Homeಫ್ಯಾಕ್ಟ್‌ಚೆಕ್Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್...

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

- Advertisement -
- Advertisement -

ದೆಹಲಿಯ ಜವಹರಲಾಲ್ ನೆಹರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ದ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟಗೊಂಡಿದೆ.

ಈ ಕುರಿತು “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಎಬಿವಿಬಿ ಕ್ಲೀನ್ ಸ್ವೀಪ್, ಅಧ್ಯಕ್ಷ ಸೇರಿ ನಾಲ್ಕೂ ಸ್ಥಾನದಲ್ಲಿ ಗೆಲುವು!” ಎಂಬ ಶೀರ್ಷಿಕೆಯಲ್ಲಿ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು.

ಸುವರ್ಣ ನ್ಯೂಸ್‌ ಸುದ್ದಿಯ ಸ್ಕ್ರೀನ್ ಶಾಟ್ 

ಬಲಪಂಥೀಯ ಮಾಧ್ಯಮ ಪೋಸ್ಟ್ ಕಾರ್ಡ್ ಕೂಡ ” ಜೆಎನ್‌ಯುನಲ್ಲಿ ಬದಲಾವಣೆಯ ಗಾಳಿ ಎಂಬ ಶೀರ್ಷಿಕೆಯಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿತ್ತು. ಅದರಲ್ಲಿ “ಅಧ್ಯಕ್ಷ ಸ್ಥಾನಕ್ಕೆ ನಡೆದ ಜೆಎನ್‌ಯು ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಬಿವಿಪಿ. ದೇಶವನ್ನು ತುಂಡು ತುಂಡು (ತುಕ್ಡೆ ತುಕ್ಡೆ) ಮಾಡುತ್ತೇವೆಂದು ಘೋಷಣೆ ಕೂಗಿದ ಜೆಎನ್‌ಯುನಲ್ಲಿ ‘ಭಾರತ ಮಾತಾ ಕೀ ಜೈ’ ಘೋಷಣೆ. ವಿದ್ಯಾರ್ಥಿ ನಾಯಕರಿಗೆ ಮತ್ತು ಎಲ್ಲಾ ಕಾರ್ಯಕರ್ತರ ಒಗ್ಗಟ್ಟಿನ ಪ್ರಯತ್ನಗಳಿಗೆ ಅಭಿನಂದನೆಗಳು” ಎಂದು ಬರೆಯಲಾಗಿತ್ತು.

ಬಳಿಕ, ಸುವರ್ಣ ನ್ಯೂಸ್‌ ತನ್ನ ಸುದ್ದಿಯನ್ನು ತಿದ್ದಿ “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಲೆಫ್ಟ್ ವಿದ್ಯಾರ್ಥಿ ಘಟಕ ಕ್ಲೀನ್ ಸ್ಪೀಪ್, ಎಬಿವಿಪಿಗೆ ಹಿನ್ನಡೆ!” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದೆ.

ಆದರೆ, ಹೊಸ ಸುದ್ದಿಯಲ್ಲಿ ಡಿಲಿಟ್ ಮಾಡಿರುವ ಹಳೆಯ ಸುದ್ದಿಯ ಫೋಟೋವನ್ನೇ ಹಾಕಿದೆ. ಅಲ್ಲದೆ, ಸುವರ್ಣ ನ್ಯೂಸ್ ಡಿಲಿಟ್ ಮಾಡಿರುವ ಸುದ್ದಿಯ ಲಿಂಕ್ ನಮಗೆ ಲಭ್ಯವಾಗಿದ್ದು, ಅದರಲ್ಲಿ ಎಬಿವಿಪಿಗೆ ಜಯ ಎಂದು ಬರೆದಿರುವುದನ್ನು ನೋಡಬಹುದು.


ಪೋಸ್ಟ್‌ ಕಾರ್ಡ್‌ನ ಸಾಮಾಜಿಕ ಜಾಲತಾಣಗಳಿಂದ ಪೋಸ್ಟರ್‌ನ್ನು ಡಿಲಿಟ್ ಮಾಡಲಾಗಿದೆ. ಆದರೆ, ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಮಾರ್ಚ್‌ 24ರಂದು ಬೆಳಿಗ್ಗೆ 6 ಗಂಟೆ 34 ನಿಮಿಷಕ್ಕೆ ಪೋಸ್ಟ್‌ ಕಾರ್ಡ್ ಇಂಗ್ಲಿಷ್ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟರ್‌ ಅಪ್ಲೋಡ್ ಮಾಡಿರುವುದನ್ನು ತೋರಿಸುತ್ತಿದೆ.

ಫ್ಯಾಕ್ಟ್ ಚೆಕ್ : ಕನ್ನಡದ ಮುಖ್ಯ ವಾಹಿನಿ ಮಾಧ್ಯಮವಾದ ಸುವರ್ಣ ನ್ಯೂಸ್ ಮತ್ತು ಬಲಪಂಥೀಯ ಮಾಧ್ಯಮ ಪೋಸ್ಟ್‌ ಕಾರ್ಡ್‌ ಹಂಚಿಕೊಂಡಿರುವ ಸುದ್ದಿ ಸುಳ್ಳು. ಜೆಎನ್‌ಯು ವಿದ್ಯಾರ್ಥಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ.

ನಾನುಗೌರಿ.ಕಾಂ ನಾವು “ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ” ಎಂಬ ಶೀರ್ಷಿಕೆಯಲ್ಲಿ ವಿವರವಾದ ಸುದ್ದಿಯನ್ನು ಇಂದು (ಮಾ.25) ಪ್ರಕಟಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಿಂದಿ, ಇಂಗ್ಲಿಷ್, ಕನ್ನಡ ಸೇರಿದಂತೆ ದೇಶದ ಬಹುತೇಕ ಎಲ್ಲಾ ಮಾಧ್ಯಮಗಳು ಜೆಎನ್‌ಯು ಚುನಾವಣೆ ಕುರಿತು ಸುದ್ದಿ ಪ್ರಕಟಿಸಿದ್ದು, ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದು ಕೊಂಡಿದೆ ಎಂದಿದೆ.

ಕೆಲವೊಂದಿಷ್ಟು ಸುದ್ದಿಗಳ ಲಿಂಕ್ ಕೆಳಗಡೆ ಇದೆ

ಎಎನ್‌ಐ ಎಕ್ಸ್ ಪೋಸ್ಟ್ ಲಿಂಕ್ 

ಎನ್‌ಡಿಟಿವಿ ಸುದ್ದಿ ಲಿಂಕ್

ಹಿಂದುಸ್ಥಾನ್ ಟೈಮ್ಸ್ ಸುದ್ದಿ ಲಿಂಕ್

ಟೈಮ್ಸ್ ಆಫ್ ಇಂಡಿಯಾ ಸುದ್ದಿ ಲಿಂಕ್

ಮತ್ತೊಂದು ಮಹತ್ವದ ವಿಷಯವೆಂದರೆ ಪೋಸ್ಟ್ ಹಂಚಿಕೊಂಡಿರುವ ಪೋಸ್ಟರ್‌ನಲ್ಲಿರುವುದು ಕೂಡ ಹಳೆ ಫೋಟೋ ಆಗಿದೆ. ಆ ಫೋಟೋ ಕಳೆದ ವರ್ಷ ದೆಹಲಿ ವಿಶ್ವ ವಿದ್ಯಾಲಯಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯದ್ದು, ಈ ಕುರಿತ ಸುದ್ದಿ ಕೆಳಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಹಾಗಾಗಿ, ಸುವರ್ಣ ನ್ಯೂಸ್ ಮತ್ತು ಪೋಸ್ಟ್‌ ಕಾರ್ಡ್ ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯ ಕುರಿತು ಪ್ರಕಟಿಸಿರುವ ಸುದ್ದಿ ಸುಳ್ಳು. ಜೆಎನ್‌ಯು ಚುನಾವಣೆಯಲ್ಲಿ ಎಡ ವಿದ್ಯಾರ್ಥಿಗಳ ಒಕ್ಕೂಟ ಯುನೈಟೆಡ್ ಲೆಫ್ಟ್‌ಗೆ ಭರ್ಜರಿ ಜಯ ಸಾಧಿಸಿದೆ. ಆರ್‌ಎಸ್‌ಎಸ್‌, ಬಿಜೆಪಿಯ ವಿದ್ಯಾರ್ಥಿಯ ಸಂಘಟನೆ ಎಬಿವಿಪಿಗೆ ತೀವ್ರ ಮುಖಭಂಗವಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...