Homeಫ್ಯಾಕ್ಟ್‌ಚೆಕ್Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

ಮಾರ್ಚ್ 1,2024 ಶುಕ್ರವಾರದಂದು ಜಾರ್ಖಂಡ್‌ನ ದುಮ್ಕಾದಲ್ಲಿ ಪ್ರವಾಸಕ್ಕೆಂದು ಬಂದಿದ್ದ 28 ವರ್ಷದ ಸ್ಪ್ಯಾನಿಷ್ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.

ಸಂತ್ರಸ್ತೆ ಮತ್ತು ಆಕೆಯ ಸಂಗಾತಿ ಜಾರ್ಖಂಡ್‌ನ ದುಮ್ಕಾ ಮೂಲಕ ಭಾಗಲ್‌ಪುರಕ್ಕೆ ತೆರಳುತ್ತಿದ್ದರು. ಈ ನಡುವೆ, ಮಾರ್ಚ್‌ 1ರಂದು ರಾತ್ರಿ ಹನ್ಸ್‌ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟೆಂಟ್ ಹಾಕಿ ತಂಗಿದ್ದರು. ಈ ವೇಳೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಘಟನೆಯ ಕುರಿತು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದ ಸಂತ್ರಸ್ತೆ, “ಏಳು ಜನರು  ನಮ್ಮ ಮೇಲೆ ದಾಳಿ ಮಾಡಿ ಥಳಿಸಿದ್ದಾರೆ. ನಮ್ಮ ಕುತ್ತಿಗೆಗೆ ಚಾಕು ಇಟ್ಟು ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ. ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ” ಎಂದು ಹೇಳಿಕೊಂಡಿದ್ದರು.

ಪ್ರಕರಣ ಸಂಬಂಧ ಮಾರ್ಚ್‌ 6ರ ವೇಳೆ ಎಂಟು ಜನರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಸಂತ್ರಸ್ತೆ 7 ಜನರು ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಿದ್ದರು. ಎಂಟನೇ ವ್ಯಕ್ತಿ ಇತರ ಏಳು ಮಂದಿಯ ದುಷ್ಕೃತ್ಯಕ್ಕೆ ಸಹಾಯ ಮಾಡಿದವ ಎಂದು ಜಾರ್ಮುಂಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆರಂಭದಲ್ಲಿ, ಅಂದರೆ ಮಾರ್ಚ್ 3ರಂದು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಬಳಿಕ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೂವರು ಆರೋಪಿಗಳ ಬಂಧನವಾಗುತ್ತಿದ್ದಂತೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, ಈ ಮೂವರನ್ನು ‘ರೈಸ್ ಬ್ಯಾಗ್ ಮತಾಂತರಿಗಳು’ ಎಂದು ಹೇಳಿದ್ದಾರೆ. ಇದು ಕ್ರಿಶ್ಚಿಯನ್ನರನ್ನು ವಿವರಿಸಲು ಬಳಸುವ ಅವಹೇಳನಕಾರಿ ಪದವಾಗಿದೆ.

ಬಂಧಿತ ವ್ಯಕ್ತಿಗಳು ಕ್ರಿಶ್ಚಿಯನ್ ಮಿಷನರಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಬಿಜೆಪಿ ನಾಯಕ ಮತ್ತು ಬೋಧಗಯಾದ ಮಾಜಿ ಶಾಸಕ ಹರಿ ಮಾಂಝಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. “ರೈಸ್ ಬ್ಯಾಗ್‌ಗಾಗಿ ಮಾರಲ್ಪಡುವ ಈ ಜನರು ಯಾವ ನಂಬಿಕೆ ಅಥವಾ ಧರ್ಮಕ್ಕೆ ಸೇರಿದವರು? ಇವರೆಲ್ಲರಿಗೂ ಮರಣದಂಡನೆ ವಿಧಿಸಬೇಕು” ಎಂದು ಅವರು ಬರೆದುಕೊಂಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ

ಬಿಜೆಪಿ ವಕ್ತಾರ ಮತ್ತು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಉಮ್ರಾವ್ ಕೂಡ ಇದೇ ಹೇಳಿಕೆಯನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಬಳಿಕ ಆ ಪೋಸ್ಟ್‌ನ್ನು ಅವರು ಡಿಲೀಟ್ ಮಾಡಿದ್ದಾರೆ. ಡಿಲಿಟ್ ಮಾಡಲಾದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಕೆಳಗಡೆ ಇದೆ.

ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಜಿತೇಂದ್ರ ಪ್ರತಾಪ್ ಸಿಂಗ್, “ಬಂಧಿತರೆಲ್ಲರೂ ಕ್ರಿಶ್ಚಿಯನ್ ಮಿಷನರಿಗಳಿಗಾಗಿ ಕೆಲಸ ಮಾಡಿದವರು” ಎಂದು ಬರೆದುಕೊಂಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ 

ವೆರಿಫೈ ಮಾಡಲಾದ ಮತ್ತೊಂದು ಬಲಪಂಥೀಯ ಎಕ್ಸ್‌ ಖಾತೆ @RealBababanaras ಎಂಬುವುದರಲ್ಲಿ ಕೂಡ “ರೈಸ್‌ ಬ್ಯಾಗ್‌ಗೆ ಮತಾಂತರಗೊಂಡವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ” ಎಂದು ಬರೆದುಕೊಳ್ಳಲಾಗಿದೆ. ಈ ಪೋಸ್ಟ್‌ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಸುಮಾರು 3,000 ಬಾರಿ ಇದನ್ನು ಮರು ಟ್ವೀಟ್ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ಪೊಲೀಸರು ನೀಡಿದ ಮಾಧ್ಯಮ ಹೇಳಿಕೆಗಳು ಮತ್ತು ಇತರ ಮಾಧ್ಯಮ ವರದಿಗಳ ಪ್ರಕಾರ ಬಂಧಿತ ಎಂಟು ಜನರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಅವರ ಹೆಸರನ್ನು ಹೊರತುಪಡಿಸಿ ಇನ್ನುಳಿದ 6 ಆರೋಪಿಗಳ ಹೆಸರು ಈ ರೀತಿಯಿದೆ.

1.ಸುಕ್ಲಾಲ್ ಹೆಂಬ್ರೋಮ್ (30), ವೃತ್ತಿಯಲ್ಲಿ ಆಟೋ ಚಾಲಕ. 2. ಬಬ್ಲು ಹೆಂಬ್ರೋಮ್ (22), ಗುಜರಾತ್‌ನ ಕಾರ್ಮಿಕ, ಘಟನೆಗೆ ಎರಡು ವಾರಗಳ ಮೊದಲು ಈತ ಜಾರ್ಖಂಡ್‌ಗೆ ಆಗಮಿಸಿದ್ದ. 3.ಬುದ್ಲಾಲ್ ಮರಾಂಡಿ (21), ಗುಜರಾತ್‌ನ ಕಾರ್ಮಿಕ, ಘಟನೆಗೆ ಎರಡು ವಾರಗಳ ಮೊದಲು ಜಾರ್ಖಂಡ್‌ಗೆ ಆಗಮಿಸಿದ್ದ. 4.ಬಾಬೂಜಿ ಸೊರೇನ್ (22), ರೈತ. 5.ರಾಜೋನ್ ಮರಾಂಡಿ (24), ಗುಜರಾತ್‌ನ ಕಾರ್ಮಿಕ, ಘಟನೆಗೆ ಎರಡು ವಾರಗಳ ಮೊದಲು ಜಾರ್ಖಂಡ್‌ಗೆ ಆಗಮಿಸಿದ್ದ.6. ರಾಜೇಶ್ ಮುರ್ಮು (24), ರೈತ.

ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್ ಜರ್ಮುಂಡಿ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಸಂತೋಷ್ ಕುಮಾರ್ ಅವರನ್ನು ಸಂಪರ್ಕಿಸಿ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕಿದೆ.

ಆಲ್ಟ್‌ ನ್ಯೂಸ್‌ ಪ್ರಕಾರ, ಅತ್ಯಾಚಾರ ಪ್ರಕರಣ ಸಂಬಂಧ ಆರಂಭದಲ್ಲಿ ಬಂಧಿಸಲ್ಪಟ್ಟ ಮೂವರಲ್ಲಿ ಯಾರೂ ಕ್ರಿಶ್ಚಿಯನ್ ಅಥವಾ ಕ್ರಿಶ್ಚಿಯನ್ ಮಿಷನರಿಗಾಗಿ ಕೆಲಸ ಮಾಡಿದವರಿಲ್ಲ. ಬಂಧಿತ ಎಂಟು ಜನರಲ್ಲಿ ಒಬ್ಬನಾದ ಬಾಬೂಜಿ ಸೊರೆನ್ ಮಾತ್ರ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವನು. ಆದರೆ, ಆತ ಕೂಡ ಮಿಷನರಿಗಳಿಗಾಗಿ ಕೆಲಸ ಮಾಡಿದವನಲ್ಲ, ಮಾಡುತ್ತಿರಲಿಲ್ಲ. ಆತ ವೃತ್ತಿಯಲ್ಲಿ ಕೃಷಿಕನಾಗಿದ್ದು, ಡಿಜೆ ಕಾರ್ಯಕ್ರಮಗಳಿಗೆ ತನ್ನ ಸಂಗೀತ ಉಪಕರಣಗಳನ್ನು ಬಾಡಿಗೆ ನೀಡುವ ವ್ಯವಹಾರ ಕೂಡ ಮಾಡುತ್ತಿದ್ದಾನೆ. ಉಳಿದ ಎಲ್ಲಾ ಆರೋಪಿಗಳು ಬುಡಕಟ್ಟುಗಳ ‘ಸರ್ನಾ’ ನಂಬಿಕೆಯ ಅನುಯಾಯಿಗಳು ಎಂದು ಎಸ್‌ಡಿಪಿಒ ಸ್ಪಷ್ಟಪಡಿಸಿದ್ದಾರೆ.

‘ಸರ್ನಾ’ ಎಂಬುವುದು ಬುಡಕಟ್ಟು ಜನಾಂಗದವರಲ್ಲಿ ಜನಪ್ರಿಯವಾಗಿರುವ ಸ್ಥಳೀಯ ನಂಬಿಕೆಯಾಗಿದೆ. ಇದರ ಅನುಯಾಯಿಗಳು ಪ್ರಕೃತಿ ಆರಾಧಕರು. ಇವರು ದಶಕಗಳಿಂದ ಪ್ರತ್ಯೇಕ ಧಾರ್ಮಿಕ ಗುರುತಿಗಾಗಿ ಹೋರಾಡುತ್ತಿದ್ದಾರೆ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಸೆಪ್ಟೆಂಬರ್ 2023ರಲ್ಲಿ ಬುಡಕಟ್ಟು ಜನಾಂಗದವರ ‘ಸರ್ನಾ ಧಾರ್ಮಿಕ ಸಂಹಿತೆ’ಗೆ ಮಾನ್ಯತೆ ನೀಡುವಂತೆ ಪ್ರಧಾನಿಗೆ ಪತ್ರ ಬರೆದಿದ್ದರು.

“ಸರ್ನಾ ನಂಬಿಕೆಯ ಜನರ ಸಂಖ್ಯೆ ಶೇಕಡಾವಾರು ಪ್ರಮಾಣದಲ್ಲಿ ನಿರಂತರ ಕುಸಿಯುತ್ತಿದೆ. ಇದರ ಪರಿಣಾಮವಾಗಿ ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್ ಅಡಿಯಲ್ಲಿ ಬುಡಕಟ್ಟು ಅಭಿವೃದ್ಧಿಯ ನೀತಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಹಾಗಾಗಿ, ಸರ್ನಾ ಅಥವಾ ಪ್ರಕೃತಿಯನ್ನು ಪೂಜಿಸುವ ಆದಿವಾಸಿಗಳನ್ನು ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಜೈನ ಅನುಯಾಯಿಗಳಿಂದ ಭಿನ್ನವೆಂದು ಗುರುತಿಸಲು ಮತ್ತು ಅವರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಪ್ರತ್ಯೇಕ ಬುಡಕಟ್ಟು ಸರ್ನಾ ಕೋಡ್ ಅಗತ್ಯವಾಗಿದೆ” ಎಂದು ಸೊರೇನ್ ಪತ್ರದಲ್ಲಿ ತಿಳಿಸಿದ್ದರು. ಜಾರ್ಖಂಡ್‌ನ ಹೆಚ್ಚಿನ ಜನರು ಸರ್ನಾ ಧರ್ಮವನ್ನು ಅನುಸರಿಸುವವರಾಗಿದ್ದಾರೆ.

ಅಲ್ಟ್‌ ನ್ಯೂಸ್‌ ಪ್ರಕಾರ, ಬಂಧಿತ ಬಾಬೂಜಿ ಸೊರೇನ್ ಮತ್ತು ಇಬ್ಬರು ಅಪ್ರಾಪ್ತರನ್ನು ಹೊರತುಪಡಿಸಿ, ಆರೋಪಿಗಳಲ್ಲಿ ಇಬ್ಬರು ಹೆಂಬ್ರಾಮ್‌ಗಳು, ಇಬ್ಬರು ಮರಾಂಡಿಗಳು ಮತ್ತು ಒಬ್ಬ ಮುರ್ಮು ಇದ್ದಾರೆ. ಇವೆಲ್ಲವೂ ‘ಸಂತಾಲ್’ ಸಮುದಾಯದೊಳಗಿನ ಕುಲಗಳು. ‘ಹೆಂಬ್ರೊಮ್’, ‘ಮೆರಾಂಡಿ’ ಮತ್ತು ‘ಮುರ್ಮು’ ಸಂತಾಲ್‌ನ 12 ‘ಗೋತ್ರ’ಗಳಲ್ಲಿ ಸೇರಿವೆ. ಸುಮಾರು 6 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಸಂತಾಲ್‌ಗಳು, ಭಾರತದ ಅತಿದೊಡ್ಡ ಬುಡಕಟ್ಟು ಜನಾಂಗದವರಾಗಿದ್ದಾರೆ. ಇವರು ಹೆಚ್ಚಾಗಿ ಒಡಿಶಾ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಕೇಂದ್ರೀಕೃತವಾಗಿದ್ದಾರೆ.

ಕೊನೆಯದಾಗಿ ಹೇಳುವುದಾದರೆ, ಸ್ಪ್ಯಾನಿಷ್ ವ್ಲಾಗರ್‌ನ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎಂಟು ವ್ಯಕ್ತಿಗಳಲ್ಲಿ ಒಬ್ಬ ಮಾತ್ರ ಕ್ರಿಶ್ಚಿಯನ್. ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರಿಶ್ಚಿಯನ್ ಸಮುದಾಯದವರು ಎಂದು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...