Homeಫ್ಯಾಕ್ಟ್‌ಚೆಕ್Fact Check : ಇದು ಅಲ್ಲಾ vs ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ...

Fact Check : ಇದು ಅಲ್ಲಾ vs ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿಲ್ಲ

- Advertisement -
- Advertisement -

“ಕಾರ್ಕಳದ ಕಾಂಗ್ರೆಸ್ಸಿಗರು, ಸ್ವಾತಂತ್ರ್ಯ ಚಳವಳಿಯನ್ನು ಕಟ್ಟಿರುವ ನಾವು ನಿಮಗೆ ಹೇಳುತ್ತೇವೆ, ಇದು ಅಲ್ಲಾ vs ರಾಮನ ಚುನಾವಣೆ. ಜೀಸಸ್, ಏಸು ಇವರೆಲ್ಲರೂ ಸೇರಿ ಆಶೀರ್ವಾದವನ್ನು ಕಾಂಗ್ರೆಸ್ಸಿಗ್ಗರ ಮೇಲೆ ಮಾಡುವಂತಹ ಚುನಾವಣೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಹೇಳಿರುವುದಾಗಿ ವಿಡಿಯೋವೊಂದು ವೈರಲ್ ಆಗುತ್ತಿದೆ.

ಫ್ಯಾಕ್ಟ್‌ಚೆಕ್ : ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ವೈರಲ್ ಕ್ಲಿಪ್‌ನ ಮೂಲ ವಿಡಿಯೋ ಹುಡುಕಿದೆ. ಈ ವೇಳೆ ‘ಟೈಮ್ಸ್‌ ಆಫ್ ಕಾರ್ಕಳ ಡಿಜಿಟಲ್’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಮೇ 3,2023ರಂದು ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 19 ನಿಮಿಷ 50 ಸೆಕೆಂಡ್‌ನ ವಿಡಿಯೋದಲ್ಲಿ 3 ನಿಮಿಷ 51 ಸೆಕೆಂಡ್‌ನಿಂದ 4 ನಿಮಿಷ 50 ಸೆಕೆಂಡ್‌ಗಳ ನಡುವೆ ವೈರಲ್ ಕ್ಲಿಪ್‌ನಲ್ಲಿರುವ ಅಂಶಗಳಿವೆ.

ಮೂಲ ವಿಡಿಯೋದಲ್ಲಿ “ರಮಾನಾಥ ರೈ ಎನ್ನುವಂತಹ ಪ್ರಾಮಾಣಿಕ ರಾಜಕಾರಣಿ ಇದ್ದಾರೆ. ರಮಾನಾಥ ರೈ ಅವರ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ಹೋಗಿ 20 ದಿವಸಗಳ ಹಿಂದೆ ಕಾರ್ಕಳದ ಸುನಿಲ್ ಕುಮಾರ್ ಅವರು ಹೇಳಿದ್ರಂತೆ, ಇದು ಅಲ್ಲಾ vs ರಾಮನ ಚುನಾವಣೆ, ನಾವು ರಾಮನ ಭಕ್ತರು ಎಂದು ಹೇಳಿದ್ರಂತೆ. ಮಿ.ಸುನಿಲ್ ಕುಮಾರ್, ನಾವು ಕಾಂಗ್ರೆಸ್ಸಿಗರು ‘ಈಶ್ವರ ಅಲ್ಲಾ ತೇರೋ ನಾಮ್ ಸಬ್‌ ಕೋ ಸನ್ಮತಿ ದೇ ಭಗವಾನ್’ ಅಂತ ಹೇಳಿ ಸ್ವಾತಂತ್ರ್ಯ ಚಳವಳಿಯನ್ನು ಕಟ್ಟಿರುವಂತಹ ನಾವು ನಿಮಗೆ ಹೇಳುತ್ತೇವೆ, ಇದು ಅಲ್ಲಾvs ರಾಮನ ಚುನಾವಣೆ ಅಲ್ಲ. ರಾಮ, ಕೃಷ್ಣ, ಕಲ್ಲುರ್ಟಿ, ಪಂಜರ್ಲಿ, ಕೋರ್ದಬ್ಬು, ಕೊರಗಜ್ಜ, ಬಬ್ಬುಸ್ವಾಮಿ, ದುರ್ಗಾ ಪರಮೇಶ್ವರಿ, ಮುಂಡುಕೂರು ದುರ್ಗಾ ಪರಮೇಶ್ವರಿ, ಹಿರ್ಕಾರದ ದುರ್ಗಾ ಪರಮೇಶ್ವರಿ, ಕಾರ್ಕಳದ ವೆಂಕಟರಮಣ, ಜೀಸಸ್, ಏಸು, ಗೊಮ್ಮಟೇಶ್ವರ, ಮಹಾವೀರ, ಬುದ್ದ, ಇವರೆಲ್ಲರೂ ಸೇರಿ ಆಶೀರ್ವಾದವನ್ನು ಮಾಡುವಂತಹ ಚುನಾವಣೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು” ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿದ್ದಾರೆ.

ಹಾಗಾಗಿ, ಸುಧೀರ್ ಕುಮಾರ್ ಮರೋಳಿ “ಇದು ಅಲ್ಲಾ vs ಚುನಾವಣೆ” ಎಂದು ಹೇಳಿಲ್ಲ. ಸುನಿಲ್ ಕುಮಾರ್ ನೀಡಿದ್ದ ಹೇಳಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ. ಸುಧೀರ್ ಕುಮಾರ್ ಅವರ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗಿದೆ ಎಂಬುವುದು ಗೊತ್ತಾಗಿದೆ. ಇನ್ನು ವೈರಲ್ ಆಗಿರುವ ಸುಧೀರ್ ಕುಮಾರ್ ಅವರ ಭಾಷಣದ ವಿಡಿಯೋ ಇತ್ತೀಚಿನದ್ದಲ್ಲ, ಅದು ಸುಮಾರು 11 ತಿಂಗಳ ಹಳೆಯದ್ದು.

ಇದನ್ನೂ ಓದಿ : Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...