Homeಫ್ಯಾಕ್ಟ್‌ಚೆಕ್FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

- Advertisement -
- Advertisement -

ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷದ ನಡುವೆ ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ ಎಂದು ಸೆಪ್ಟೆಂಬರ್ 27, 2024ರಂದು ಹೆಜ್ಬುಲ್ಲಾ ಖಚಿತಪಡಿಸಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಬೈಕ್ ಮತ್ತು ಕಾರುಗಳಲ್ಲಿ ಬರುವ ಒಂದಷ್ಟು ಜನರು ಬೀದಿ ಜಗಳದಲ್ಲಿ ತೊಡಗಿರುವುದು ಇದೆ. ಈ ವಿಡಿಯೋ ಹಂಚಿಕೊಂಡಿರುವ ಕೆಲವರು ಹಸನ್ ನಸ್ರಲ್ಲಾ ಹತ್ಯೆಯ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಆಂತರಿಕ ಕಚ್ಚಾಟ ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 30ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಭಾಸ್ಕರ್ ಮಿಶ್ರಾ ಎಂಬ ಬಳಕೆದಾರ (@Bhaskar_m11) ಲೆಬನಾನ್‌ನಲ್ಲಿ ಶಿಯಾ-ಸುನ್ನೀ ಸಂಘರ್ಷ ಶುರುವಾಗಿದೆ. ಹೆಜ್ಬುಲ್ಲಾ ಬೆಂಬಲಿತ ಶಿಯಾ ಮುಸ್ಲಿಮರ ಮೇಲೆ ಈಗ ಸುನ್ನೀ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ. ಇಸ್ರೇಲ್ ದಾಳಿಯ ಬಳಿಕ ತುಂಬಾ ಪ್ರಶ್ನೆಗಳು ಬದಲಾಗಿವೆ” ಎಂದು ಬರೆದುಕೊಂಡಿದ್ದರು.

ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ರಕ್ತಪಾತ” ಎಂದು ಸೆಪ್ಟೆಂಬರ್ 30ರಂದು ಕನ್ನಡ ಸುದ್ದಿ ವೆಬ್‌ಸೈಟ್ ಈ ಸಂಜೆ ವರದಿ ಮಾಡಿತ್ತು. ವರದಿಯಲ್ಲಿ “ಸುನ್ನೀ ಮುಸ್ಲಿಂ ಸಮುದಾಯ ಈಗ ಹಿಜ್ಬುಲ್‌ ಬೆಂಬಲಿಗರನ್ನು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುತ್ತಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ವಿವರಿಸಿತ್ತು. ಈ ಸಂಜೆ ಯಾವ ಮೂಲದಿಂದ ಈ ಮಾಹಿತಿ ಪಡೆದಿದೆ ಎಂದು ಗೊತ್ತಿಲ್ಲ.

ಫ್ಯಾಕ್ಟ್‌ಚೆಕ್ : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಸಂಘರ್ಷ ಏರ್ಪಟ್ಟಿರುವ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯಾವುದೇ ಪ್ರಮುಖ, ವಿಶ್ವಾಸಾರ್ಹ ಮಾಧ್ಯಮಗಳಲ್ಲಿ ಆ ಕುರಿತು ವರದಿಯಾಗಿರುವುದು ನಮಗೆ ಕಂಡು ಬಂದಿಲ್ಲ.

ಎಕ್ಸ್‌ ಬಳಕೆದಾರ ಭಾಸ್ಕರ್ ಮಿಶ್ರಾ ಹಂಚಿಕೊಂಡಿರುವ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಮೇ 8, 2018ರಲ್ಲಿ ವಿಡಿಯೋ ಕುರಿತು ಪ್ರಕಟಗೊಂಡ ಅರೆಬಿಕ್ ವರದಿಯೊಂದು ಲಭ್ಯವಾಗಿದೆ.

skynewsarabia.com ಪ್ರಕಟಿಸಿದ ವರದಿಯಲ್ಲಿ 2018ರಲ್ಲಿ ಲೆಬನಾನ್‌ ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜಧಾನಿ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೆಜ್ಬುಲ್ಲಾ ಬೆಂಬಲಿಗರು ಮತ್ತು ಸಂಘಟನೆಯ ಸದಸ್ಯರು ಸುನ್ನೀ ಮತ್ತು ಕ್ರೈಸ್ತ ಪ್ರಾಬಲ್ಯದ ಪ್ರದೇಶಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಇದು ಅಲ್ಲಿನ ನಿವಾಸಿಗಳು ಮತ್ತು ಸಂಘಟನೆಯ ಸದಸ್ಯರ ನಡುವೆ ಗಲಾಟೆಗೆ ಕಾರಣವಾಗಿದೆ. ಬೀದಿ ಜಗಳ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದೆ. 2008ರಲ್ಲಿ ಹೆಜ್ಬುಲ್ಲಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿ ರಾಜಕೀಯ ಪ್ರಾಬಲ್ಯ ಪಡೆದಾಗಲೂ ಈ ರೀತಿಯ ಸಂಘರ್ಷ ನಡೆದಿದೆ” ಎಂದು ತಿಳಿಸಲಾಗಿದೆ.

ಮತ್ತೊಂದು ಅರೆಬಿಕ್ ಸುದ್ದಿ ವೆಬ್‌ಸೈಟ್‌ yafa.newsನಲ್ಲೂ “ಮೇ 8, 2018ರಲ್ಲಿ ಪ್ರಕಟಗೊಂದ ವರದಿಯಲ್ಲಿ ಸಂಸತ್ ಚುನಾವಣೆಯಲ್ಲಿ ಹೆಜ್ಬುಲ್ಲಾ ಮುನ್ನಡೆ ಸಾಧಿಸಿದ ಬಳಿಕ ಹೆಜ್ಬುಲ್ಲಾ ಮತ್ತು ಅಮಲ್ ಇಸ್ಲಾಮಿಕ್ ವಿವಿದೆಡೆ ಪ್ರಚೋದನಕಾರಿ ಘೋಷಣೆ ಕೂಗುತ್ತಾ ಜಾಥಾ ನಡೆಸಿದ್ದು, ಇದರಿಂದ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ” ಎಂದು ಹೇಳಲಾಗಿದೆ.

dd-sunnah.net ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಅದನ್ನೇ ತಿಳಿಸಲಾಗಿದೆ.

ಒಟ್ಟಿನಲ್ಲಿ ನಾವು ಈ ಸುದ್ದಿಯಲ್ಲಿ ಉಲ್ಲೇಖಿಸಿದ ವೈರಲ್ ವಿಡಿಯೋ ಲೆಬನಾನ್‌ನಲ್ಲಿ 2018ರಲ್ಲಿ ಸಂಸತ್ ಚುನಾವಣೆ ನಡೆದಾಗ ಸಂಭವಿಸಿದ ರಾಜಕೀಯ ಸಂಘರ್ಷದ್ದಾಗಿದೆ. ಹೆಜ್ವುಲ್ಲಾ ನಾಯಕನ ಹತ್ಯೆ ಬಳಿಕ ಉಂಟಾದ ಸುನ್ನೀ-ಶಿಯಾ ಸಂಘರ್ಷದಲ್ಲ.

ಇನ್ನು ಈ ಸಂಜೆ ಪ್ರಕಟಿಸಿರುವ ವರದಿಯ ಮಾಹಿತಿಗಳನ್ನು ಯಾವ ಮೂಲದಿಂದ ಪಡೆಯಲಾಗಿದೆ ಎಂಬುವುದು ಗೊತ್ತಾಗಿಲ್ಲ. ಒಟ್ಟಿನಲ್ಲಿ ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಏರ್ಪಟ್ಟ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ವರದಿ ಮಾಡಿರುವುದು ನಮಗೆ ಲಭ್ಯವಾಗಿಲ್ಲ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...