Homeಫ್ಯಾಕ್ಟ್‌ಚೆಕ್FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

- Advertisement -
- Advertisement -

ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷದ ನಡುವೆ ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ ಎಂದು ಸೆಪ್ಟೆಂಬರ್ 27, 2024ರಂದು ಹೆಜ್ಬುಲ್ಲಾ ಖಚಿತಪಡಿಸಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಬೈಕ್ ಮತ್ತು ಕಾರುಗಳಲ್ಲಿ ಬರುವ ಒಂದಷ್ಟು ಜನರು ಬೀದಿ ಜಗಳದಲ್ಲಿ ತೊಡಗಿರುವುದು ಇದೆ. ಈ ವಿಡಿಯೋ ಹಂಚಿಕೊಂಡಿರುವ ಕೆಲವರು ಹಸನ್ ನಸ್ರಲ್ಲಾ ಹತ್ಯೆಯ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಆಂತರಿಕ ಕಚ್ಚಾಟ ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 30ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಭಾಸ್ಕರ್ ಮಿಶ್ರಾ ಎಂಬ ಬಳಕೆದಾರ (@Bhaskar_m11) ಲೆಬನಾನ್‌ನಲ್ಲಿ ಶಿಯಾ-ಸುನ್ನೀ ಸಂಘರ್ಷ ಶುರುವಾಗಿದೆ. ಹೆಜ್ಬುಲ್ಲಾ ಬೆಂಬಲಿತ ಶಿಯಾ ಮುಸ್ಲಿಮರ ಮೇಲೆ ಈಗ ಸುನ್ನೀ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ. ಇಸ್ರೇಲ್ ದಾಳಿಯ ಬಳಿಕ ತುಂಬಾ ಪ್ರಶ್ನೆಗಳು ಬದಲಾಗಿವೆ” ಎಂದು ಬರೆದುಕೊಂಡಿದ್ದರು.

ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ರಕ್ತಪಾತ” ಎಂದು ಸೆಪ್ಟೆಂಬರ್ 30ರಂದು ಕನ್ನಡ ಸುದ್ದಿ ವೆಬ್‌ಸೈಟ್ ಈ ಸಂಜೆ ವರದಿ ಮಾಡಿತ್ತು. ವರದಿಯಲ್ಲಿ “ಸುನ್ನೀ ಮುಸ್ಲಿಂ ಸಮುದಾಯ ಈಗ ಹಿಜ್ಬುಲ್‌ ಬೆಂಬಲಿಗರನ್ನು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುತ್ತಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ವಿವರಿಸಿತ್ತು. ಈ ಸಂಜೆ ಯಾವ ಮೂಲದಿಂದ ಈ ಮಾಹಿತಿ ಪಡೆದಿದೆ ಎಂದು ಗೊತ್ತಿಲ್ಲ.

ಫ್ಯಾಕ್ಟ್‌ಚೆಕ್ : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಸಂಘರ್ಷ ಏರ್ಪಟ್ಟಿರುವ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯಾವುದೇ ಪ್ರಮುಖ, ವಿಶ್ವಾಸಾರ್ಹ ಮಾಧ್ಯಮಗಳಲ್ಲಿ ಆ ಕುರಿತು ವರದಿಯಾಗಿರುವುದು ನಮಗೆ ಕಂಡು ಬಂದಿಲ್ಲ.

ಎಕ್ಸ್‌ ಬಳಕೆದಾರ ಭಾಸ್ಕರ್ ಮಿಶ್ರಾ ಹಂಚಿಕೊಂಡಿರುವ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಮೇ 8, 2018ರಲ್ಲಿ ವಿಡಿಯೋ ಕುರಿತು ಪ್ರಕಟಗೊಂಡ ಅರೆಬಿಕ್ ವರದಿಯೊಂದು ಲಭ್ಯವಾಗಿದೆ.

skynewsarabia.com ಪ್ರಕಟಿಸಿದ ವರದಿಯಲ್ಲಿ 2018ರಲ್ಲಿ ಲೆಬನಾನ್‌ ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜಧಾನಿ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೆಜ್ಬುಲ್ಲಾ ಬೆಂಬಲಿಗರು ಮತ್ತು ಸಂಘಟನೆಯ ಸದಸ್ಯರು ಸುನ್ನೀ ಮತ್ತು ಕ್ರೈಸ್ತ ಪ್ರಾಬಲ್ಯದ ಪ್ರದೇಶಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಇದು ಅಲ್ಲಿನ ನಿವಾಸಿಗಳು ಮತ್ತು ಸಂಘಟನೆಯ ಸದಸ್ಯರ ನಡುವೆ ಗಲಾಟೆಗೆ ಕಾರಣವಾಗಿದೆ. ಬೀದಿ ಜಗಳ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದೆ. 2008ರಲ್ಲಿ ಹೆಜ್ಬುಲ್ಲಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿ ರಾಜಕೀಯ ಪ್ರಾಬಲ್ಯ ಪಡೆದಾಗಲೂ ಈ ರೀತಿಯ ಸಂಘರ್ಷ ನಡೆದಿದೆ” ಎಂದು ತಿಳಿಸಲಾಗಿದೆ.

ಮತ್ತೊಂದು ಅರೆಬಿಕ್ ಸುದ್ದಿ ವೆಬ್‌ಸೈಟ್‌ yafa.newsನಲ್ಲೂ “ಮೇ 8, 2018ರಲ್ಲಿ ಪ್ರಕಟಗೊಂದ ವರದಿಯಲ್ಲಿ ಸಂಸತ್ ಚುನಾವಣೆಯಲ್ಲಿ ಹೆಜ್ಬುಲ್ಲಾ ಮುನ್ನಡೆ ಸಾಧಿಸಿದ ಬಳಿಕ ಹೆಜ್ಬುಲ್ಲಾ ಮತ್ತು ಅಮಲ್ ಇಸ್ಲಾಮಿಕ್ ವಿವಿದೆಡೆ ಪ್ರಚೋದನಕಾರಿ ಘೋಷಣೆ ಕೂಗುತ್ತಾ ಜಾಥಾ ನಡೆಸಿದ್ದು, ಇದರಿಂದ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ” ಎಂದು ಹೇಳಲಾಗಿದೆ.

dd-sunnah.net ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಅದನ್ನೇ ತಿಳಿಸಲಾಗಿದೆ.

ಒಟ್ಟಿನಲ್ಲಿ ನಾವು ಈ ಸುದ್ದಿಯಲ್ಲಿ ಉಲ್ಲೇಖಿಸಿದ ವೈರಲ್ ವಿಡಿಯೋ ಲೆಬನಾನ್‌ನಲ್ಲಿ 2018ರಲ್ಲಿ ಸಂಸತ್ ಚುನಾವಣೆ ನಡೆದಾಗ ಸಂಭವಿಸಿದ ರಾಜಕೀಯ ಸಂಘರ್ಷದ್ದಾಗಿದೆ. ಹೆಜ್ವುಲ್ಲಾ ನಾಯಕನ ಹತ್ಯೆ ಬಳಿಕ ಉಂಟಾದ ಸುನ್ನೀ-ಶಿಯಾ ಸಂಘರ್ಷದಲ್ಲ.

ಇನ್ನು ಈ ಸಂಜೆ ಪ್ರಕಟಿಸಿರುವ ವರದಿಯ ಮಾಹಿತಿಗಳನ್ನು ಯಾವ ಮೂಲದಿಂದ ಪಡೆಯಲಾಗಿದೆ ಎಂಬುವುದು ಗೊತ್ತಾಗಿಲ್ಲ. ಒಟ್ಟಿನಲ್ಲಿ ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಏರ್ಪಟ್ಟ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ವರದಿ ಮಾಡಿರುವುದು ನಮಗೆ ಲಭ್ಯವಾಗಿಲ್ಲ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...