Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಬ್ರಿಟನ್ ರಾಣಿಗಿಂತ ಸೋನಿಯಾ ಗಾಂಧಿ ಶ್ರೀಮಂತೆ ಎನ್ನುವ 2013ರ ಹಳೆಯ ಸುಳ್ಳು ಸುದ್ದಿಯೊಂದು ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇದೆ. ಟೈಮ್ಸ್ ಆಫ್ ಇಂಡಿಯಾ, ಉದಯವಾಣಿ, ವಿಜಯವಾಣಿ, ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದರಿಂದ ಅದು ಇಂದಿಗೂ ಸೋನಿಯಾ ಗಾಂಧಿ ವಿರೋಧಿಗಳಿಂದಾಗಿ ಷೇರ್ ಆಗುತ್ತಲೇ ಇದೆ.

ತೀರಾ ಇತ್ತೀಚಿನವರೆಗೆ ಫೇಸ್‌ಬುಕ್‌ ನಲ್ಲಿ ನಿಲುಮೆ ಎಂಬ ಬಲಪಂಥೀಯರ ಗುಂಪಿನಲ್ಲಿ ಬಸವ ರತ್ಕಲ್ ಎಂಬುವವರು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಆ ಸುಳ್ಳು ವರದಿಯ ಪತ್ರಿಕಾ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸೋನಿಯಾ ಗಾಂಧಿ ಆಸ್ತಿ 12,000 ಕೋಟಿ ಎಂದು ವರದಿಯಾಗಿದೆ. 50ಕ್ಕೂ ಹೆಚ್ಚು ಜನರು ಆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದೇ ಸುಳ್ಳು ಸುದ್ದಿಯನ್ನು ಈ ಹಿಂದೆ ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ, ರೈಲ್ವೆ ಮಂತ್ರಿ ಪಿಯೂಶ್ ಗೊಯಲ್ ಕಚೇರಿ, ನರೇಂದ್ರ ಮೋದಿ ಬೆಂಬಲಿಗರು ಕರ್ನಾಟಕ ಪೇಜ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಕರ್ನಾಟಕ ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂದು ಸುಳ್ಳು ಹರಡಿದ್ದರು.

ವಾಸ್ತವವೇನು?

2021 ರ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ  ಹೆಸರು ಇದೆಯೆ ಎಂದು ಹುಡುಕಿದಾಗ, ಆ ಪಟ್ಟಿಯಲ್ಲಿ ಅವರು ಇಲ್ಲವೆಂದು ತಿಳಿದುಬಂದಿದೆ. ಇಂಡಿಯಾಗೆ ಸಂಬಂಧಿಸಿದಂತೆ ಮುಖೇಶ್ ಅಂಬಾನಿ 10ನೇ ಸ್ಥಾನದಲ್ಲಿ ಇದ್ದಾರೆ. ಬಿಲಿಯನರ್‌ಗಳಿಗೆ ಸಂಬಂಧಿಸಿದ ರಿಯಲ್‌ –ಟೈಮ್‌ ಪಟ್ಟಿಯನ್ನು ಇಲ್ಲಿ ನೋಡಬಹುದು.

2019 ರ ಲೋಕಸಭಾ ಚುನಾವಣೆಯ ಅಫಿಡವಿಡಟ್‌ನಲ್ಲಿ ತನ್ನ ಆಸ್ತಿಗಳ ಬೆಲೆ ಸುಮಾರು 11.82 ಕೋಟಿ ರೂಪಾಯಿಗಳೆಂದು ಸೋನಿಯಾಗಾಂಧಿಯವರು ಘೋಷಿಸಿಕೊಂಡಿದ್ದಾರೆ.

ತಪ್ಪೊಪ್ಪಿಕೊಂಡ ವೆಬ್‌ಸೈಟ್‌ಗಳು

ಟೈಮ್ಸ್ ಆಫ್ ಇಂಡಿಯಾ ಮತ್ತು ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದವು. ಆದರೆ ಜಗತ್ತಿನಲ್ಲಿನ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಬ್ಬರು ಎಂದು ಹೇಳುತ್ತಾ, ʼಬಿಜೆನೆಸ್‌ ಇನ್ಸೈಡರ್‌ʼ ( ಸೋನಿಯಾ -4ನೇ ಸ್ಥಾನ) ಮತ್ತು ʼಹಾಫಿಂಗ್ಟನ್‌ ಪೋಸ್ಟ್‌ʼನವರು  ಈ ಹಿಂದೆ ಲೇಖನ ಪ್ರಕಟಿಸಿದ್ದರು. ಆದರೆ, ʼಬಿಜೆನೆಸ್‌ ಇನ್ಸೈಡರ್‌ʼನವರು ಸೋನಿಯಾಗೆ  ಸಂಬಂಧಿಸಿದಂತೆ ಡೇಟಾವನ್ನು ನಂಬಲಾರ್ಹ ವೆಬ್ಸೈಟ್‌ನಿಂದ ತೆಗೆದುಕೊಂಡಿಲ್ಲವೆಂದು ವರದಿಯನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದರು. ʼಹಾಫಿಂಗ್ಟನ್‌ ಪೋಸ್ಟ್‌ ನವರು ಸೋನಿಯಾ ಗಾಂಧಿ ಹೆಸರನ್ನು ಪಟ್ಟಿಯಿಂದ ತೆದೆದುಹಾಕಿ, ತಾವು ಸೋನಿಯಾ ಗಾಂಧಿಯವರ ಆಸ್ತಿಗಳ ಬೆಲೆಯನ್ನು ಪರಿಶೀಲಿಸಲು ಆಗುವುದಿಲ್ಲವೆಂದು ವಿವರಣೆ ನೀಡಿದ್ದಾರೆ.

ತದನಂತರ ಟೈಮ್ಸ್ ಆಫ್ ಇಂಡಿಯಾ ಸೇರಿ ಎಲ್ಲರೂ ತಮ್ಮ ಸ್ಟೋರಿಗಳನ್ನು ಡಿಲೀಟ್ ಮಾಡಿದರು. ಆದರೆ ಕನ್ನಡದ ಪತ್ರಿಕೆಗಳು ಪ್ರಿಂಟ್ ಮಾಡಿದ್ದರಿಂದ ಇಂದಿಗೂ ಆ ಪತ್ರಿಕಾ ತುಣುಕುಗಳು ಹರಿದಾಡುತ್ತಲೇ ಇವೆ. ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ; Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...