Homeಫ್ಯಾಕ್ಟ್‌ಚೆಕ್FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

- Advertisement -
- Advertisement -

ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷದ ನಡುವೆ ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ ಎಂದು ಸೆಪ್ಟೆಂಬರ್ 27, 2024ರಂದು ಹೆಜ್ಬುಲ್ಲಾ ಖಚಿತಪಡಿಸಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಬೈಕ್ ಮತ್ತು ಕಾರುಗಳಲ್ಲಿ ಬರುವ ಒಂದಷ್ಟು ಜನರು ಬೀದಿ ಜಗಳದಲ್ಲಿ ತೊಡಗಿರುವುದು ಇದೆ. ಈ ವಿಡಿಯೋ ಹಂಚಿಕೊಂಡಿರುವ ಕೆಲವರು ಹಸನ್ ನಸ್ರಲ್ಲಾ ಹತ್ಯೆಯ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಆಂತರಿಕ ಕಚ್ಚಾಟ ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 30ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಭಾಸ್ಕರ್ ಮಿಶ್ರಾ ಎಂಬ ಬಳಕೆದಾರ (@Bhaskar_m11) ಲೆಬನಾನ್‌ನಲ್ಲಿ ಶಿಯಾ-ಸುನ್ನೀ ಸಂಘರ್ಷ ಶುರುವಾಗಿದೆ. ಹೆಜ್ಬುಲ್ಲಾ ಬೆಂಬಲಿತ ಶಿಯಾ ಮುಸ್ಲಿಮರ ಮೇಲೆ ಈಗ ಸುನ್ನೀ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ. ಇಸ್ರೇಲ್ ದಾಳಿಯ ಬಳಿಕ ತುಂಬಾ ಪ್ರಶ್ನೆಗಳು ಬದಲಾಗಿವೆ” ಎಂದು ಬರೆದುಕೊಂಡಿದ್ದರು.

ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ರಕ್ತಪಾತ” ಎಂದು ಸೆಪ್ಟೆಂಬರ್ 30ರಂದು ಕನ್ನಡ ಸುದ್ದಿ ವೆಬ್‌ಸೈಟ್ ಈ ಸಂಜೆ ವರದಿ ಮಾಡಿತ್ತು. ವರದಿಯಲ್ಲಿ “ಸುನ್ನೀ ಮುಸ್ಲಿಂ ಸಮುದಾಯ ಈಗ ಹಿಜ್ಬುಲ್‌ ಬೆಂಬಲಿಗರನ್ನು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುತ್ತಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ವಿವರಿಸಿತ್ತು. ಈ ಸಂಜೆ ಯಾವ ಮೂಲದಿಂದ ಈ ಮಾಹಿತಿ ಪಡೆದಿದೆ ಎಂದು ಗೊತ್ತಿಲ್ಲ.

ಫ್ಯಾಕ್ಟ್‌ಚೆಕ್ : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಸಂಘರ್ಷ ಏರ್ಪಟ್ಟಿರುವ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯಾವುದೇ ಪ್ರಮುಖ, ವಿಶ್ವಾಸಾರ್ಹ ಮಾಧ್ಯಮಗಳಲ್ಲಿ ಆ ಕುರಿತು ವರದಿಯಾಗಿರುವುದು ನಮಗೆ ಕಂಡು ಬಂದಿಲ್ಲ.

ಎಕ್ಸ್‌ ಬಳಕೆದಾರ ಭಾಸ್ಕರ್ ಮಿಶ್ರಾ ಹಂಚಿಕೊಂಡಿರುವ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಮೇ 8, 2018ರಲ್ಲಿ ವಿಡಿಯೋ ಕುರಿತು ಪ್ರಕಟಗೊಂಡ ಅರೆಬಿಕ್ ವರದಿಯೊಂದು ಲಭ್ಯವಾಗಿದೆ.

skynewsarabia.com ಪ್ರಕಟಿಸಿದ ವರದಿಯಲ್ಲಿ 2018ರಲ್ಲಿ ಲೆಬನಾನ್‌ ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜಧಾನಿ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೆಜ್ಬುಲ್ಲಾ ಬೆಂಬಲಿಗರು ಮತ್ತು ಸಂಘಟನೆಯ ಸದಸ್ಯರು ಸುನ್ನೀ ಮತ್ತು ಕ್ರೈಸ್ತ ಪ್ರಾಬಲ್ಯದ ಪ್ರದೇಶಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಇದು ಅಲ್ಲಿನ ನಿವಾಸಿಗಳು ಮತ್ತು ಸಂಘಟನೆಯ ಸದಸ್ಯರ ನಡುವೆ ಗಲಾಟೆಗೆ ಕಾರಣವಾಗಿದೆ. ಬೀದಿ ಜಗಳ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದೆ. 2008ರಲ್ಲಿ ಹೆಜ್ಬುಲ್ಲಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿ ರಾಜಕೀಯ ಪ್ರಾಬಲ್ಯ ಪಡೆದಾಗಲೂ ಈ ರೀತಿಯ ಸಂಘರ್ಷ ನಡೆದಿದೆ” ಎಂದು ತಿಳಿಸಲಾಗಿದೆ.

ಮತ್ತೊಂದು ಅರೆಬಿಕ್ ಸುದ್ದಿ ವೆಬ್‌ಸೈಟ್‌ yafa.newsನಲ್ಲೂ “ಮೇ 8, 2018ರಲ್ಲಿ ಪ್ರಕಟಗೊಂದ ವರದಿಯಲ್ಲಿ ಸಂಸತ್ ಚುನಾವಣೆಯಲ್ಲಿ ಹೆಜ್ಬುಲ್ಲಾ ಮುನ್ನಡೆ ಸಾಧಿಸಿದ ಬಳಿಕ ಹೆಜ್ಬುಲ್ಲಾ ಮತ್ತು ಅಮಲ್ ಇಸ್ಲಾಮಿಕ್ ವಿವಿದೆಡೆ ಪ್ರಚೋದನಕಾರಿ ಘೋಷಣೆ ಕೂಗುತ್ತಾ ಜಾಥಾ ನಡೆಸಿದ್ದು, ಇದರಿಂದ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ” ಎಂದು ಹೇಳಲಾಗಿದೆ.

dd-sunnah.net ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಅದನ್ನೇ ತಿಳಿಸಲಾಗಿದೆ.

ಒಟ್ಟಿನಲ್ಲಿ ನಾವು ಈ ಸುದ್ದಿಯಲ್ಲಿ ಉಲ್ಲೇಖಿಸಿದ ವೈರಲ್ ವಿಡಿಯೋ ಲೆಬನಾನ್‌ನಲ್ಲಿ 2018ರಲ್ಲಿ ಸಂಸತ್ ಚುನಾವಣೆ ನಡೆದಾಗ ಸಂಭವಿಸಿದ ರಾಜಕೀಯ ಸಂಘರ್ಷದ್ದಾಗಿದೆ. ಹೆಜ್ವುಲ್ಲಾ ನಾಯಕನ ಹತ್ಯೆ ಬಳಿಕ ಉಂಟಾದ ಸುನ್ನೀ-ಶಿಯಾ ಸಂಘರ್ಷದಲ್ಲ.

ಇನ್ನು ಈ ಸಂಜೆ ಪ್ರಕಟಿಸಿರುವ ವರದಿಯ ಮಾಹಿತಿಗಳನ್ನು ಯಾವ ಮೂಲದಿಂದ ಪಡೆಯಲಾಗಿದೆ ಎಂಬುವುದು ಗೊತ್ತಾಗಿಲ್ಲ. ಒಟ್ಟಿನಲ್ಲಿ ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಏರ್ಪಟ್ಟ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ವರದಿ ಮಾಡಿರುವುದು ನಮಗೆ ಲಭ್ಯವಾಗಿಲ್ಲ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...