Homeಫ್ಯಾಕ್ಟ್‌ಚೆಕ್Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್...

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

- Advertisement -
- Advertisement -

ದೆಹಲಿಯ ಜವಹರಲಾಲ್ ನೆಹರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ದ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟಗೊಂಡಿದೆ.

ಈ ಕುರಿತು “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಎಬಿವಿಬಿ ಕ್ಲೀನ್ ಸ್ವೀಪ್, ಅಧ್ಯಕ್ಷ ಸೇರಿ ನಾಲ್ಕೂ ಸ್ಥಾನದಲ್ಲಿ ಗೆಲುವು!” ಎಂಬ ಶೀರ್ಷಿಕೆಯಲ್ಲಿ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು.

ಸುವರ್ಣ ನ್ಯೂಸ್‌ ಸುದ್ದಿಯ ಸ್ಕ್ರೀನ್ ಶಾಟ್ 

ಬಲಪಂಥೀಯ ಮಾಧ್ಯಮ ಪೋಸ್ಟ್ ಕಾರ್ಡ್ ಕೂಡ ” ಜೆಎನ್‌ಯುನಲ್ಲಿ ಬದಲಾವಣೆಯ ಗಾಳಿ ಎಂಬ ಶೀರ್ಷಿಕೆಯಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿತ್ತು. ಅದರಲ್ಲಿ “ಅಧ್ಯಕ್ಷ ಸ್ಥಾನಕ್ಕೆ ನಡೆದ ಜೆಎನ್‌ಯು ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಬಿವಿಪಿ. ದೇಶವನ್ನು ತುಂಡು ತುಂಡು (ತುಕ್ಡೆ ತುಕ್ಡೆ) ಮಾಡುತ್ತೇವೆಂದು ಘೋಷಣೆ ಕೂಗಿದ ಜೆಎನ್‌ಯುನಲ್ಲಿ ‘ಭಾರತ ಮಾತಾ ಕೀ ಜೈ’ ಘೋಷಣೆ. ವಿದ್ಯಾರ್ಥಿ ನಾಯಕರಿಗೆ ಮತ್ತು ಎಲ್ಲಾ ಕಾರ್ಯಕರ್ತರ ಒಗ್ಗಟ್ಟಿನ ಪ್ರಯತ್ನಗಳಿಗೆ ಅಭಿನಂದನೆಗಳು” ಎಂದು ಬರೆಯಲಾಗಿತ್ತು.

ಬಳಿಕ, ಸುವರ್ಣ ನ್ಯೂಸ್‌ ತನ್ನ ಸುದ್ದಿಯನ್ನು ತಿದ್ದಿ “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಲೆಫ್ಟ್ ವಿದ್ಯಾರ್ಥಿ ಘಟಕ ಕ್ಲೀನ್ ಸ್ಪೀಪ್, ಎಬಿವಿಪಿಗೆ ಹಿನ್ನಡೆ!” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದೆ.

ಆದರೆ, ಹೊಸ ಸುದ್ದಿಯಲ್ಲಿ ಡಿಲಿಟ್ ಮಾಡಿರುವ ಹಳೆಯ ಸುದ್ದಿಯ ಫೋಟೋವನ್ನೇ ಹಾಕಿದೆ. ಅಲ್ಲದೆ, ಸುವರ್ಣ ನ್ಯೂಸ್ ಡಿಲಿಟ್ ಮಾಡಿರುವ ಸುದ್ದಿಯ ಲಿಂಕ್ ನಮಗೆ ಲಭ್ಯವಾಗಿದ್ದು, ಅದರಲ್ಲಿ ಎಬಿವಿಪಿಗೆ ಜಯ ಎಂದು ಬರೆದಿರುವುದನ್ನು ನೋಡಬಹುದು.


ಪೋಸ್ಟ್‌ ಕಾರ್ಡ್‌ನ ಸಾಮಾಜಿಕ ಜಾಲತಾಣಗಳಿಂದ ಪೋಸ್ಟರ್‌ನ್ನು ಡಿಲಿಟ್ ಮಾಡಲಾಗಿದೆ. ಆದರೆ, ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಮಾರ್ಚ್‌ 24ರಂದು ಬೆಳಿಗ್ಗೆ 6 ಗಂಟೆ 34 ನಿಮಿಷಕ್ಕೆ ಪೋಸ್ಟ್‌ ಕಾರ್ಡ್ ಇಂಗ್ಲಿಷ್ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟರ್‌ ಅಪ್ಲೋಡ್ ಮಾಡಿರುವುದನ್ನು ತೋರಿಸುತ್ತಿದೆ.

ಫ್ಯಾಕ್ಟ್ ಚೆಕ್ : ಕನ್ನಡದ ಮುಖ್ಯ ವಾಹಿನಿ ಮಾಧ್ಯಮವಾದ ಸುವರ್ಣ ನ್ಯೂಸ್ ಮತ್ತು ಬಲಪಂಥೀಯ ಮಾಧ್ಯಮ ಪೋಸ್ಟ್‌ ಕಾರ್ಡ್‌ ಹಂಚಿಕೊಂಡಿರುವ ಸುದ್ದಿ ಸುಳ್ಳು. ಜೆಎನ್‌ಯು ವಿದ್ಯಾರ್ಥಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ.

ನಾನುಗೌರಿ.ಕಾಂ ನಾವು “ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ” ಎಂಬ ಶೀರ್ಷಿಕೆಯಲ್ಲಿ ವಿವರವಾದ ಸುದ್ದಿಯನ್ನು ಇಂದು (ಮಾ.25) ಪ್ರಕಟಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಿಂದಿ, ಇಂಗ್ಲಿಷ್, ಕನ್ನಡ ಸೇರಿದಂತೆ ದೇಶದ ಬಹುತೇಕ ಎಲ್ಲಾ ಮಾಧ್ಯಮಗಳು ಜೆಎನ್‌ಯು ಚುನಾವಣೆ ಕುರಿತು ಸುದ್ದಿ ಪ್ರಕಟಿಸಿದ್ದು, ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದು ಕೊಂಡಿದೆ ಎಂದಿದೆ.

ಕೆಲವೊಂದಿಷ್ಟು ಸುದ್ದಿಗಳ ಲಿಂಕ್ ಕೆಳಗಡೆ ಇದೆ

ಎಎನ್‌ಐ ಎಕ್ಸ್ ಪೋಸ್ಟ್ ಲಿಂಕ್ 

ಎನ್‌ಡಿಟಿವಿ ಸುದ್ದಿ ಲಿಂಕ್

ಹಿಂದುಸ್ಥಾನ್ ಟೈಮ್ಸ್ ಸುದ್ದಿ ಲಿಂಕ್

ಟೈಮ್ಸ್ ಆಫ್ ಇಂಡಿಯಾ ಸುದ್ದಿ ಲಿಂಕ್

ಮತ್ತೊಂದು ಮಹತ್ವದ ವಿಷಯವೆಂದರೆ ಪೋಸ್ಟ್ ಹಂಚಿಕೊಂಡಿರುವ ಪೋಸ್ಟರ್‌ನಲ್ಲಿರುವುದು ಕೂಡ ಹಳೆ ಫೋಟೋ ಆಗಿದೆ. ಆ ಫೋಟೋ ಕಳೆದ ವರ್ಷ ದೆಹಲಿ ವಿಶ್ವ ವಿದ್ಯಾಲಯಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯದ್ದು, ಈ ಕುರಿತ ಸುದ್ದಿ ಕೆಳಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಹಾಗಾಗಿ, ಸುವರ್ಣ ನ್ಯೂಸ್ ಮತ್ತು ಪೋಸ್ಟ್‌ ಕಾರ್ಡ್ ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯ ಕುರಿತು ಪ್ರಕಟಿಸಿರುವ ಸುದ್ದಿ ಸುಳ್ಳು. ಜೆಎನ್‌ಯು ಚುನಾವಣೆಯಲ್ಲಿ ಎಡ ವಿದ್ಯಾರ್ಥಿಗಳ ಒಕ್ಕೂಟ ಯುನೈಟೆಡ್ ಲೆಫ್ಟ್‌ಗೆ ಭರ್ಜರಿ ಜಯ ಸಾಧಿಸಿದೆ. ಆರ್‌ಎಸ್‌ಎಸ್‌, ಬಿಜೆಪಿಯ ವಿದ್ಯಾರ್ಥಿಯ ಸಂಘಟನೆ ಎಬಿವಿಪಿಗೆ ತೀವ್ರ ಮುಖಭಂಗವಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...