Homeಫ್ಯಾಕ್ಟ್‌ಚೆಕ್FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಮೊಬೈಲ್‌ ಕಿತ್ತುಕೊಂಡಿದ್ದಕ್ಕೆ ಮಗುವೊಂದು ಬ್ಯಾಟ್‌ನಿಂದ ತನ್ನ ತಾಯಿಯ ತಲೆಗೆ ಹೊಡೆದ ವಿಡಿಯೋವೊಂದು ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ವಿಡಿಯೋ ಹಂಚಿಕೊಂಡ ಅನೇಕರು “ಇದು ನಿಮ್ಮ ಮನೆಯಲ್ಲೂ ಸಂಭವಿಸಬಹುದು” ಎಂದು ಬರೆದುಕೊಂಡಿದ್ದರು. ಕೆಲ ಮಾಧ್ಯಮಗಳು ಕೂಡ ವಿಡಿಯೋ ಹಂಚಿಕೊಂಡಿತ್ತು.

ವಿಡಿಯೋದಲ್ಲಿ ಬೆಡ್ ಮೇಲೆ ಕುಳಿತು ಮೊಬೈಲ್ ಒತ್ತುತ್ತಿದ್ದ ಮಗುವಿನ ಕೈಯಿಂದ ಮೊಬೈಲ್ ಕಿತ್ತುಕೊಳ್ಳುವ ತಾಯಿ ಗದರಿಸುತ್ತಾರೆ, ಓದುವಂತೆ ಸೂಚಿಸುತ್ತಾರೆ. ತಾಯಿಯ ಬೈಗುಳಕ್ಕೆ ಮಗು ಪಕ್ಕದಲ್ಲಿರುವ ಪುಸ್ತಕ ಎತ್ತಿಕೊಂಡು ಓದಲು ಶುರು ಮಾಡುತ್ತದೆ. ತಾಯಿ ನೆಲದಲ್ಲಿ ಕುಳಿತು ಊಟ ಮಾಡುತ್ತಿರುತ್ತಾರೆ. ಸ್ವಲ್ಪ ಹೊತ್ತಿನ ಬಳಿಕ ಮಗು ಪಕ್ಕದಲೇ ಇದ್ದ ಕ್ರಿಕೆಟ್ ಬ್ಯಾಟ್‌ ತೆಗೆದುಕೊಂಡು ತಾಯಿಯ ತಲೆಗೆ ಹೊಡೆಯುವ ದೃಶ್ಯವಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನಿಜವಾದುದ್ದು ಅಲ್ಲ, ಅದೊಂದು ಸ್ಕ್ರಿಪ್ಟೆಡ್ ವಿಡಿಯೋ ಆಗಿದೆ. ಮೊಬೈಲ್ ದುಷ್ಪರಿಣಾಮಗಳ ಕುರಿತು ಮಾಡಿದ ಜಾಗೃತಿ ವಿಡಿಯೋ.

‘ಐಡಿಯಾಸ್ ಫ್ಯಾಕ್ಟರಿ’ ಎಂಬ ಫೇಸ್‌ಬುಕ್ ಪೇಜ್ ನಿಯಮಿತವಾಗಿ ಇಂತಹ ವಿಡಿಯೋಗಳನ್ನು ಮಾಡುತ್ತಿರುತ್ತದೆ. ವಿಡಿಯೋ ಪೋಸ್ಟ್ ಮಾಡುವಾಗ “ಇದು ಸ್ಕ್ರಿಪ್ಟೆಡ್ ವಿಡಿಯೋ, ಮನೋರಂಜನೆ ಮತ್ತು ಶೈಕ್ಷಣಿಕ” ಉದ್ದೇಶಕ್ಕೆ ಮಾಡಲಾಗಿದೆ ಎಂದು ಸೂಚನೆಯನ್ನೂ ಪೇಜ್‌ನಲ್ಲಿ ನೀಡುತ್ತದೆ.

ತಾಯಿಯ ತಲೆಗೆ ಮಗು ಬ್ಯಾಟ್‌ನಿಂಡ ಹೊಡೆದ ವಿಡಿಯೋಗು “ಇದು ಸ್ಕ್ರಿಪ್ಟೆಡ್ ವಿಡಿಯೋ” ಎಂದು ಫೇಸ್‌ಬುಕ್ ಪೇಜ್ ಸೂಚನೆ ಹಾಕಿತ್ತು.

ಅಕ್ಟೋಬರ್ 1ರಂದು ಕೂಡ ವೈರಲ್ ವಿಡಿಯೋ ರೀತಿಯದ್ದೇ ಮತ್ತೊಂದು ವಿಡಿಯೋವನ್ನ ಐಡಿಯಾಸ್ ಫ್ಯಾಕ್ಟರಿ ಹಂಚಿಕೊಂಡಿತ್ತು. ಅದರಲ್ಲೂ ಮೊಬೈಲ್ ದುಷ್ಪರಿಣಾಮಗಳ ಕುರಿತ ದೃಶ್ಯವೊಂದನ್ನು ತೋರಿಸಿತ್ತು. ಆ ವಿಡಿಯೋ ಮತ್ತು ವೈರಲ್ ಆಗುತ್ತಿರುವ ವಿಡಿಯೋ ಒಂದೇ ಜಾಗದಲ್ಲಿ ಶೂಟ್ ಮಾಡಲಾಗಿತ್ತು. ಎರಡೂ ವಿಡಿಯೋಗಳಲ್ಲೂ ಟಿವಿ, ಫೋಟೋ ಒಂದೇ ರೀತಿ ಇರುವುದನ್ನು ನೋಡಬಹುದು.

ಒಟ್ಟಿನಲ್ಲಿ ಐಡಿಯಾಸ್ ಫ್ಯಾಕ್ಟರಿ ಎಂಬ ಫೇಸ್‌ಬುಕ್ ಪೇಜ್ ಜಾಗೃತಿ, ಮನೋರಂಜನೆ ಮತ್ತು ಶೈಕ್ಷಣಿಕ ಉದ್ದೇಶಕ್ಕೆ ಮಾಡಿದ ಸ್ಕ್ರಿಪ್ಟೆಡ್ ವಿಡಿಯೋ ನಿಜ ಎಂಬಂತೆ ವೈರಲ್ ಆಗಿದೆ.

ಇದನ್ನೂ ಓದಿ : FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...