Homeಫ್ಯಾಕ್ಟ್‌ಚೆಕ್Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ 'ಉರ್ದು ಭಾಷೆ' ಕಡ್ಡಾಯಗೊಳಿಸಿದೆಯಾ?

Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ ‘ಉರ್ದು ಭಾಷೆ’ ಕಡ್ಡಾಯಗೊಳಿಸಿದೆಯಾ?

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂಬ ಸುದ್ದಿಯೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತುಮಕೂರು ನಗರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗೌರವಧನ ಆಧಾರಿತ ಅಂಗನವಾಡಿ ಕಾರ್ಯರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂಬ ಪತ್ರಿಕೆಯ ಪ್ರಕಟಣೆಯೊಂದನ್ನು ಮುಂದಿಟ್ಟುಕೊಂಡು ಈ ಸುದ್ದಿ ಹಬ್ಬಲಾಗಿದೆ.

Accidental Bhakth‘ಎಂಬ ಎಕ್ಸ್‌ ಖಾತೆಯಲ್ಲಿ “ಅಂಗನವಾಡಿ ಸಹಾಯಕಿಯರಿಗೆ ಉರ್ದು ಬರಲೇಬೇಕು, ಮಹಾನಗರ ಪಾಲಿಕೆ ಮೇಲೆ ಉರ್ದು ಬೋರ್ಡ್ ಇರಲೇ ಬೇಕು, ಕನ್ನಡ ಪರ ಬೋರ್ಡ್ ಹಾಕಿ ಅಂದವರನ್ನು ಒದ್ದು ಒಳಗೆ ಹಾಕಿದ್ದಾಯಿತು, ಕನ್ನಡರಾಮಯ್ಯ ಅಂತ ಅವನಿಗೆ ಮೆರವಣಿಗೆ ಮಾಡಿದ ಹೇಲಾಟಗಾರರ ಆತ್ಮಕ್ಕೆ ಎರಡು ನಿಮಿಷ ಮೌನಾಚರಣೆ ಮಾಡೋಣ ಬ್ರದರ್” ಎಂದು ಬರೆದುಕೊಂಡು ಮೇಲಿನ ಸುದ್ದಿಯ ಪತ್ರಿಕಾ ವರದಿ ಹಂಚಿಕೊಳ್ಳಲಾಗಿದೆ.

ಸಂವಾದ (Samvada) ಎಂಬ ಬಲಪಂಥೀಯ ಫೇಸ್‌ಬುಕ್ ಚಾನೆಲ್‌ನಲ್ಲಿ “ಉರ್ದು ಬಲ್ಲವರಿಗೆ ಮಾತ್ರ ಕೆಲಸ ಕರ್ನಾಟಕದಲ್ಲಿ ಘಾಜ್ವ-ಎ-ಹಿಂದ್‌ ಶುರು” ಎಂಬ ಶೀರ್ಷೆಕೆಯಲ್ಲಿ ವಿಡಿಯೋ ವರದಿಯನ್ನು ಮಾಡಲಾಗಿದೆ. ಈ ವರದಿಯಲ್ಲಿ ಈ ಹಿಂದಿನ ಆಗು-ಹೋಗುಗಳನ್ನು ಸೇರಿಸಿ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಕನ್ನಡ ವಿರೋಧಿ, ಉರ್ದು ಭಾಷೆ ಮತ್ತು ಮುಸ್ಲಿಮರ ಪರ ಎಂದು ಬಿಂಬಿಸಲಾಗಿದೆ. ವರದಿಯಲ್ಲಿ ಕನ್ನಡ ಹೋರಾಟಗಾರರು ಮತ್ತು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ.

ಫ್ಯಾಕ್ಟ್‌ಚೆಕ್‌ : ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆಯ ಜೊತೆಗೆ ಉರ್ದು ಗೊತ್ತಿರಬೇಕು ಎಂಬ ಪತ್ರಿಕಾ ಪ್ರಕಟಣೆ ಮತ್ತು ಅದರ ಸುತ್ತ ಹರಡುತ್ತಿರುವ ಕೋಮು ಆಯಾಮದ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲನೆಯನ್ನು ನಾನುಗೌರಿ. ಕಾಂ ಮಾಡಿದೆ.

ಸರ್ಕಾರ ಅಥವಾ ತುಮಕೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿಜವಾಗಿಯೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದೆಯಾ? ಎಂಬ ಸತ್ಯವನ್ನು ನಾವು ಹೊರಗೆಳೆದಿದ್ದೇವೆ.

ಇದಕ್ಕಾಗಿ ನಾವು ಮೊದಲು ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇವೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಪ್ರಸ್ತುತ ಅಂಗನವಾಡಿ ಹುದ್ದೆಗಳ ಭರ್ತಿಗೆ 2022ರ ಡಿಸೆಂಬರ್ ತಿಂಗಳಲ್ಲಿ ಅಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೀಡಿದ ಆದೇಶದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದ ಪ್ರಕಾರ ರಾಜ್ಯದ ಯಾವುದೇ ಪ್ರದೇಶದ ಅಂಗನವಾಡಿಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ನೇಮಕ ಮಾಡಿಕೊಳ್ಳುವಾಗ, ‘ಆ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಜನಸಂಖ್ಯೆಯ ಶೇ.25ರಷ್ಟು ಜನರು ಮಾತನಾಡುವ ಭಾಷೆ’ ಅರ್ಜಿ ಸಲ್ಲಿಸುವವರಿಗೆ ಗೊತ್ತಿರಬೇಕು.

ಉದಾಹರಣೆಗೆ : ಮುಸ್ಲಿಮರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗಳಿಗೆ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳುವಾಗ ಅವರಿಗೆ ಕನ್ನಡದ ಜೊತೆಗೆ ಉರ್ದು ಭಾಷೆ ಗೊತ್ತಿರಬೇಕು. ಕ್ರೈಸ್ತ ಸಮುದಾಯದ ಜನರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗೆ ನೇಮಿಸಿಕೊಳ್ಳುವುದಾದರೆ ಅವರಿಗೆ ಕ್ರೈಸ್ತರು ಮಾತನಾಡುವ ಕೊಂಕಣಿಯೋ ಇತರ ಯಾವುದೇ ಭಾಷೆ ತಿಳಿದಿರಬೇಕು.

ಇಲ್ಲಿ ಕನ್ನಡದ ಜೊತೆಗೆ ಉರ್ದು ಮಾತ್ರ ಗೊತ್ತಿರಬೇಕು ಎಂದು ಎಲ್ಲೂ ಕಡ್ಡಾಯ ಮಾಡಿಲ್ಲ. ಅಂಗನವಾಡಿ ಇರುವ ಪ್ರದೇಶದ ಜನ ಸಂಖ್ಯೆಯ ಶೇ.25ರಷ್ಟು ಅಲ್ಪ ಸಂಖ್ಯಾತರು ಮಾತನಾಡುವ ಭಾಷೆ ಗೊತ್ತಿರಬೇಕು ಎಂದು ಹೇಳಲಾಗಿದೆ. ಆ ಭಾಷೆ ಉರ್ದು, ಕೊಂಕಣಿ, ಪಂಜಾಬಿ ಇತರ ಯಾವುದೂ ಆಗಿರಬಹುದು. ಇಲ್ಲಿ ಗಮನಾರ್ಹ ಸಂಗತಿ ಏನೆಂದರೆ, ಎಲ್ಲಾ ಕಡೆಯೂ ಕನ್ನಡ ಗೊತ್ತಿರಬೇಕೆನ್ನುವುದು ಮೊದಲ ಆದ್ಯತೆಯಾಗಿದೆ. ನಂತರ ಇತರ ಭಾಷೆಗಳು ತಿಳಿದಿರಬೇಕು ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಕನ್ನಡ ಜೊತೆ ಉರ್ದು ಭಾಷೆಯನ್ನೇ ಯಾಕೆ ಕಡ್ಡಾಯ ಮಾಡಲಾಗಿದೆ?

ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ಗಳ ವಿವಿಧ ಪ್ರದೇಶಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಅರ್ಜಿ ಸಲ್ಲಿಸುವವರಿಗೆ ಕನ್ನಡದ ಜೊತೆ ಉರ್ದು ಭಾಷೆ ತಿಳಿದಿರಬೇಕು ಎಂದು ಹೇಳಲಾಗಿದೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಮೇಲೆ ಅರ್ಜಿ ಆಹ್ವಾನಿಸಿರುವ ತುಮಕೂರಿನ 11 ವಾರ್ಡ್‌ಗಳ ಎಲ್ಲಾ ಅಂಗನವಾಡಿಗಳು ಕೂಡ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ಇರುವ ಪ್ರದೇಶಗಳದ್ದಾಗಿವೆ. ಮುಸ್ಲಿಮರು ಉರ್ದು ಭಾಷೆ ಮಾತನಾಡುವ ಕಾರಣ, ಸರ್ಕಾರದ ನಿಯಮದಂತೆ ಕನ್ನಡದ ಜೊತೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಒಂದು ವೇಳೆ ಕೊಂಕಣಿ ಮಾತನಾಡುವವರು ಹೆಚ್ಚಿದ್ದರೆ, ಕನ್ನಡದ ಜೊತೆ ಅವರ ಭಾಷೆಯನ್ನು ಕಡ್ಡಾಯಗೊಳಿಸಲಾಗುತ್ತಿತ್ತು.

‘Accidental Bhakth’ಎಕ್ಸ್‌ ಖಾತೆಯ ಪೋಸ್ಟ್‌ಗೆ ಜನವರಿ 18ರಂದು ಪ್ರತಿಕ್ರಿಯೆ ನೀಡಿದ್ದ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ “ನಾಳೆ ಇದರ ಅಸಲಿ ಸತ್ಯ ಎಲ್ಲೆರೆದುರು ಗೊತ್ತು ಮಾಡುತ್ತೇವೆ. ಈ ವಿಷಯವಾಗಿ ನೂರಾರು ಜನ ನನ್ನನ್ನು ಟ್ಯಾಗ್ ಮಾಡಿ ಕನ್ನಡ ಹೋರಾಟಗಾರರ ಮೇಲೆ ಅಸಭ್ಯ ಪದಗಳನ್ನು ಬಳಸಿ ಪ್ರಶ್ನೆ ಮಾಡಿದ್ದೀರಿ. ಇರಲಿ ನಾವಂತೂ ಯಾವುದಕ್ಕೂ ಹಿಂದೆ ಬೀಳೊಲ್ಲ. ನಾಳೆ ಇದಕ್ಕೆ ಉತ್ತರ ಸಿಗಲಿದೆ. ಪೋಸ್ಟ್ ಡಿಲೀಟ್ ಮಾಡದೆ ನಮ್ಮ ಉತ್ತರವನ್ನು ಹೀಗೆ ತಮ್ಮ ವಾಲ್ ಮೇಲೆ ಹಾಕಬೇಕು” ಎಂದಿದ್ದರು.

ಜನವರಿ 19ರಂದು ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದ ಅವರು, “ಅಂಗನವಾಡಿ ಶಿಕ್ಷಕರ ನೇಮಕ ವಿಚಾರವಾಗಿ ಇಂದು ತುಮಕೂರಿನ ಮಹಿಳಾ ಮಕ್ಕಳ ಇಲಾಖೆಗೆ ಹೋಗಿ ವಿಚಾರಿಸಲಾಗಿದೆ. ಈ ಆದೇಶ ಕಳೆದ ಸರ್ಕಾರದ ಅವಧಿ ದಿನಾಂಕ 3-12-2022 ರಂದು ಆಗಿದ್ದು, ಅದನ್ನು ಈಗ ಜಾರಿ ಮಾಡಿರೋದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಆದೇಶ ಪರಿಶೀಲಿಸಿ ಕನ್ನಡ ಕಡ್ಡಾಯ ಮಾಡಲು ಮುಖ್ಯ ಇಲಾಖೆಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ” ಎಂದು ತಿಳಿಸಿದ್ದರು.

ದಿನಾಂಕ 3 ಡಿಸೆಂಬರ್ 2022ರಂದು ಮಹಿಳಾ ಮತ್ತು ಮಕ್ಕಳ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ಅಂದಿನ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ಮಲಾ ಎಸ್‌ ಖಟಾವರ್‌ಕರ್‌ ಅವರ ಹೆಸರಿನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯ ಪ್ರತಿಯನ್ನು ಹಂಚಿಕೊಂಡಿದ್ದರು.

ಖಚಿತ ಮೂಲಗಳಿಂದ ನಮಗೆ ದೊರೆತಿರುವ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಆದೇಶದಂತೆ ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ ವ್ಯಾಪ್ತಿಯ ಅಂಗನವಾಡಿಗಳಿಗೆ ಕಾರ್ಯರ್ತೆಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಮುಸ್ಲಿಂ ಜನ ಸಂಖ್ಯೆ ಹೆಚ್ಚಿರುವ ಪ್ರದೇಶವಾದ್ದರಿಂದ ಕನ್ನಡದ ಜೊತೆ ಉರ್ದು ಭಾಷೆ ಕಡ್ಡಾಯಗೊಳಿಸಲಾಗಿದೆ. ಇಲ್ಲಿ ಮುಸ್ಲಿಮರನ್ನು ಓಲೈಸಲು ಪ್ರಸ್ತುತ ಇರುವ ರಾಜ್ಯ ಕಾಂಗ್ರೆಸ್ ಸರ್ಕಾರ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿಲ್ಲ.

ಸಂವಾದ ಸೇರಿದಂತ ಬಲಪಂಥೀಯ ಮಾಧ್ಯಮಗಳಲ್ಲಿ ಉರ್ದು ಭಾಷೆಯನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ, ಹಿಂದೂ ವಿರೋಧಿ ಸರ್ಕಾರ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...