Homeಫ್ಯಾಕ್ಟ್‌ಚೆಕ್Fact Check : ಇದು ಅಲ್ಲಾ vs ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ...

Fact Check : ಇದು ಅಲ್ಲಾ vs ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿಲ್ಲ

- Advertisement -
- Advertisement -

“ಕಾರ್ಕಳದ ಕಾಂಗ್ರೆಸ್ಸಿಗರು, ಸ್ವಾತಂತ್ರ್ಯ ಚಳವಳಿಯನ್ನು ಕಟ್ಟಿರುವ ನಾವು ನಿಮಗೆ ಹೇಳುತ್ತೇವೆ, ಇದು ಅಲ್ಲಾ vs ರಾಮನ ಚುನಾವಣೆ. ಜೀಸಸ್, ಏಸು ಇವರೆಲ್ಲರೂ ಸೇರಿ ಆಶೀರ್ವಾದವನ್ನು ಕಾಂಗ್ರೆಸ್ಸಿಗ್ಗರ ಮೇಲೆ ಮಾಡುವಂತಹ ಚುನಾವಣೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಹೇಳಿರುವುದಾಗಿ ವಿಡಿಯೋವೊಂದು ವೈರಲ್ ಆಗುತ್ತಿದೆ.

ಫ್ಯಾಕ್ಟ್‌ಚೆಕ್ : ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ವೈರಲ್ ಕ್ಲಿಪ್‌ನ ಮೂಲ ವಿಡಿಯೋ ಹುಡುಕಿದೆ. ಈ ವೇಳೆ ‘ಟೈಮ್ಸ್‌ ಆಫ್ ಕಾರ್ಕಳ ಡಿಜಿಟಲ್’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಮೇ 3,2023ರಂದು ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 19 ನಿಮಿಷ 50 ಸೆಕೆಂಡ್‌ನ ವಿಡಿಯೋದಲ್ಲಿ 3 ನಿಮಿಷ 51 ಸೆಕೆಂಡ್‌ನಿಂದ 4 ನಿಮಿಷ 50 ಸೆಕೆಂಡ್‌ಗಳ ನಡುವೆ ವೈರಲ್ ಕ್ಲಿಪ್‌ನಲ್ಲಿರುವ ಅಂಶಗಳಿವೆ.

ಮೂಲ ವಿಡಿಯೋದಲ್ಲಿ “ರಮಾನಾಥ ರೈ ಎನ್ನುವಂತಹ ಪ್ರಾಮಾಣಿಕ ರಾಜಕಾರಣಿ ಇದ್ದಾರೆ. ರಮಾನಾಥ ರೈ ಅವರ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ಹೋಗಿ 20 ದಿವಸಗಳ ಹಿಂದೆ ಕಾರ್ಕಳದ ಸುನಿಲ್ ಕುಮಾರ್ ಅವರು ಹೇಳಿದ್ರಂತೆ, ಇದು ಅಲ್ಲಾ vs ರಾಮನ ಚುನಾವಣೆ, ನಾವು ರಾಮನ ಭಕ್ತರು ಎಂದು ಹೇಳಿದ್ರಂತೆ. ಮಿ.ಸುನಿಲ್ ಕುಮಾರ್, ನಾವು ಕಾಂಗ್ರೆಸ್ಸಿಗರು ‘ಈಶ್ವರ ಅಲ್ಲಾ ತೇರೋ ನಾಮ್ ಸಬ್‌ ಕೋ ಸನ್ಮತಿ ದೇ ಭಗವಾನ್’ ಅಂತ ಹೇಳಿ ಸ್ವಾತಂತ್ರ್ಯ ಚಳವಳಿಯನ್ನು ಕಟ್ಟಿರುವಂತಹ ನಾವು ನಿಮಗೆ ಹೇಳುತ್ತೇವೆ, ಇದು ಅಲ್ಲಾvs ರಾಮನ ಚುನಾವಣೆ ಅಲ್ಲ. ರಾಮ, ಕೃಷ್ಣ, ಕಲ್ಲುರ್ಟಿ, ಪಂಜರ್ಲಿ, ಕೋರ್ದಬ್ಬು, ಕೊರಗಜ್ಜ, ಬಬ್ಬುಸ್ವಾಮಿ, ದುರ್ಗಾ ಪರಮೇಶ್ವರಿ, ಮುಂಡುಕೂರು ದುರ್ಗಾ ಪರಮೇಶ್ವರಿ, ಹಿರ್ಕಾರದ ದುರ್ಗಾ ಪರಮೇಶ್ವರಿ, ಕಾರ್ಕಳದ ವೆಂಕಟರಮಣ, ಜೀಸಸ್, ಏಸು, ಗೊಮ್ಮಟೇಶ್ವರ, ಮಹಾವೀರ, ಬುದ್ದ, ಇವರೆಲ್ಲರೂ ಸೇರಿ ಆಶೀರ್ವಾದವನ್ನು ಮಾಡುವಂತಹ ಚುನಾವಣೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು” ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿದ್ದಾರೆ.

ಹಾಗಾಗಿ, ಸುಧೀರ್ ಕುಮಾರ್ ಮರೋಳಿ “ಇದು ಅಲ್ಲಾ vs ಚುನಾವಣೆ” ಎಂದು ಹೇಳಿಲ್ಲ. ಸುನಿಲ್ ಕುಮಾರ್ ನೀಡಿದ್ದ ಹೇಳಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ. ಸುಧೀರ್ ಕುಮಾರ್ ಅವರ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗಿದೆ ಎಂಬುವುದು ಗೊತ್ತಾಗಿದೆ. ಇನ್ನು ವೈರಲ್ ಆಗಿರುವ ಸುಧೀರ್ ಕುಮಾರ್ ಅವರ ಭಾಷಣದ ವಿಡಿಯೋ ಇತ್ತೀಚಿನದ್ದಲ್ಲ, ಅದು ಸುಮಾರು 11 ತಿಂಗಳ ಹಳೆಯದ್ದು.

ಇದನ್ನೂ ಓದಿ : Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...