Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಬ್ರಿಟನ್ ರಾಣಿಗಿಂತ ಸೋನಿಯಾ ಗಾಂಧಿ ಶ್ರೀಮಂತೆ ಎನ್ನುವ 2013ರ ಹಳೆಯ ಸುಳ್ಳು ಸುದ್ದಿಯೊಂದು ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇದೆ. ಟೈಮ್ಸ್ ಆಫ್ ಇಂಡಿಯಾ, ಉದಯವಾಣಿ, ವಿಜಯವಾಣಿ, ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದರಿಂದ ಅದು ಇಂದಿಗೂ ಸೋನಿಯಾ ಗಾಂಧಿ ವಿರೋಧಿಗಳಿಂದಾಗಿ ಷೇರ್ ಆಗುತ್ತಲೇ ಇದೆ.

ತೀರಾ ಇತ್ತೀಚಿನವರೆಗೆ ಫೇಸ್‌ಬುಕ್‌ ನಲ್ಲಿ ನಿಲುಮೆ ಎಂಬ ಬಲಪಂಥೀಯರ ಗುಂಪಿನಲ್ಲಿ ಬಸವ ರತ್ಕಲ್ ಎಂಬುವವರು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಆ ಸುಳ್ಳು ವರದಿಯ ಪತ್ರಿಕಾ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸೋನಿಯಾ ಗಾಂಧಿ ಆಸ್ತಿ 12,000 ಕೋಟಿ ಎಂದು ವರದಿಯಾಗಿದೆ. 50ಕ್ಕೂ ಹೆಚ್ಚು ಜನರು ಆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದೇ ಸುಳ್ಳು ಸುದ್ದಿಯನ್ನು ಈ ಹಿಂದೆ ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ, ರೈಲ್ವೆ ಮಂತ್ರಿ ಪಿಯೂಶ್ ಗೊಯಲ್ ಕಚೇರಿ, ನರೇಂದ್ರ ಮೋದಿ ಬೆಂಬಲಿಗರು ಕರ್ನಾಟಕ ಪೇಜ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಕರ್ನಾಟಕ ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂದು ಸುಳ್ಳು ಹರಡಿದ್ದರು.

ವಾಸ್ತವವೇನು?

2021 ರ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ  ಹೆಸರು ಇದೆಯೆ ಎಂದು ಹುಡುಕಿದಾಗ, ಆ ಪಟ್ಟಿಯಲ್ಲಿ ಅವರು ಇಲ್ಲವೆಂದು ತಿಳಿದುಬಂದಿದೆ. ಇಂಡಿಯಾಗೆ ಸಂಬಂಧಿಸಿದಂತೆ ಮುಖೇಶ್ ಅಂಬಾನಿ 10ನೇ ಸ್ಥಾನದಲ್ಲಿ ಇದ್ದಾರೆ. ಬಿಲಿಯನರ್‌ಗಳಿಗೆ ಸಂಬಂಧಿಸಿದ ರಿಯಲ್‌ –ಟೈಮ್‌ ಪಟ್ಟಿಯನ್ನು ಇಲ್ಲಿ ನೋಡಬಹುದು.

2019 ರ ಲೋಕಸಭಾ ಚುನಾವಣೆಯ ಅಫಿಡವಿಡಟ್‌ನಲ್ಲಿ ತನ್ನ ಆಸ್ತಿಗಳ ಬೆಲೆ ಸುಮಾರು 11.82 ಕೋಟಿ ರೂಪಾಯಿಗಳೆಂದು ಸೋನಿಯಾಗಾಂಧಿಯವರು ಘೋಷಿಸಿಕೊಂಡಿದ್ದಾರೆ.

ತಪ್ಪೊಪ್ಪಿಕೊಂಡ ವೆಬ್‌ಸೈಟ್‌ಗಳು

ಟೈಮ್ಸ್ ಆಫ್ ಇಂಡಿಯಾ ಮತ್ತು ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದವು. ಆದರೆ ಜಗತ್ತಿನಲ್ಲಿನ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಬ್ಬರು ಎಂದು ಹೇಳುತ್ತಾ, ʼಬಿಜೆನೆಸ್‌ ಇನ್ಸೈಡರ್‌ʼ ( ಸೋನಿಯಾ -4ನೇ ಸ್ಥಾನ) ಮತ್ತು ʼಹಾಫಿಂಗ್ಟನ್‌ ಪೋಸ್ಟ್‌ʼನವರು  ಈ ಹಿಂದೆ ಲೇಖನ ಪ್ರಕಟಿಸಿದ್ದರು. ಆದರೆ, ʼಬಿಜೆನೆಸ್‌ ಇನ್ಸೈಡರ್‌ʼನವರು ಸೋನಿಯಾಗೆ  ಸಂಬಂಧಿಸಿದಂತೆ ಡೇಟಾವನ್ನು ನಂಬಲಾರ್ಹ ವೆಬ್ಸೈಟ್‌ನಿಂದ ತೆಗೆದುಕೊಂಡಿಲ್ಲವೆಂದು ವರದಿಯನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದರು. ʼಹಾಫಿಂಗ್ಟನ್‌ ಪೋಸ್ಟ್‌ ನವರು ಸೋನಿಯಾ ಗಾಂಧಿ ಹೆಸರನ್ನು ಪಟ್ಟಿಯಿಂದ ತೆದೆದುಹಾಕಿ, ತಾವು ಸೋನಿಯಾ ಗಾಂಧಿಯವರ ಆಸ್ತಿಗಳ ಬೆಲೆಯನ್ನು ಪರಿಶೀಲಿಸಲು ಆಗುವುದಿಲ್ಲವೆಂದು ವಿವರಣೆ ನೀಡಿದ್ದಾರೆ.

ತದನಂತರ ಟೈಮ್ಸ್ ಆಫ್ ಇಂಡಿಯಾ ಸೇರಿ ಎಲ್ಲರೂ ತಮ್ಮ ಸ್ಟೋರಿಗಳನ್ನು ಡಿಲೀಟ್ ಮಾಡಿದರು. ಆದರೆ ಕನ್ನಡದ ಪತ್ರಿಕೆಗಳು ಪ್ರಿಂಟ್ ಮಾಡಿದ್ದರಿಂದ ಇಂದಿಗೂ ಆ ಪತ್ರಿಕಾ ತುಣುಕುಗಳು ಹರಿದಾಡುತ್ತಲೇ ಇವೆ. ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ; Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...