Homeಫ್ಯಾಕ್ಟ್‌ಚೆಕ್Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

ಮಾರ್ಚ್ 1,2024 ಶುಕ್ರವಾರದಂದು ಜಾರ್ಖಂಡ್‌ನ ದುಮ್ಕಾದಲ್ಲಿ ಪ್ರವಾಸಕ್ಕೆಂದು ಬಂದಿದ್ದ 28 ವರ್ಷದ ಸ್ಪ್ಯಾನಿಷ್ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.

ಸಂತ್ರಸ್ತೆ ಮತ್ತು ಆಕೆಯ ಸಂಗಾತಿ ಜಾರ್ಖಂಡ್‌ನ ದುಮ್ಕಾ ಮೂಲಕ ಭಾಗಲ್‌ಪುರಕ್ಕೆ ತೆರಳುತ್ತಿದ್ದರು. ಈ ನಡುವೆ, ಮಾರ್ಚ್‌ 1ರಂದು ರಾತ್ರಿ ಹನ್ಸ್‌ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟೆಂಟ್ ಹಾಕಿ ತಂಗಿದ್ದರು. ಈ ವೇಳೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಘಟನೆಯ ಕುರಿತು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದ ಸಂತ್ರಸ್ತೆ, “ಏಳು ಜನರು  ನಮ್ಮ ಮೇಲೆ ದಾಳಿ ಮಾಡಿ ಥಳಿಸಿದ್ದಾರೆ. ನಮ್ಮ ಕುತ್ತಿಗೆಗೆ ಚಾಕು ಇಟ್ಟು ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ. ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ” ಎಂದು ಹೇಳಿಕೊಂಡಿದ್ದರು.

ಪ್ರಕರಣ ಸಂಬಂಧ ಮಾರ್ಚ್‌ 6ರ ವೇಳೆ ಎಂಟು ಜನರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಸಂತ್ರಸ್ತೆ 7 ಜನರು ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಿದ್ದರು. ಎಂಟನೇ ವ್ಯಕ್ತಿ ಇತರ ಏಳು ಮಂದಿಯ ದುಷ್ಕೃತ್ಯಕ್ಕೆ ಸಹಾಯ ಮಾಡಿದವ ಎಂದು ಜಾರ್ಮುಂಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆರಂಭದಲ್ಲಿ, ಅಂದರೆ ಮಾರ್ಚ್ 3ರಂದು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಬಳಿಕ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೂವರು ಆರೋಪಿಗಳ ಬಂಧನವಾಗುತ್ತಿದ್ದಂತೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, ಈ ಮೂವರನ್ನು ‘ರೈಸ್ ಬ್ಯಾಗ್ ಮತಾಂತರಿಗಳು’ ಎಂದು ಹೇಳಿದ್ದಾರೆ. ಇದು ಕ್ರಿಶ್ಚಿಯನ್ನರನ್ನು ವಿವರಿಸಲು ಬಳಸುವ ಅವಹೇಳನಕಾರಿ ಪದವಾಗಿದೆ.

ಬಂಧಿತ ವ್ಯಕ್ತಿಗಳು ಕ್ರಿಶ್ಚಿಯನ್ ಮಿಷನರಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಬಿಜೆಪಿ ನಾಯಕ ಮತ್ತು ಬೋಧಗಯಾದ ಮಾಜಿ ಶಾಸಕ ಹರಿ ಮಾಂಝಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. “ರೈಸ್ ಬ್ಯಾಗ್‌ಗಾಗಿ ಮಾರಲ್ಪಡುವ ಈ ಜನರು ಯಾವ ನಂಬಿಕೆ ಅಥವಾ ಧರ್ಮಕ್ಕೆ ಸೇರಿದವರು? ಇವರೆಲ್ಲರಿಗೂ ಮರಣದಂಡನೆ ವಿಧಿಸಬೇಕು” ಎಂದು ಅವರು ಬರೆದುಕೊಂಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ

ಬಿಜೆಪಿ ವಕ್ತಾರ ಮತ್ತು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಉಮ್ರಾವ್ ಕೂಡ ಇದೇ ಹೇಳಿಕೆಯನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಬಳಿಕ ಆ ಪೋಸ್ಟ್‌ನ್ನು ಅವರು ಡಿಲೀಟ್ ಮಾಡಿದ್ದಾರೆ. ಡಿಲಿಟ್ ಮಾಡಲಾದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಕೆಳಗಡೆ ಇದೆ.

ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಜಿತೇಂದ್ರ ಪ್ರತಾಪ್ ಸಿಂಗ್, “ಬಂಧಿತರೆಲ್ಲರೂ ಕ್ರಿಶ್ಚಿಯನ್ ಮಿಷನರಿಗಳಿಗಾಗಿ ಕೆಲಸ ಮಾಡಿದವರು” ಎಂದು ಬರೆದುಕೊಂಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ 

ವೆರಿಫೈ ಮಾಡಲಾದ ಮತ್ತೊಂದು ಬಲಪಂಥೀಯ ಎಕ್ಸ್‌ ಖಾತೆ @RealBababanaras ಎಂಬುವುದರಲ್ಲಿ ಕೂಡ “ರೈಸ್‌ ಬ್ಯಾಗ್‌ಗೆ ಮತಾಂತರಗೊಂಡವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ” ಎಂದು ಬರೆದುಕೊಳ್ಳಲಾಗಿದೆ. ಈ ಪೋಸ್ಟ್‌ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಸುಮಾರು 3,000 ಬಾರಿ ಇದನ್ನು ಮರು ಟ್ವೀಟ್ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ಪೊಲೀಸರು ನೀಡಿದ ಮಾಧ್ಯಮ ಹೇಳಿಕೆಗಳು ಮತ್ತು ಇತರ ಮಾಧ್ಯಮ ವರದಿಗಳ ಪ್ರಕಾರ ಬಂಧಿತ ಎಂಟು ಜನರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಅವರ ಹೆಸರನ್ನು ಹೊರತುಪಡಿಸಿ ಇನ್ನುಳಿದ 6 ಆರೋಪಿಗಳ ಹೆಸರು ಈ ರೀತಿಯಿದೆ.

1.ಸುಕ್ಲಾಲ್ ಹೆಂಬ್ರೋಮ್ (30), ವೃತ್ತಿಯಲ್ಲಿ ಆಟೋ ಚಾಲಕ. 2. ಬಬ್ಲು ಹೆಂಬ್ರೋಮ್ (22), ಗುಜರಾತ್‌ನ ಕಾರ್ಮಿಕ, ಘಟನೆಗೆ ಎರಡು ವಾರಗಳ ಮೊದಲು ಈತ ಜಾರ್ಖಂಡ್‌ಗೆ ಆಗಮಿಸಿದ್ದ. 3.ಬುದ್ಲಾಲ್ ಮರಾಂಡಿ (21), ಗುಜರಾತ್‌ನ ಕಾರ್ಮಿಕ, ಘಟನೆಗೆ ಎರಡು ವಾರಗಳ ಮೊದಲು ಜಾರ್ಖಂಡ್‌ಗೆ ಆಗಮಿಸಿದ್ದ. 4.ಬಾಬೂಜಿ ಸೊರೇನ್ (22), ರೈತ. 5.ರಾಜೋನ್ ಮರಾಂಡಿ (24), ಗುಜರಾತ್‌ನ ಕಾರ್ಮಿಕ, ಘಟನೆಗೆ ಎರಡು ವಾರಗಳ ಮೊದಲು ಜಾರ್ಖಂಡ್‌ಗೆ ಆಗಮಿಸಿದ್ದ.6. ರಾಜೇಶ್ ಮುರ್ಮು (24), ರೈತ.

ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್ ಜರ್ಮುಂಡಿ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಸಂತೋಷ್ ಕುಮಾರ್ ಅವರನ್ನು ಸಂಪರ್ಕಿಸಿ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕಿದೆ.

ಆಲ್ಟ್‌ ನ್ಯೂಸ್‌ ಪ್ರಕಾರ, ಅತ್ಯಾಚಾರ ಪ್ರಕರಣ ಸಂಬಂಧ ಆರಂಭದಲ್ಲಿ ಬಂಧಿಸಲ್ಪಟ್ಟ ಮೂವರಲ್ಲಿ ಯಾರೂ ಕ್ರಿಶ್ಚಿಯನ್ ಅಥವಾ ಕ್ರಿಶ್ಚಿಯನ್ ಮಿಷನರಿಗಾಗಿ ಕೆಲಸ ಮಾಡಿದವರಿಲ್ಲ. ಬಂಧಿತ ಎಂಟು ಜನರಲ್ಲಿ ಒಬ್ಬನಾದ ಬಾಬೂಜಿ ಸೊರೆನ್ ಮಾತ್ರ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವನು. ಆದರೆ, ಆತ ಕೂಡ ಮಿಷನರಿಗಳಿಗಾಗಿ ಕೆಲಸ ಮಾಡಿದವನಲ್ಲ, ಮಾಡುತ್ತಿರಲಿಲ್ಲ. ಆತ ವೃತ್ತಿಯಲ್ಲಿ ಕೃಷಿಕನಾಗಿದ್ದು, ಡಿಜೆ ಕಾರ್ಯಕ್ರಮಗಳಿಗೆ ತನ್ನ ಸಂಗೀತ ಉಪಕರಣಗಳನ್ನು ಬಾಡಿಗೆ ನೀಡುವ ವ್ಯವಹಾರ ಕೂಡ ಮಾಡುತ್ತಿದ್ದಾನೆ. ಉಳಿದ ಎಲ್ಲಾ ಆರೋಪಿಗಳು ಬುಡಕಟ್ಟುಗಳ ‘ಸರ್ನಾ’ ನಂಬಿಕೆಯ ಅನುಯಾಯಿಗಳು ಎಂದು ಎಸ್‌ಡಿಪಿಒ ಸ್ಪಷ್ಟಪಡಿಸಿದ್ದಾರೆ.

‘ಸರ್ನಾ’ ಎಂಬುವುದು ಬುಡಕಟ್ಟು ಜನಾಂಗದವರಲ್ಲಿ ಜನಪ್ರಿಯವಾಗಿರುವ ಸ್ಥಳೀಯ ನಂಬಿಕೆಯಾಗಿದೆ. ಇದರ ಅನುಯಾಯಿಗಳು ಪ್ರಕೃತಿ ಆರಾಧಕರು. ಇವರು ದಶಕಗಳಿಂದ ಪ್ರತ್ಯೇಕ ಧಾರ್ಮಿಕ ಗುರುತಿಗಾಗಿ ಹೋರಾಡುತ್ತಿದ್ದಾರೆ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಸೆಪ್ಟೆಂಬರ್ 2023ರಲ್ಲಿ ಬುಡಕಟ್ಟು ಜನಾಂಗದವರ ‘ಸರ್ನಾ ಧಾರ್ಮಿಕ ಸಂಹಿತೆ’ಗೆ ಮಾನ್ಯತೆ ನೀಡುವಂತೆ ಪ್ರಧಾನಿಗೆ ಪತ್ರ ಬರೆದಿದ್ದರು.

“ಸರ್ನಾ ನಂಬಿಕೆಯ ಜನರ ಸಂಖ್ಯೆ ಶೇಕಡಾವಾರು ಪ್ರಮಾಣದಲ್ಲಿ ನಿರಂತರ ಕುಸಿಯುತ್ತಿದೆ. ಇದರ ಪರಿಣಾಮವಾಗಿ ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್ ಅಡಿಯಲ್ಲಿ ಬುಡಕಟ್ಟು ಅಭಿವೃದ್ಧಿಯ ನೀತಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಹಾಗಾಗಿ, ಸರ್ನಾ ಅಥವಾ ಪ್ರಕೃತಿಯನ್ನು ಪೂಜಿಸುವ ಆದಿವಾಸಿಗಳನ್ನು ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಜೈನ ಅನುಯಾಯಿಗಳಿಂದ ಭಿನ್ನವೆಂದು ಗುರುತಿಸಲು ಮತ್ತು ಅವರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಪ್ರತ್ಯೇಕ ಬುಡಕಟ್ಟು ಸರ್ನಾ ಕೋಡ್ ಅಗತ್ಯವಾಗಿದೆ” ಎಂದು ಸೊರೇನ್ ಪತ್ರದಲ್ಲಿ ತಿಳಿಸಿದ್ದರು. ಜಾರ್ಖಂಡ್‌ನ ಹೆಚ್ಚಿನ ಜನರು ಸರ್ನಾ ಧರ್ಮವನ್ನು ಅನುಸರಿಸುವವರಾಗಿದ್ದಾರೆ.

ಅಲ್ಟ್‌ ನ್ಯೂಸ್‌ ಪ್ರಕಾರ, ಬಂಧಿತ ಬಾಬೂಜಿ ಸೊರೇನ್ ಮತ್ತು ಇಬ್ಬರು ಅಪ್ರಾಪ್ತರನ್ನು ಹೊರತುಪಡಿಸಿ, ಆರೋಪಿಗಳಲ್ಲಿ ಇಬ್ಬರು ಹೆಂಬ್ರಾಮ್‌ಗಳು, ಇಬ್ಬರು ಮರಾಂಡಿಗಳು ಮತ್ತು ಒಬ್ಬ ಮುರ್ಮು ಇದ್ದಾರೆ. ಇವೆಲ್ಲವೂ ‘ಸಂತಾಲ್’ ಸಮುದಾಯದೊಳಗಿನ ಕುಲಗಳು. ‘ಹೆಂಬ್ರೊಮ್’, ‘ಮೆರಾಂಡಿ’ ಮತ್ತು ‘ಮುರ್ಮು’ ಸಂತಾಲ್‌ನ 12 ‘ಗೋತ್ರ’ಗಳಲ್ಲಿ ಸೇರಿವೆ. ಸುಮಾರು 6 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಸಂತಾಲ್‌ಗಳು, ಭಾರತದ ಅತಿದೊಡ್ಡ ಬುಡಕಟ್ಟು ಜನಾಂಗದವರಾಗಿದ್ದಾರೆ. ಇವರು ಹೆಚ್ಚಾಗಿ ಒಡಿಶಾ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಕೇಂದ್ರೀಕೃತವಾಗಿದ್ದಾರೆ.

ಕೊನೆಯದಾಗಿ ಹೇಳುವುದಾದರೆ, ಸ್ಪ್ಯಾನಿಷ್ ವ್ಲಾಗರ್‌ನ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎಂಟು ವ್ಯಕ್ತಿಗಳಲ್ಲಿ ಒಬ್ಬ ಮಾತ್ರ ಕ್ರಿಶ್ಚಿಯನ್. ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರಿಶ್ಚಿಯನ್ ಸಮುದಾಯದವರು ಎಂದು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...