Homeಫ್ಯಾಕ್ಟ್‌ಚೆಕ್FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

- Advertisement -
- Advertisement -

ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷದ ನಡುವೆ ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ ಎಂದು ಸೆಪ್ಟೆಂಬರ್ 27, 2024ರಂದು ಹೆಜ್ಬುಲ್ಲಾ ಖಚಿತಪಡಿಸಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಬೈಕ್ ಮತ್ತು ಕಾರುಗಳಲ್ಲಿ ಬರುವ ಒಂದಷ್ಟು ಜನರು ಬೀದಿ ಜಗಳದಲ್ಲಿ ತೊಡಗಿರುವುದು ಇದೆ. ಈ ವಿಡಿಯೋ ಹಂಚಿಕೊಂಡಿರುವ ಕೆಲವರು ಹಸನ್ ನಸ್ರಲ್ಲಾ ಹತ್ಯೆಯ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಆಂತರಿಕ ಕಚ್ಚಾಟ ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 30ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಭಾಸ್ಕರ್ ಮಿಶ್ರಾ ಎಂಬ ಬಳಕೆದಾರ (@Bhaskar_m11) ಲೆಬನಾನ್‌ನಲ್ಲಿ ಶಿಯಾ-ಸುನ್ನೀ ಸಂಘರ್ಷ ಶುರುವಾಗಿದೆ. ಹೆಜ್ಬುಲ್ಲಾ ಬೆಂಬಲಿತ ಶಿಯಾ ಮುಸ್ಲಿಮರ ಮೇಲೆ ಈಗ ಸುನ್ನೀ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ. ಇಸ್ರೇಲ್ ದಾಳಿಯ ಬಳಿಕ ತುಂಬಾ ಪ್ರಶ್ನೆಗಳು ಬದಲಾಗಿವೆ” ಎಂದು ಬರೆದುಕೊಂಡಿದ್ದರು.

ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ರಕ್ತಪಾತ” ಎಂದು ಸೆಪ್ಟೆಂಬರ್ 30ರಂದು ಕನ್ನಡ ಸುದ್ದಿ ವೆಬ್‌ಸೈಟ್ ಈ ಸಂಜೆ ವರದಿ ಮಾಡಿತ್ತು. ವರದಿಯಲ್ಲಿ “ಸುನ್ನೀ ಮುಸ್ಲಿಂ ಸಮುದಾಯ ಈಗ ಹಿಜ್ಬುಲ್‌ ಬೆಂಬಲಿಗರನ್ನು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುತ್ತಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ವಿವರಿಸಿತ್ತು. ಈ ಸಂಜೆ ಯಾವ ಮೂಲದಿಂದ ಈ ಮಾಹಿತಿ ಪಡೆದಿದೆ ಎಂದು ಗೊತ್ತಿಲ್ಲ.

ಫ್ಯಾಕ್ಟ್‌ಚೆಕ್ : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾಗಳ ನಡುವೆ ಸಂಘರ್ಷ ಏರ್ಪಟ್ಟಿರುವ ಬಗ್ಗೆ ಮಾಧ್ಯಮ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯಾವುದೇ ಪ್ರಮುಖ, ವಿಶ್ವಾಸಾರ್ಹ ಮಾಧ್ಯಮಗಳಲ್ಲಿ ಆ ಕುರಿತು ವರದಿಯಾಗಿರುವುದು ನಮಗೆ ಕಂಡು ಬಂದಿಲ್ಲ.

ಎಕ್ಸ್‌ ಬಳಕೆದಾರ ಭಾಸ್ಕರ್ ಮಿಶ್ರಾ ಹಂಚಿಕೊಂಡಿರುವ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಮೇ 8, 2018ರಲ್ಲಿ ವಿಡಿಯೋ ಕುರಿತು ಪ್ರಕಟಗೊಂಡ ಅರೆಬಿಕ್ ವರದಿಯೊಂದು ಲಭ್ಯವಾಗಿದೆ.

skynewsarabia.com ಪ್ರಕಟಿಸಿದ ವರದಿಯಲ್ಲಿ 2018ರಲ್ಲಿ ಲೆಬನಾನ್‌ ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜಧಾನಿ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೆಜ್ಬುಲ್ಲಾ ಬೆಂಬಲಿಗರು ಮತ್ತು ಸಂಘಟನೆಯ ಸದಸ್ಯರು ಸುನ್ನೀ ಮತ್ತು ಕ್ರೈಸ್ತ ಪ್ರಾಬಲ್ಯದ ಪ್ರದೇಶಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಇದು ಅಲ್ಲಿನ ನಿವಾಸಿಗಳು ಮತ್ತು ಸಂಘಟನೆಯ ಸದಸ್ಯರ ನಡುವೆ ಗಲಾಟೆಗೆ ಕಾರಣವಾಗಿದೆ. ಬೀದಿ ಜಗಳ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದೆ. 2008ರಲ್ಲಿ ಹೆಜ್ಬುಲ್ಲಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿ ರಾಜಕೀಯ ಪ್ರಾಬಲ್ಯ ಪಡೆದಾಗಲೂ ಈ ರೀತಿಯ ಸಂಘರ್ಷ ನಡೆದಿದೆ” ಎಂದು ತಿಳಿಸಲಾಗಿದೆ.

ಮತ್ತೊಂದು ಅರೆಬಿಕ್ ಸುದ್ದಿ ವೆಬ್‌ಸೈಟ್‌ yafa.newsನಲ್ಲೂ “ಮೇ 8, 2018ರಲ್ಲಿ ಪ್ರಕಟಗೊಂದ ವರದಿಯಲ್ಲಿ ಸಂಸತ್ ಚುನಾವಣೆಯಲ್ಲಿ ಹೆಜ್ಬುಲ್ಲಾ ಮುನ್ನಡೆ ಸಾಧಿಸಿದ ಬಳಿಕ ಹೆಜ್ಬುಲ್ಲಾ ಮತ್ತು ಅಮಲ್ ಇಸ್ಲಾಮಿಕ್ ವಿವಿದೆಡೆ ಪ್ರಚೋದನಕಾರಿ ಘೋಷಣೆ ಕೂಗುತ್ತಾ ಜಾಥಾ ನಡೆಸಿದ್ದು, ಇದರಿಂದ ಬೈರುತ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ” ಎಂದು ಹೇಳಲಾಗಿದೆ.

dd-sunnah.net ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಅದನ್ನೇ ತಿಳಿಸಲಾಗಿದೆ.

ಒಟ್ಟಿನಲ್ಲಿ ನಾವು ಈ ಸುದ್ದಿಯಲ್ಲಿ ಉಲ್ಲೇಖಿಸಿದ ವೈರಲ್ ವಿಡಿಯೋ ಲೆಬನಾನ್‌ನಲ್ಲಿ 2018ರಲ್ಲಿ ಸಂಸತ್ ಚುನಾವಣೆ ನಡೆದಾಗ ಸಂಭವಿಸಿದ ರಾಜಕೀಯ ಸಂಘರ್ಷದ್ದಾಗಿದೆ. ಹೆಜ್ವುಲ್ಲಾ ನಾಯಕನ ಹತ್ಯೆ ಬಳಿಕ ಉಂಟಾದ ಸುನ್ನೀ-ಶಿಯಾ ಸಂಘರ್ಷದಲ್ಲ.

ಇನ್ನು ಈ ಸಂಜೆ ಪ್ರಕಟಿಸಿರುವ ವರದಿಯ ಮಾಹಿತಿಗಳನ್ನು ಯಾವ ಮೂಲದಿಂದ ಪಡೆಯಲಾಗಿದೆ ಎಂಬುವುದು ಗೊತ್ತಾಗಿಲ್ಲ. ಒಟ್ಟಿನಲ್ಲಿ ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಏರ್ಪಟ್ಟ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ವರದಿ ಮಾಡಿರುವುದು ನಮಗೆ ಲಭ್ಯವಾಗಿಲ್ಲ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...