳಗೆ ಹಾಕಿದ್ದಾಯಿತು, ಕನ್ನಡರಾಮಯ್ಯ ಅಂತ ಅವನಿಗೆ ಮೆರವಣಿಗೆ ಮಾಡಿದ ಹೇಲಾಟಗಾರರ ಆತ್ಮಕ್ಕೆ ಎರಡು ನಿಮಿಷ ಮೌನಾಚರಣೆ ಮಾಡೋಣ ಬ್ರದರ್” ಎಂದು ಬರೆದುಕೊಂಡು ಮೇಲಿನ ಸುದ್ದಿಯ ಪತ್ರಿಕಾ ವರದಿ ಹಂಚಿಕೊಳ್ಳಲಾಗಿದೆ.

ಸಂವಾದ (Samvada) ಎಂಬ ಬಲಪಂಥೀಯ ಫೇಸ್‌ಬುಕ್ ಚಾನೆಲ್‌ನಲ್ಲಿ “ಉರ್ದು ಬಲ್ಲವರಿಗೆ ಮಾತ್ರ ಕೆಲಸ ಕರ್ನಾಟಕದಲ್ಲಿ ಘಾಜ್ವ-ಎ-ಹಿಂದ್‌ ಶುರು” ಎಂಬ ಶೀರ್ಷೆಕೆಯಲ್ಲಿ ವಿಡಿಯೋ ವರದಿಯನ್ನು ಮಾಡಲಾಗಿದೆ. ಈ ವರದಿಯಲ್ಲಿ ಈ ಹಿಂದಿನ ಆಗು-ಹೋಗುಗಳನ್ನು ಸೇರಿಸಿ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಕನ್ನಡ ವಿರೋಧಿ, ಉರ್ದು ಭಾಷೆ ಮತ್ತು ಮುಸ್ಲಿಮರ ಪರ ಎಂದು ಬಿಂಬಿಸಲಾಗಿದೆ. ವರದಿಯಲ್ಲಿ ಕನ್ನಡ ಹೋರಾಟಗಾರರು ಮತ್ತು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ.

ಫ್ಯಾಕ್ಟ್‌ಚೆಕ್‌ : ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆಯ ಜೊತೆಗೆ ಉರ್ದು ಗೊತ್ತಿರಬೇಕು ಎಂಬ ಪತ್ರಿಕಾ ಪ್ರಕಟಣೆ ಮತ್ತು ಅದರ ಸುತ್ತ ಹರಡುತ್ತಿರುವ ಕೋಮು ಆಯಾಮದ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲನೆಯನ್ನು ನಾನುಗೌರಿ. ಕಾಂ ಮಾಡಿದೆ.

ಸರ್ಕಾರ ಅಥವಾ ತುಮಕೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿಜವಾಗಿಯೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದೆಯಾ? ಎಂಬ ಸತ್ಯವನ್ನು ನಾವು ಹೊರಗೆಳೆದಿದ್ದೇವೆ.

ಇದಕ್ಕಾಗಿ ನಾವು ಮೊದಲು ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇವೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಪ್ರಸ್ತುತ ಅಂಗನವಾಡಿ ಹುದ್ದೆಗಳ ಭರ್ತಿಗೆ 2022ರ ಡಿಸೆಂಬರ್ ತಿಂಗಳಲ್ಲಿ ಅಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೀಡಿದ ಆದೇಶದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದ ಪ್ರಕಾರ ರಾಜ್ಯದ ಯಾವುದೇ ಪ್ರದೇಶದ ಅಂಗನವಾಡಿಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ನೇಮಕ ಮಾಡಿಕೊಳ್ಳುವಾಗ, ‘ಆ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಜನಸಂಖ್ಯೆಯ ಶೇ.25ರಷ್ಟು ಜನರು ಮಾತನಾಡುವ ಭಾಷೆ’ ಅರ್ಜಿ ಸಲ್ಲಿಸುವವರಿಗೆ ಗೊತ್ತಿರಬೇಕು.

ಉದಾಹರಣೆಗೆ : ಮುಸ್ಲಿಮರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗಳಿಗೆ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳುವಾಗ ಅವರಿಗೆ ಕನ್ನಡದ ಜೊತೆಗೆ ಉರ್ದು ಭಾಷೆ ಗೊತ್ತಿರಬೇಕು. ಕ್ರೈಸ್ತ ಸಮುದಾಯದ ಜನರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗೆ ನೇಮಿಸಿಕೊಳ್ಳುವುದಾದರೆ ಅವರಿಗೆ ಕ್ರೈಸ್ತರು ಮಾತನಾಡುವ ಕೊಂಕಣಿಯೋ ಇತರ ಯಾವುದೇ ಭಾಷೆ ತಿಳಿದಿರಬೇಕು.

ಇಲ್ಲಿ ಕನ್ನಡದ ಜೊತೆಗೆ ಉರ್ದು ಮಾತ್ರ ಗೊತ್ತಿರಬೇಕು ಎಂದು ಎಲ್ಲೂ ಕಡ್ಡಾಯ ಮಾಡಿಲ್ಲ. ಅಂಗನವಾಡಿ ಇರುವ ಪ್ರದೇಶದ ಜನ ಸಂಖ್ಯೆಯ ಶೇ.25ರಷ್ಟು ಅಲ್ಪ ಸಂಖ್ಯಾತರು ಮಾತನಾಡುವ ಭಾಷೆ ಗೊತ್ತಿರಬೇಕು ಎಂದು ಹೇಳಲಾಗಿದೆ. ಆ ಭಾಷೆ ಉರ್ದು, ಕೊಂಕಣಿ, ಪಂಜಾಬಿ ಇತರ ಯಾವುದೂ ಆಗಿರಬಹುದು. ಇಲ್ಲಿ ಗಮನಾರ್ಹ ಸಂಗತಿ ಏನೆಂದರೆ, ಎಲ್ಲಾ ಕಡೆಯೂ ಕನ್ನಡ ಗೊತ್ತಿರಬೇಕೆನ್ನುವುದು ಮೊದಲ ಆದ್ಯತೆಯಾಗಿದೆ. ನಂತರ ಇತರ ಭಾಷೆಗಳು ತಿಳಿದಿರಬೇಕು ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಕನ್ನಡ ಜೊತೆ ಉರ್ದು ಭಾಷೆಯನ್ನೇ ಯಾಕೆ ಕಡ್ಡಾಯ ಮಾಡಲಾಗಿದೆ?

ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ಗಳ ವಿವಿಧ ಪ್ರದೇಶಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಅರ್ಜಿ ಸಲ್ಲಿಸುವವರಿಗೆ ಕನ್ನಡದ ಜೊತೆ ಉರ್ದು ಭಾಷೆ ತಿಳಿದಿರಬೇಕು ಎಂದು ಹೇಳಲಾಗಿದೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಮೇಲೆ ಅರ್ಜಿ ಆಹ್ವಾನಿಸಿರುವ ತುಮಕೂರಿನ 11 ವಾರ್ಡ್‌ಗಳ ಎಲ್ಲಾ ಅಂಗನವಾಡಿಗಳು ಕೂಡ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ಇರುವ ಪ್ರದೇಶಗಳದ್ದಾಗಿವೆ. ಮುಸ್ಲಿಮರು ಉರ್ದು ಭಾಷೆ ಮಾತನಾಡುವ ಕಾರಣ, ಸರ್ಕಾರದ ನಿಯಮದಂತೆ ಕನ್ನಡದ ಜೊತೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಒಂದು ವೇಳೆ ಕೊಂಕಣಿ ಮಾತನಾಡುವವರು ಹೆಚ್ಚಿದ್ದರೆ, ಕನ್ನಡದ ಜೊತೆ ಅವರ ಭಾಷೆಯನ್ನು ಕಡ್ಡಾಯಗೊಳಿಸಲಾಗುತ್ತಿತ್ತು.

‘Accidental Bhakth’ಎಕ್ಸ್‌ ಖಾತೆಯ ಪೋಸ್ಟ್‌ಗೆ ಜನವರಿ 18ರಂದು ಪ್ರತಿಕ್ರಿಯೆ ನೀಡಿದ್ದ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ “ನಾಳೆ ಇದರ ಅಸಲಿ ಸತ್ಯ ಎಲ್ಲೆರೆದುರು ಗೊತ್ತು ಮಾಡುತ್ತೇವೆ. ಈ ವಿಷಯವಾಗಿ ನೂರಾರು ಜನ ನನ್ನನ್ನು ಟ್ಯಾಗ್ ಮಾಡಿ ಕನ್ನಡ ಹೋರಾಟಗಾರರ ಮೇಲೆ ಅಸಭ್ಯ ಪದಗಳನ್ನು ಬಳಸಿ ಪ್ರಶ್ನೆ ಮಾಡಿದ್ದೀರಿ. ಇರಲಿ ನಾವಂತೂ ಯಾವುದಕ್ಕೂ ಹಿಂದೆ ಬೀಳೊಲ್ಲ. ನಾಳೆ ಇದಕ್ಕೆ ಉತ್ತರ ಸಿಗಲಿದೆ. ಪೋಸ್ಟ್ ಡಿಲೀಟ್ ಮಾಡದೆ ನಮ್ಮ ಉತ್ತರವನ್ನು ಹೀಗೆ ತಮ್ಮ ವಾಲ್ ಮೇಲೆ ಹಾಕಬೇಕು” ಎಂದಿದ್ದರು.

ಜನವರಿ 19ರಂದು ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದ ಅವರು, “ಅಂಗನವಾಡಿ ಶಿಕ್ಷಕರ ನೇಮಕ ವಿಚಾರವಾಗಿ ಇಂದು ತುಮಕೂರಿನ ಮಹಿಳಾ ಮಕ್ಕಳ ಇಲಾಖೆಗೆ ಹೋಗಿ ವಿಚಾರಿಸಲಾಗಿದೆ. ಈ ಆದೇಶ ಕಳೆದ ಸರ್ಕಾರದ ಅವಧಿ ದಿನಾಂಕ 3-12-2022 ರಂದು ಆಗಿದ್ದು, ಅದನ್ನು ಈಗ ಜಾರಿ ಮಾಡಿರೋದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಆದೇಶ ಪರಿಶೀಲಿಸಿ ಕನ್ನಡ ಕಡ್ಡಾಯ ಮಾಡಲು ಮುಖ್ಯ ಇಲಾಖೆಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ” ಎಂದು ತಿಳಿಸಿದ್ದರು.

ದಿನಾಂಕ 3 ಡಿಸೆಂಬರ್ 2022ರಂದು ಮಹಿಳಾ ಮತ್ತು ಮಕ್ಕಳ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ಅಂದಿನ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ಮಲಾ ಎಸ್‌ ಖಟಾವರ್‌ಕರ್‌ ಅವರ ಹೆಸರಿನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯ ಪ್ರತಿಯನ್ನು ಹಂಚಿಕೊಂಡಿದ್ದರು.

ಖಚಿತ ಮೂಲಗಳಿಂದ ನಮಗೆ ದೊರೆತಿರುವ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಆದೇಶದಂತೆ ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ ವ್ಯಾಪ್ತಿಯ ಅಂಗನವಾಡಿಗಳಿಗೆ ಕಾರ್ಯರ್ತೆಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಮುಸ್ಲಿಂ ಜನ ಸಂಖ್ಯೆ ಹೆಚ್ಚಿರುವ ಪ್ರದೇಶವಾದ್ದರಿಂದ ಕನ್ನಡದ ಜೊತೆ ಉರ್ದು ಭಾಷೆ ಕಡ್ಡಾಯಗೊಳಿಸಲಾಗಿದೆ. ಇಲ್ಲಿ ಮುಸ್ಲಿಮರನ್ನು ಓಲೈಸಲು ಪ್ರಸ್ತುತ ಇರುವ ರಾಜ್ಯ ಕಾಂಗ್ರೆಸ್ ಸರ್ಕಾರ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿಲ್ಲ.

ಸಂವಾದ ಸೇರಿದಂತ ಬಲಪಂಥೀಯ ಮಾಧ್ಯಮಗಳಲ್ಲಿ ಉರ್ದು ಭಾಷೆಯನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ, ಹಿಂದೂ ವಿರೋಧಿ ಸರ್ಕಾರ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...