Homeಫ್ಯಾಕ್ಟ್‌ಚೆಕ್FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

- Advertisement -
- Advertisement -

ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷದ ನಡುವೆ ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ ಎಂದು ಸೆಪ್ಟೆಂಬರ್ 27, 2024ರಂದು ಹೆಜ್ಬುಲ್ಲಾ ಖಚಿತಪಡಿಸಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಬೈಕ್ ಮತ್ತು ಕಾರುಗಳಲ್ಲಿ ಬರುವ ಒಂದಷ್ಟು ಜನರು ಬೀದಿ ಜಗಳದಲ್ಲಿ ತೊಡಗಿರುವುದು ಇದೆ. ಈ ವಿಡಿಯೋ ಹಂಚಿಕೊಂಡಿರುವ ಕೆಲವರು ಹಸನ್ ನಸ್ರಲ್ಲಾ ಹತ್ಯೆಯ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಆಂತರಿಕ ಕಚ್ಚಾಟ ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 30ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಭಾಸ್ಕರ್ ಮಿಶ್ರಾ ಎಂಬ ಬಳಕೆದಾರ (@Bhaskar_m11) ಲೆಬನಾನ್‌ನಲ್ಲಿ ಶಿಯಾ-ಸುನ್ನೀ ಸಂಘರ್ಷ ಶುರುವಾಗಿದೆ. ಹೆಜ್ಬುಲ್ಲಾ ಬೆಂಬಲಿತ ಶಿಯಾ ಮುಸ್ಲಿಮರ ಮೇಲೆ ಈಗ ಸುನ್ನೀ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ. ಇಸ್ರೇಲ್ ದಾಳಿಯ ಬಳಿಕ ತುಂಬಾ ಪ್ರಶ್ನೆಗಳು ಬದಲಾಗಿವೆ” ಎಂದು ಬರೆದುಕೊಂಡಿದ್ದರು.

ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ರಕ್ತಪಾತ” ಎಂದು ಸೆಪ್ಟೆಂಬರ್ 30ರಂದು ಕನ್ನಡ ಸುದ್ದಿ ವೆಬ್‌ಸೈಟ್ ಈ ಸಂಜೆ ವರದಿ ಮಾಡಿತ್ತು. ವರದಿಯಲ್ಲಿ “ಸುನ್ನೀ ಮುಸ್ಲಿಂ ಸಮುದಾಯ ಈಗ ಹಿಜ್ಬುಲ್‌ ಬೆಂಬಲಿಗರನ್ನು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುತ್ತಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ವಿವರಿಸಿತ್ತು. ಈ ಸಂಜೆ ಯಾವ ಮೂಲದಿಂದ ಈ ಮಾಹಿತಿ ಪಡೆದಿದೆ ಎಂದು ಗೊತ್ತಿಲ್ಲ.

ಫ್ಯಾಕ್ಟ್‌ಚೆಕ್ : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಸಂಘರ್ಷ ಏರ್ಪಟ್ಟಿರುವ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯಾವುದೇ ಪ್ರಮುಖ, ವಿಶ್ವಾಸಾರ್ಹ ಮಾಧ್ಯಮಗಳಲ್ಲಿ ಆ ಕುರಿತು ವರದಿಯಾಗಿರುವುದು ನಮಗೆ ಕಂಡು ಬಂದಿಲ್ಲ.

ಎಕ್ಸ್‌ ಬಳಕೆದಾರ ಭಾಸ್ಕರ್ ಮಿಶ್ರಾ ಹಂಚಿಕೊಂಡಿರುವ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಮೇ 8, 2018ರಲ್ಲಿ ವಿಡಿಯೋ ಕುರಿತು ಪ್ರಕಟಗೊಂಡ ಅರೆಬಿಕ್ ವರದಿಯೊಂದು ಲಭ್ಯವಾಗಿದೆ.

skynewsarabia.com ಪ್ರಕಟಿಸಿದ ವರದಿಯಲ್ಲಿ 2018ರಲ್ಲಿ ಲೆಬನಾನ್‌ ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜಧಾನಿ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೆಜ್ಬುಲ್ಲಾ ಬೆಂಬಲಿಗರು ಮತ್ತು ಸಂಘಟನೆಯ ಸದಸ್ಯರು ಸುನ್ನೀ ಮತ್ತು ಕ್ರೈಸ್ತ ಪ್ರಾಬಲ್ಯದ ಪ್ರದೇಶಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಇದು ಅಲ್ಲಿನ ನಿವಾಸಿಗಳು ಮತ್ತು ಸಂಘಟನೆಯ ಸದಸ್ಯರ ನಡುವೆ ಗಲಾಟೆಗೆ ಕಾರಣವಾಗಿದೆ. ಬೀದಿ ಜಗಳ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದೆ. 2008ರಲ್ಲಿ ಹೆಜ್ಬುಲ್ಲಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿ ರಾಜಕೀಯ ಪ್ರಾಬಲ್ಯ ಪಡೆದಾಗಲೂ ಈ ರೀತಿಯ ಸಂಘರ್ಷ ನಡೆದಿದೆ” ಎಂದು ತಿಳಿಸಲಾಗಿದೆ.

ಮತ್ತೊಂದು ಅರೆಬಿಕ್ ಸುದ್ದಿ ವೆಬ್‌ಸೈಟ್‌ yafa.newsನಲ್ಲೂ “ಮೇ 8, 2018ರಲ್ಲಿ ಪ್ರಕಟಗೊಂದ ವರದಿಯಲ್ಲಿ ಸಂಸತ್ ಚುನಾವಣೆಯಲ್ಲಿ ಹೆಜ್ಬುಲ್ಲಾ ಮುನ್ನಡೆ ಸಾಧಿಸಿದ ಬಳಿಕ ಹೆಜ್ಬುಲ್ಲಾ ಮತ್ತು ಅಮಲ್ ಇಸ್ಲಾಮಿಕ್ ವಿವಿದೆಡೆ ಪ್ರಚೋದನಕಾರಿ ಘೋಷಣೆ ಕೂಗುತ್ತಾ ಜಾಥಾ ನಡೆಸಿದ್ದು, ಇದರಿಂದ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ” ಎಂದು ಹೇಳಲಾಗಿದೆ.

dd-sunnah.net ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಅದನ್ನೇ ತಿಳಿಸಲಾಗಿದೆ.

ಒಟ್ಟಿನಲ್ಲಿ ನಾವು ಈ ಸುದ್ದಿಯಲ್ಲಿ ಉಲ್ಲೇಖಿಸಿದ ವೈರಲ್ ವಿಡಿಯೋ ಲೆಬನಾನ್‌ನಲ್ಲಿ 2018ರಲ್ಲಿ ಸಂಸತ್ ಚುನಾವಣೆ ನಡೆದಾಗ ಸಂಭವಿಸಿದ ರಾಜಕೀಯ ಸಂಘರ್ಷದ್ದಾಗಿದೆ. ಹೆಜ್ವುಲ್ಲಾ ನಾಯಕನ ಹತ್ಯೆ ಬಳಿಕ ಉಂಟಾದ ಸುನ್ನೀ-ಶಿಯಾ ಸಂಘರ್ಷದಲ್ಲ.

ಇನ್ನು ಈ ಸಂಜೆ ಪ್ರಕಟಿಸಿರುವ ವರದಿಯ ಮಾಹಿತಿಗಳನ್ನು ಯಾವ ಮೂಲದಿಂದ ಪಡೆಯಲಾಗಿದೆ ಎಂಬುವುದು ಗೊತ್ತಾಗಿಲ್ಲ. ಒಟ್ಟಿನಲ್ಲಿ ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಏರ್ಪಟ್ಟ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ವರದಿ ಮಾಡಿರುವುದು ನಮಗೆ ಲಭ್ಯವಾಗಿಲ್ಲ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...