Homeಫ್ಯಾಕ್ಟ್‌ಚೆಕ್FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

- Advertisement -
- Advertisement -

ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷದ ನಡುವೆ ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ ಎಂದು ಸೆಪ್ಟೆಂಬರ್ 27, 2024ರಂದು ಹೆಜ್ಬುಲ್ಲಾ ಖಚಿತಪಡಿಸಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಬೈಕ್ ಮತ್ತು ಕಾರುಗಳಲ್ಲಿ ಬರುವ ಒಂದಷ್ಟು ಜನರು ಬೀದಿ ಜಗಳದಲ್ಲಿ ತೊಡಗಿರುವುದು ಇದೆ. ಈ ವಿಡಿಯೋ ಹಂಚಿಕೊಂಡಿರುವ ಕೆಲವರು ಹಸನ್ ನಸ್ರಲ್ಲಾ ಹತ್ಯೆಯ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಆಂತರಿಕ ಕಚ್ಚಾಟ ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 30ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಭಾಸ್ಕರ್ ಮಿಶ್ರಾ ಎಂಬ ಬಳಕೆದಾರ (@Bhaskar_m11) ಲೆಬನಾನ್‌ನಲ್ಲಿ ಶಿಯಾ-ಸುನ್ನೀ ಸಂಘರ್ಷ ಶುರುವಾಗಿದೆ. ಹೆಜ್ಬುಲ್ಲಾ ಬೆಂಬಲಿತ ಶಿಯಾ ಮುಸ್ಲಿಮರ ಮೇಲೆ ಈಗ ಸುನ್ನೀ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ. ಇಸ್ರೇಲ್ ದಾಳಿಯ ಬಳಿಕ ತುಂಬಾ ಪ್ರಶ್ನೆಗಳು ಬದಲಾಗಿವೆ” ಎಂದು ಬರೆದುಕೊಂಡಿದ್ದರು.

ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ರಕ್ತಪಾತ” ಎಂದು ಸೆಪ್ಟೆಂಬರ್ 30ರಂದು ಕನ್ನಡ ಸುದ್ದಿ ವೆಬ್‌ಸೈಟ್ ಈ ಸಂಜೆ ವರದಿ ಮಾಡಿತ್ತು. ವರದಿಯಲ್ಲಿ “ಸುನ್ನೀ ಮುಸ್ಲಿಂ ಸಮುದಾಯ ಈಗ ಹಿಜ್ಬುಲ್‌ ಬೆಂಬಲಿಗರನ್ನು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುತ್ತಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ವಿವರಿಸಿತ್ತು. ಈ ಸಂಜೆ ಯಾವ ಮೂಲದಿಂದ ಈ ಮಾಹಿತಿ ಪಡೆದಿದೆ ಎಂದು ಗೊತ್ತಿಲ್ಲ.

ಫ್ಯಾಕ್ಟ್‌ಚೆಕ್ : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಸಂಘರ್ಷ ಏರ್ಪಟ್ಟಿರುವ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯಾವುದೇ ಪ್ರಮುಖ, ವಿಶ್ವಾಸಾರ್ಹ ಮಾಧ್ಯಮಗಳಲ್ಲಿ ಆ ಕುರಿತು ವರದಿಯಾಗಿರುವುದು ನಮಗೆ ಕಂಡು ಬಂದಿಲ್ಲ.

ಎಕ್ಸ್‌ ಬಳಕೆದಾರ ಭಾಸ್ಕರ್ ಮಿಶ್ರಾ ಹಂಚಿಕೊಂಡಿರುವ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಮೇ 8, 2018ರಲ್ಲಿ ವಿಡಿಯೋ ಕುರಿತು ಪ್ರಕಟಗೊಂಡ ಅರೆಬಿಕ್ ವರದಿಯೊಂದು ಲಭ್ಯವಾಗಿದೆ.

skynewsarabia.com ಪ್ರಕಟಿಸಿದ ವರದಿಯಲ್ಲಿ 2018ರಲ್ಲಿ ಲೆಬನಾನ್‌ ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜಧಾನಿ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೆಜ್ಬುಲ್ಲಾ ಬೆಂಬಲಿಗರು ಮತ್ತು ಸಂಘಟನೆಯ ಸದಸ್ಯರು ಸುನ್ನೀ ಮತ್ತು ಕ್ರೈಸ್ತ ಪ್ರಾಬಲ್ಯದ ಪ್ರದೇಶಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಇದು ಅಲ್ಲಿನ ನಿವಾಸಿಗಳು ಮತ್ತು ಸಂಘಟನೆಯ ಸದಸ್ಯರ ನಡುವೆ ಗಲಾಟೆಗೆ ಕಾರಣವಾಗಿದೆ. ಬೀದಿ ಜಗಳ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದೆ. 2008ರಲ್ಲಿ ಹೆಜ್ಬುಲ್ಲಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿ ರಾಜಕೀಯ ಪ್ರಾಬಲ್ಯ ಪಡೆದಾಗಲೂ ಈ ರೀತಿಯ ಸಂಘರ್ಷ ನಡೆದಿದೆ” ಎಂದು ತಿಳಿಸಲಾಗಿದೆ.

ಮತ್ತೊಂದು ಅರೆಬಿಕ್ ಸುದ್ದಿ ವೆಬ್‌ಸೈಟ್‌ yafa.newsನಲ್ಲೂ “ಮೇ 8, 2018ರಲ್ಲಿ ಪ್ರಕಟಗೊಂದ ವರದಿಯಲ್ಲಿ ಸಂಸತ್ ಚುನಾವಣೆಯಲ್ಲಿ ಹೆಜ್ಬುಲ್ಲಾ ಮುನ್ನಡೆ ಸಾಧಿಸಿದ ಬಳಿಕ ಹೆಜ್ಬುಲ್ಲಾ ಮತ್ತು ಅಮಲ್ ಇಸ್ಲಾಮಿಕ್ ವಿವಿದೆಡೆ ಪ್ರಚೋದನಕಾರಿ ಘೋಷಣೆ ಕೂಗುತ್ತಾ ಜಾಥಾ ನಡೆಸಿದ್ದು, ಇದರಿಂದ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ” ಎಂದು ಹೇಳಲಾಗಿದೆ.

dd-sunnah.net ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಅದನ್ನೇ ತಿಳಿಸಲಾಗಿದೆ.

ಒಟ್ಟಿನಲ್ಲಿ ನಾವು ಈ ಸುದ್ದಿಯಲ್ಲಿ ಉಲ್ಲೇಖಿಸಿದ ವೈರಲ್ ವಿಡಿಯೋ ಲೆಬನಾನ್‌ನಲ್ಲಿ 2018ರಲ್ಲಿ ಸಂಸತ್ ಚುನಾವಣೆ ನಡೆದಾಗ ಸಂಭವಿಸಿದ ರಾಜಕೀಯ ಸಂಘರ್ಷದ್ದಾಗಿದೆ. ಹೆಜ್ವುಲ್ಲಾ ನಾಯಕನ ಹತ್ಯೆ ಬಳಿಕ ಉಂಟಾದ ಸುನ್ನೀ-ಶಿಯಾ ಸಂಘರ್ಷದಲ್ಲ.

ಇನ್ನು ಈ ಸಂಜೆ ಪ್ರಕಟಿಸಿರುವ ವರದಿಯ ಮಾಹಿತಿಗಳನ್ನು ಯಾವ ಮೂಲದಿಂದ ಪಡೆಯಲಾಗಿದೆ ಎಂಬುವುದು ಗೊತ್ತಾಗಿಲ್ಲ. ಒಟ್ಟಿನಲ್ಲಿ ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಏರ್ಪಟ್ಟ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ವರದಿ ಮಾಡಿರುವುದು ನಮಗೆ ಲಭ್ಯವಾಗಿಲ್ಲ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...