Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಬ್ರಿಟನ್ ರಾಣಿಗಿಂತ ಸೋನಿಯಾ ಗಾಂಧಿ ಶ್ರೀಮಂತೆ ಎನ್ನುವ 2013ರ ಹಳೆಯ ಸುಳ್ಳು ಸುದ್ದಿಯೊಂದು ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇದೆ. ಟೈಮ್ಸ್ ಆಫ್ ಇಂಡಿಯಾ, ಉದಯವಾಣಿ, ವಿಜಯವಾಣಿ, ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದರಿಂದ ಅದು ಇಂದಿಗೂ ಸೋನಿಯಾ ಗಾಂಧಿ ವಿರೋಧಿಗಳಿಂದಾಗಿ ಷೇರ್ ಆಗುತ್ತಲೇ ಇದೆ.

ತೀರಾ ಇತ್ತೀಚಿನವರೆಗೆ ಫೇಸ್‌ಬುಕ್‌ ನಲ್ಲಿ ನಿಲುಮೆ ಎಂಬ ಬಲಪಂಥೀಯರ ಗುಂಪಿನಲ್ಲಿ ಬಸವ ರತ್ಕಲ್ ಎಂಬುವವರು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಆ ಸುಳ್ಳು ವರದಿಯ ಪತ್ರಿಕಾ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸೋನಿಯಾ ಗಾಂಧಿ ಆಸ್ತಿ 12,000 ಕೋಟಿ ಎಂದು ವರದಿಯಾಗಿದೆ. 50ಕ್ಕೂ ಹೆಚ್ಚು ಜನರು ಆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದೇ ಸುಳ್ಳು ಸುದ್ದಿಯನ್ನು ಈ ಹಿಂದೆ ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ, ರೈಲ್ವೆ ಮಂತ್ರಿ ಪಿಯೂಶ್ ಗೊಯಲ್ ಕಚೇರಿ, ನರೇಂದ್ರ ಮೋದಿ ಬೆಂಬಲಿಗರು ಕರ್ನಾಟಕ ಪೇಜ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಕರ್ನಾಟಕ ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂದು ಸುಳ್ಳು ಹರಡಿದ್ದರು.

ವಾಸ್ತವವೇನು?

2021 ರ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ  ಹೆಸರು ಇದೆಯೆ ಎಂದು ಹುಡುಕಿದಾಗ, ಆ ಪಟ್ಟಿಯಲ್ಲಿ ಅವರು ಇಲ್ಲವೆಂದು ತಿಳಿದುಬಂದಿದೆ. ಇಂಡಿಯಾಗೆ ಸಂಬಂಧಿಸಿದಂತೆ ಮುಖೇಶ್ ಅಂಬಾನಿ 10ನೇ ಸ್ಥಾನದಲ್ಲಿ ಇದ್ದಾರೆ. ಬಿಲಿಯನರ್‌ಗಳಿಗೆ ಸಂಬಂಧಿಸಿದ ರಿಯಲ್‌ –ಟೈಮ್‌ ಪಟ್ಟಿಯನ್ನು ಇಲ್ಲಿ ನೋಡಬಹುದು.

2019 ರ ಲೋಕಸಭಾ ಚುನಾವಣೆಯ ಅಫಿಡವಿಡಟ್‌ನಲ್ಲಿ ತನ್ನ ಆಸ್ತಿಗಳ ಬೆಲೆ ಸುಮಾರು 11.82 ಕೋಟಿ ರೂಪಾಯಿಗಳೆಂದು ಸೋನಿಯಾಗಾಂಧಿಯವರು ಘೋಷಿಸಿಕೊಂಡಿದ್ದಾರೆ.

ತಪ್ಪೊಪ್ಪಿಕೊಂಡ ವೆಬ್‌ಸೈಟ್‌ಗಳು

ಟೈಮ್ಸ್ ಆಫ್ ಇಂಡಿಯಾ ಮತ್ತು ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದವು. ಆದರೆ ಜಗತ್ತಿನಲ್ಲಿನ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಬ್ಬರು ಎಂದು ಹೇಳುತ್ತಾ, ʼಬಿಜೆನೆಸ್‌ ಇನ್ಸೈಡರ್‌ʼ ( ಸೋನಿಯಾ -4ನೇ ಸ್ಥಾನ) ಮತ್ತು ʼಹಾಫಿಂಗ್ಟನ್‌ ಪೋಸ್ಟ್‌ʼನವರು  ಈ ಹಿಂದೆ ಲೇಖನ ಪ್ರಕಟಿಸಿದ್ದರು. ಆದರೆ, ʼಬಿಜೆನೆಸ್‌ ಇನ್ಸೈಡರ್‌ʼನವರು ಸೋನಿಯಾಗೆ  ಸಂಬಂಧಿಸಿದಂತೆ ಡೇಟಾವನ್ನು ನಂಬಲಾರ್ಹ ವೆಬ್ಸೈಟ್‌ನಿಂದ ತೆಗೆದುಕೊಂಡಿಲ್ಲವೆಂದು ವರದಿಯನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದರು. ʼಹಾಫಿಂಗ್ಟನ್‌ ಪೋಸ್ಟ್‌ ನವರು ಸೋನಿಯಾ ಗಾಂಧಿ ಹೆಸರನ್ನು ಪಟ್ಟಿಯಿಂದ ತೆದೆದುಹಾಕಿ, ತಾವು ಸೋನಿಯಾ ಗಾಂಧಿಯವರ ಆಸ್ತಿಗಳ ಬೆಲೆಯನ್ನು ಪರಿಶೀಲಿಸಲು ಆಗುವುದಿಲ್ಲವೆಂದು ವಿವರಣೆ ನೀಡಿದ್ದಾರೆ.

ತದನಂತರ ಟೈಮ್ಸ್ ಆಫ್ ಇಂಡಿಯಾ ಸೇರಿ ಎಲ್ಲರೂ ತಮ್ಮ ಸ್ಟೋರಿಗಳನ್ನು ಡಿಲೀಟ್ ಮಾಡಿದರು. ಆದರೆ ಕನ್ನಡದ ಪತ್ರಿಕೆಗಳು ಪ್ರಿಂಟ್ ಮಾಡಿದ್ದರಿಂದ ಇಂದಿಗೂ ಆ ಪತ್ರಿಕಾ ತುಣುಕುಗಳು ಹರಿದಾಡುತ್ತಲೇ ಇವೆ. ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ; Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...