Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಬ್ರಿಟನ್ ರಾಣಿಗಿಂತ ಸೋನಿಯಾ ಗಾಂಧಿ ಶ್ರೀಮಂತೆ ಎನ್ನುವ 2013ರ ಹಳೆಯ ಸುಳ್ಳು ಸುದ್ದಿಯೊಂದು ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇದೆ. ಟೈಮ್ಸ್ ಆಫ್ ಇಂಡಿಯಾ, ಉದಯವಾಣಿ, ವಿಜಯವಾಣಿ, ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದರಿಂದ ಅದು ಇಂದಿಗೂ ಸೋನಿಯಾ ಗಾಂಧಿ ವಿರೋಧಿಗಳಿಂದಾಗಿ ಷೇರ್ ಆಗುತ್ತಲೇ ಇದೆ.

ತೀರಾ ಇತ್ತೀಚಿನವರೆಗೆ ಫೇಸ್‌ಬುಕ್‌ ನಲ್ಲಿ ನಿಲುಮೆ ಎಂಬ ಬಲಪಂಥೀಯರ ಗುಂಪಿನಲ್ಲಿ ಬಸವ ರತ್ಕಲ್ ಎಂಬುವವರು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಆ ಸುಳ್ಳು ವರದಿಯ ಪತ್ರಿಕಾ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸೋನಿಯಾ ಗಾಂಧಿ ಆಸ್ತಿ 12,000 ಕೋಟಿ ಎಂದು ವರದಿಯಾಗಿದೆ. 50ಕ್ಕೂ ಹೆಚ್ಚು ಜನರು ಆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದೇ ಸುಳ್ಳು ಸುದ್ದಿಯನ್ನು ಈ ಹಿಂದೆ ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ, ರೈಲ್ವೆ ಮಂತ್ರಿ ಪಿಯೂಶ್ ಗೊಯಲ್ ಕಚೇರಿ, ನರೇಂದ್ರ ಮೋದಿ ಬೆಂಬಲಿಗರು ಕರ್ನಾಟಕ ಪೇಜ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಕರ್ನಾಟಕ ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂದು ಸುಳ್ಳು ಹರಡಿದ್ದರು.

ವಾಸ್ತವವೇನು?

2021 ರ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ  ಹೆಸರು ಇದೆಯೆ ಎಂದು ಹುಡುಕಿದಾಗ, ಆ ಪಟ್ಟಿಯಲ್ಲಿ ಅವರು ಇಲ್ಲವೆಂದು ತಿಳಿದುಬಂದಿದೆ. ಇಂಡಿಯಾಗೆ ಸಂಬಂಧಿಸಿದಂತೆ ಮುಖೇಶ್ ಅಂಬಾನಿ 10ನೇ ಸ್ಥಾನದಲ್ಲಿ ಇದ್ದಾರೆ. ಬಿಲಿಯನರ್‌ಗಳಿಗೆ ಸಂಬಂಧಿಸಿದ ರಿಯಲ್‌ –ಟೈಮ್‌ ಪಟ್ಟಿಯನ್ನು ಇಲ್ಲಿ ನೋಡಬಹುದು.

2019 ರ ಲೋಕಸಭಾ ಚುನಾವಣೆಯ ಅಫಿಡವಿಡಟ್‌ನಲ್ಲಿ ತನ್ನ ಆಸ್ತಿಗಳ ಬೆಲೆ ಸುಮಾರು 11.82 ಕೋಟಿ ರೂಪಾಯಿಗಳೆಂದು ಸೋನಿಯಾಗಾಂಧಿಯವರು ಘೋಷಿಸಿಕೊಂಡಿದ್ದಾರೆ.

ತಪ್ಪೊಪ್ಪಿಕೊಂಡ ವೆಬ್‌ಸೈಟ್‌ಗಳು

ಟೈಮ್ಸ್ ಆಫ್ ಇಂಡಿಯಾ ಮತ್ತು ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದವು. ಆದರೆ ಜಗತ್ತಿನಲ್ಲಿನ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಬ್ಬರು ಎಂದು ಹೇಳುತ್ತಾ, ʼಬಿಜೆನೆಸ್‌ ಇನ್ಸೈಡರ್‌ʼ ( ಸೋನಿಯಾ -4ನೇ ಸ್ಥಾನ) ಮತ್ತು ʼಹಾಫಿಂಗ್ಟನ್‌ ಪೋಸ್ಟ್‌ʼನವರು  ಈ ಹಿಂದೆ ಲೇಖನ ಪ್ರಕಟಿಸಿದ್ದರು. ಆದರೆ, ʼಬಿಜೆನೆಸ್‌ ಇನ್ಸೈಡರ್‌ʼನವರು ಸೋನಿಯಾಗೆ  ಸಂಬಂಧಿಸಿದಂತೆ ಡೇಟಾವನ್ನು ನಂಬಲಾರ್ಹ ವೆಬ್ಸೈಟ್‌ನಿಂದ ತೆಗೆದುಕೊಂಡಿಲ್ಲವೆಂದು ವರದಿಯನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದರು. ʼಹಾಫಿಂಗ್ಟನ್‌ ಪೋಸ್ಟ್‌ ನವರು ಸೋನಿಯಾ ಗಾಂಧಿ ಹೆಸರನ್ನು ಪಟ್ಟಿಯಿಂದ ತೆದೆದುಹಾಕಿ, ತಾವು ಸೋನಿಯಾ ಗಾಂಧಿಯವರ ಆಸ್ತಿಗಳ ಬೆಲೆಯನ್ನು ಪರಿಶೀಲಿಸಲು ಆಗುವುದಿಲ್ಲವೆಂದು ವಿವರಣೆ ನೀಡಿದ್ದಾರೆ.

ತದನಂತರ ಟೈಮ್ಸ್ ಆಫ್ ಇಂಡಿಯಾ ಸೇರಿ ಎಲ್ಲರೂ ತಮ್ಮ ಸ್ಟೋರಿಗಳನ್ನು ಡಿಲೀಟ್ ಮಾಡಿದರು. ಆದರೆ ಕನ್ನಡದ ಪತ್ರಿಕೆಗಳು ಪ್ರಿಂಟ್ ಮಾಡಿದ್ದರಿಂದ ಇಂದಿಗೂ ಆ ಪತ್ರಿಕಾ ತುಣುಕುಗಳು ಹರಿದಾಡುತ್ತಲೇ ಇವೆ. ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ; Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...