Homeಫ್ಯಾಕ್ಟ್‌ಚೆಕ್Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ 'ಉರ್ದು ಭಾಷೆ' ಕಡ್ಡಾಯಗೊಳಿಸಿದೆಯಾ?

Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ ‘ಉರ್ದು ಭಾಷೆ’ ಕಡ್ಡಾಯಗೊಳಿಸಿದೆಯಾ?

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂಬ ಸುದ್ದಿಯೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತುಮಕೂರು ನಗರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗೌರವಧನ ಆಧಾರಿತ ಅಂಗನವಾಡಿ ಕಾರ್ಯರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂಬ ಪತ್ರಿಕೆಯ ಪ್ರಕಟಣೆಯೊಂದನ್ನು ಮುಂದಿಟ್ಟುಕೊಂಡು ಈ ಸುದ್ದಿ ಹಬ್ಬಲಾಗಿದೆ.

Accidental Bhakth‘ಎಂಬ ಎಕ್ಸ್‌ ಖಾತೆಯಲ್ಲಿ “ಅಂಗನವಾಡಿ ಸಹಾಯಕಿಯರಿಗೆ ಉರ್ದು ಬರಲೇಬೇಕು, ಮಹಾನಗರ ಪಾಲಿಕೆ ಮೇಲೆ ಉರ್ದು ಬೋರ್ಡ್ ಇರಲೇ ಬೇಕು, ಕನ್ನಡ ಪರ ಬೋರ್ಡ್ ಹಾಕಿ ಅಂದವರನ್ನು ಒದ್ದು ಒಳಗೆ ಹಾಕಿದ್ದಾಯಿತು, ಕನ್ನಡರಾಮಯ್ಯ ಅಂತ ಅವನಿಗೆ ಮೆರವಣಿಗೆ ಮಾಡಿದ ಹೇಲಾಟಗಾರರ ಆತ್ಮಕ್ಕೆ ಎರಡು ನಿಮಿಷ ಮೌನಾಚರಣೆ ಮಾಡೋಣ ಬ್ರದರ್” ಎಂದು ಬರೆದುಕೊಂಡು ಮೇಲಿನ ಸುದ್ದಿಯ ಪತ್ರಿಕಾ ವರದಿ ಹಂಚಿಕೊಳ್ಳಲಾಗಿದೆ.

ಸಂವಾದ (Samvada) ಎಂಬ ಬಲಪಂಥೀಯ ಫೇಸ್‌ಬುಕ್ ಚಾನೆಲ್‌ನಲ್ಲಿ “ಉರ್ದು ಬಲ್ಲವರಿಗೆ ಮಾತ್ರ ಕೆಲಸ ಕರ್ನಾಟಕದಲ್ಲಿ ಘಾಜ್ವ-ಎ-ಹಿಂದ್‌ ಶುರು” ಎಂಬ ಶೀರ್ಷೆಕೆಯಲ್ಲಿ ವಿಡಿಯೋ ವರದಿಯನ್ನು ಮಾಡಲಾಗಿದೆ. ಈ ವರದಿಯಲ್ಲಿ ಈ ಹಿಂದಿನ ಆಗು-ಹೋಗುಗಳನ್ನು ಸೇರಿಸಿ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಕನ್ನಡ ವಿರೋಧಿ, ಉರ್ದು ಭಾಷೆ ಮತ್ತು ಮುಸ್ಲಿಮರ ಪರ ಎಂದು ಬಿಂಬಿಸಲಾಗಿದೆ. ವರದಿಯಲ್ಲಿ ಕನ್ನಡ ಹೋರಾಟಗಾರರು ಮತ್ತು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ.

ಫ್ಯಾಕ್ಟ್‌ಚೆಕ್‌ : ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆಯ ಜೊತೆಗೆ ಉರ್ದು ಗೊತ್ತಿರಬೇಕು ಎಂಬ ಪತ್ರಿಕಾ ಪ್ರಕಟಣೆ ಮತ್ತು ಅದರ ಸುತ್ತ ಹರಡುತ್ತಿರುವ ಕೋಮು ಆಯಾಮದ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲನೆಯನ್ನು ನಾನುಗೌರಿ. ಕಾಂ ಮಾಡಿದೆ.

ಸರ್ಕಾರ ಅಥವಾ ತುಮಕೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿಜವಾಗಿಯೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದೆಯಾ? ಎಂಬ ಸತ್ಯವನ್ನು ನಾವು ಹೊರಗೆಳೆದಿದ್ದೇವೆ.

ಇದಕ್ಕಾಗಿ ನಾವು ಮೊದಲು ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇವೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಪ್ರಸ್ತುತ ಅಂಗನವಾಡಿ ಹುದ್ದೆಗಳ ಭರ್ತಿಗೆ 2022ರ ಡಿಸೆಂಬರ್ ತಿಂಗಳಲ್ಲಿ ಅಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೀಡಿದ ಆದೇಶದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದ ಪ್ರಕಾರ ರಾಜ್ಯದ ಯಾವುದೇ ಪ್ರದೇಶದ ಅಂಗನವಾಡಿಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ನೇಮಕ ಮಾಡಿಕೊಳ್ಳುವಾಗ, ‘ಆ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಜನಸಂಖ್ಯೆಯ ಶೇ.25ರಷ್ಟು ಜನರು ಮಾತನಾಡುವ ಭಾಷೆ’ ಅರ್ಜಿ ಸಲ್ಲಿಸುವವರಿಗೆ ಗೊತ್ತಿರಬೇಕು.

ಉದಾಹರಣೆಗೆ : ಮುಸ್ಲಿಮರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗಳಿಗೆ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳುವಾಗ ಅವರಿಗೆ ಕನ್ನಡದ ಜೊತೆಗೆ ಉರ್ದು ಭಾಷೆ ಗೊತ್ತಿರಬೇಕು. ಕ್ರೈಸ್ತ ಸಮುದಾಯದ ಜನರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗೆ ನೇಮಿಸಿಕೊಳ್ಳುವುದಾದರೆ ಅವರಿಗೆ ಕ್ರೈಸ್ತರು ಮಾತನಾಡುವ ಕೊಂಕಣಿಯೋ ಇತರ ಯಾವುದೇ ಭಾಷೆ ತಿಳಿದಿರಬೇಕು.

ಇಲ್ಲಿ ಕನ್ನಡದ ಜೊತೆಗೆ ಉರ್ದು ಮಾತ್ರ ಗೊತ್ತಿರಬೇಕು ಎಂದು ಎಲ್ಲೂ ಕಡ್ಡಾಯ ಮಾಡಿಲ್ಲ. ಅಂಗನವಾಡಿ ಇರುವ ಪ್ರದೇಶದ ಜನ ಸಂಖ್ಯೆಯ ಶೇ.25ರಷ್ಟು ಅಲ್ಪ ಸಂಖ್ಯಾತರು ಮಾತನಾಡುವ ಭಾಷೆ ಗೊತ್ತಿರಬೇಕು ಎಂದು ಹೇಳಲಾಗಿದೆ. ಆ ಭಾಷೆ ಉರ್ದು, ಕೊಂಕಣಿ, ಪಂಜಾಬಿ ಇತರ ಯಾವುದೂ ಆಗಿರಬಹುದು. ಇಲ್ಲಿ ಗಮನಾರ್ಹ ಸಂಗತಿ ಏನೆಂದರೆ, ಎಲ್ಲಾ ಕಡೆಯೂ ಕನ್ನಡ ಗೊತ್ತಿರಬೇಕೆನ್ನುವುದು ಮೊದಲ ಆದ್ಯತೆಯಾಗಿದೆ. ನಂತರ ಇತರ ಭಾಷೆಗಳು ತಿಳಿದಿರಬೇಕು ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಕನ್ನಡ ಜೊತೆ ಉರ್ದು ಭಾಷೆಯನ್ನೇ ಯಾಕೆ ಕಡ್ಡಾಯ ಮಾಡಲಾಗಿದೆ?

ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ಗಳ ವಿವಿಧ ಪ್ರದೇಶಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಅರ್ಜಿ ಸಲ್ಲಿಸುವವರಿಗೆ ಕನ್ನಡದ ಜೊತೆ ಉರ್ದು ಭಾಷೆ ತಿಳಿದಿರಬೇಕು ಎಂದು ಹೇಳಲಾಗಿದೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಮೇಲೆ ಅರ್ಜಿ ಆಹ್ವಾನಿಸಿರುವ ತುಮಕೂರಿನ 11 ವಾರ್ಡ್‌ಗಳ ಎಲ್ಲಾ ಅಂಗನವಾಡಿಗಳು ಕೂಡ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ಇರುವ ಪ್ರದೇಶಗಳದ್ದಾಗಿವೆ. ಮುಸ್ಲಿಮರು ಉರ್ದು ಭಾಷೆ ಮಾತನಾಡುವ ಕಾರಣ, ಸರ್ಕಾರದ ನಿಯಮದಂತೆ ಕನ್ನಡದ ಜೊತೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಒಂದು ವೇಳೆ ಕೊಂಕಣಿ ಮಾತನಾಡುವವರು ಹೆಚ್ಚಿದ್ದರೆ, ಕನ್ನಡದ ಜೊತೆ ಅವರ ಭಾಷೆಯನ್ನು ಕಡ್ಡಾಯಗೊಳಿಸಲಾಗುತ್ತಿತ್ತು.

‘Accidental Bhakth’ಎಕ್ಸ್‌ ಖಾತೆಯ ಪೋಸ್ಟ್‌ಗೆ ಜನವರಿ 18ರಂದು ಪ್ರತಿಕ್ರಿಯೆ ನೀಡಿದ್ದ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ “ನಾಳೆ ಇದರ ಅಸಲಿ ಸತ್ಯ ಎಲ್ಲೆರೆದುರು ಗೊತ್ತು ಮಾಡುತ್ತೇವೆ. ಈ ವಿಷಯವಾಗಿ ನೂರಾರು ಜನ ನನ್ನನ್ನು ಟ್ಯಾಗ್ ಮಾಡಿ ಕನ್ನಡ ಹೋರಾಟಗಾರರ ಮೇಲೆ ಅಸಭ್ಯ ಪದಗಳನ್ನು ಬಳಸಿ ಪ್ರಶ್ನೆ ಮಾಡಿದ್ದೀರಿ. ಇರಲಿ ನಾವಂತೂ ಯಾವುದಕ್ಕೂ ಹಿಂದೆ ಬೀಳೊಲ್ಲ. ನಾಳೆ ಇದಕ್ಕೆ ಉತ್ತರ ಸಿಗಲಿದೆ. ಪೋಸ್ಟ್ ಡಿಲೀಟ್ ಮಾಡದೆ ನಮ್ಮ ಉತ್ತರವನ್ನು ಹೀಗೆ ತಮ್ಮ ವಾಲ್ ಮೇಲೆ ಹಾಕಬೇಕು” ಎಂದಿದ್ದರು.

ಜನವರಿ 19ರಂದು ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದ ಅವರು, “ಅಂಗನವಾಡಿ ಶಿಕ್ಷಕರ ನೇಮಕ ವಿಚಾರವಾಗಿ ಇಂದು ತುಮಕೂರಿನ ಮಹಿಳಾ ಮಕ್ಕಳ ಇಲಾಖೆಗೆ ಹೋಗಿ ವಿಚಾರಿಸಲಾಗಿದೆ. ಈ ಆದೇಶ ಕಳೆದ ಸರ್ಕಾರದ ಅವಧಿ ದಿನಾಂಕ 3-12-2022 ರಂದು ಆಗಿದ್ದು, ಅದನ್ನು ಈಗ ಜಾರಿ ಮಾಡಿರೋದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಆದೇಶ ಪರಿಶೀಲಿಸಿ ಕನ್ನಡ ಕಡ್ಡಾಯ ಮಾಡಲು ಮುಖ್ಯ ಇಲಾಖೆಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ” ಎಂದು ತಿಳಿಸಿದ್ದರು.

ದಿನಾಂಕ 3 ಡಿಸೆಂಬರ್ 2022ರಂದು ಮಹಿಳಾ ಮತ್ತು ಮಕ್ಕಳ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ಅಂದಿನ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ಮಲಾ ಎಸ್‌ ಖಟಾವರ್‌ಕರ್‌ ಅವರ ಹೆಸರಿನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯ ಪ್ರತಿಯನ್ನು ಹಂಚಿಕೊಂಡಿದ್ದರು.

ಖಚಿತ ಮೂಲಗಳಿಂದ ನಮಗೆ ದೊರೆತಿರುವ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಆದೇಶದಂತೆ ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ ವ್ಯಾಪ್ತಿಯ ಅಂಗನವಾಡಿಗಳಿಗೆ ಕಾರ್ಯರ್ತೆಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಮುಸ್ಲಿಂ ಜನ ಸಂಖ್ಯೆ ಹೆಚ್ಚಿರುವ ಪ್ರದೇಶವಾದ್ದರಿಂದ ಕನ್ನಡದ ಜೊತೆ ಉರ್ದು ಭಾಷೆ ಕಡ್ಡಾಯಗೊಳಿಸಲಾಗಿದೆ. ಇಲ್ಲಿ ಮುಸ್ಲಿಮರನ್ನು ಓಲೈಸಲು ಪ್ರಸ್ತುತ ಇರುವ ರಾಜ್ಯ ಕಾಂಗ್ರೆಸ್ ಸರ್ಕಾರ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿಲ್ಲ.

ಸಂವಾದ ಸೇರಿದಂತ ಬಲಪಂಥೀಯ ಮಾಧ್ಯಮಗಳಲ್ಲಿ ಉರ್ದು ಭಾಷೆಯನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ, ಹಿಂದೂ ವಿರೋಧಿ ಸರ್ಕಾರ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...