Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಬ್ರಿಟನ್ ರಾಣಿಗಿಂತ ಸೋನಿಯಾ ಗಾಂಧಿ ಶ್ರೀಮಂತೆ ಎನ್ನುವ 2013ರ ಹಳೆಯ ಸುಳ್ಳು ಸುದ್ದಿಯೊಂದು ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇದೆ. ಟೈಮ್ಸ್ ಆಫ್ ಇಂಡಿಯಾ, ಉದಯವಾಣಿ, ವಿಜಯವಾಣಿ, ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದರಿಂದ ಅದು ಇಂದಿಗೂ ಸೋನಿಯಾ ಗಾಂಧಿ ವಿರೋಧಿಗಳಿಂದಾಗಿ ಷೇರ್ ಆಗುತ್ತಲೇ ಇದೆ.

ತೀರಾ ಇತ್ತೀಚಿನವರೆಗೆ ಫೇಸ್‌ಬುಕ್‌ ನಲ್ಲಿ ನಿಲುಮೆ ಎಂಬ ಬಲಪಂಥೀಯರ ಗುಂಪಿನಲ್ಲಿ ಬಸವ ರತ್ಕಲ್ ಎಂಬುವವರು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಆ ಸುಳ್ಳು ವರದಿಯ ಪತ್ರಿಕಾ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸೋನಿಯಾ ಗಾಂಧಿ ಆಸ್ತಿ 12,000 ಕೋಟಿ ಎಂದು ವರದಿಯಾಗಿದೆ. 50ಕ್ಕೂ ಹೆಚ್ಚು ಜನರು ಆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದೇ ಸುಳ್ಳು ಸುದ್ದಿಯನ್ನು ಈ ಹಿಂದೆ ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ, ರೈಲ್ವೆ ಮಂತ್ರಿ ಪಿಯೂಶ್ ಗೊಯಲ್ ಕಚೇರಿ, ನರೇಂದ್ರ ಮೋದಿ ಬೆಂಬಲಿಗರು ಕರ್ನಾಟಕ ಪೇಜ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಕರ್ನಾಟಕ ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂದು ಸುಳ್ಳು ಹರಡಿದ್ದರು.

ವಾಸ್ತವವೇನು?

2021 ರ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ  ಹೆಸರು ಇದೆಯೆ ಎಂದು ಹುಡುಕಿದಾಗ, ಆ ಪಟ್ಟಿಯಲ್ಲಿ ಅವರು ಇಲ್ಲವೆಂದು ತಿಳಿದುಬಂದಿದೆ. ಇಂಡಿಯಾಗೆ ಸಂಬಂಧಿಸಿದಂತೆ ಮುಖೇಶ್ ಅಂಬಾನಿ 10ನೇ ಸ್ಥಾನದಲ್ಲಿ ಇದ್ದಾರೆ. ಬಿಲಿಯನರ್‌ಗಳಿಗೆ ಸಂಬಂಧಿಸಿದ ರಿಯಲ್‌ –ಟೈಮ್‌ ಪಟ್ಟಿಯನ್ನು ಇಲ್ಲಿ ನೋಡಬಹುದು.

2019 ರ ಲೋಕಸಭಾ ಚುನಾವಣೆಯ ಅಫಿಡವಿಡಟ್‌ನಲ್ಲಿ ತನ್ನ ಆಸ್ತಿಗಳ ಬೆಲೆ ಸುಮಾರು 11.82 ಕೋಟಿ ರೂಪಾಯಿಗಳೆಂದು ಸೋನಿಯಾಗಾಂಧಿಯವರು ಘೋಷಿಸಿಕೊಂಡಿದ್ದಾರೆ.

ತಪ್ಪೊಪ್ಪಿಕೊಂಡ ವೆಬ್‌ಸೈಟ್‌ಗಳು

ಟೈಮ್ಸ್ ಆಫ್ ಇಂಡಿಯಾ ಮತ್ತು ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದವು. ಆದರೆ ಜಗತ್ತಿನಲ್ಲಿನ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಬ್ಬರು ಎಂದು ಹೇಳುತ್ತಾ, ʼಬಿಜೆನೆಸ್‌ ಇನ್ಸೈಡರ್‌ʼ ( ಸೋನಿಯಾ -4ನೇ ಸ್ಥಾನ) ಮತ್ತು ʼಹಾಫಿಂಗ್ಟನ್‌ ಪೋಸ್ಟ್‌ʼನವರು  ಈ ಹಿಂದೆ ಲೇಖನ ಪ್ರಕಟಿಸಿದ್ದರು. ಆದರೆ, ʼಬಿಜೆನೆಸ್‌ ಇನ್ಸೈಡರ್‌ʼನವರು ಸೋನಿಯಾಗೆ  ಸಂಬಂಧಿಸಿದಂತೆ ಡೇಟಾವನ್ನು ನಂಬಲಾರ್ಹ ವೆಬ್ಸೈಟ್‌ನಿಂದ ತೆಗೆದುಕೊಂಡಿಲ್ಲವೆಂದು ವರದಿಯನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದರು. ʼಹಾಫಿಂಗ್ಟನ್‌ ಪೋಸ್ಟ್‌ ನವರು ಸೋನಿಯಾ ಗಾಂಧಿ ಹೆಸರನ್ನು ಪಟ್ಟಿಯಿಂದ ತೆದೆದುಹಾಕಿ, ತಾವು ಸೋನಿಯಾ ಗಾಂಧಿಯವರ ಆಸ್ತಿಗಳ ಬೆಲೆಯನ್ನು ಪರಿಶೀಲಿಸಲು ಆಗುವುದಿಲ್ಲವೆಂದು ವಿವರಣೆ ನೀಡಿದ್ದಾರೆ.

ತದನಂತರ ಟೈಮ್ಸ್ ಆಫ್ ಇಂಡಿಯಾ ಸೇರಿ ಎಲ್ಲರೂ ತಮ್ಮ ಸ್ಟೋರಿಗಳನ್ನು ಡಿಲೀಟ್ ಮಾಡಿದರು. ಆದರೆ ಕನ್ನಡದ ಪತ್ರಿಕೆಗಳು ಪ್ರಿಂಟ್ ಮಾಡಿದ್ದರಿಂದ ಇಂದಿಗೂ ಆ ಪತ್ರಿಕಾ ತುಣುಕುಗಳು ಹರಿದಾಡುತ್ತಲೇ ಇವೆ. ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ; Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....