Homeಫ್ಯಾಕ್ಟ್‌ಚೆಕ್Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್...

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

- Advertisement -
- Advertisement -

ದೆಹಲಿಯ ಜವಹರಲಾಲ್ ನೆಹರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ದ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟಗೊಂಡಿದೆ.

ಈ ಕುರಿತು “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಎಬಿವಿಬಿ ಕ್ಲೀನ್ ಸ್ವೀಪ್, ಅಧ್ಯಕ್ಷ ಸೇರಿ ನಾಲ್ಕೂ ಸ್ಥಾನದಲ್ಲಿ ಗೆಲುವು!” ಎಂಬ ಶೀರ್ಷಿಕೆಯಲ್ಲಿ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು.

ಸುವರ್ಣ ನ್ಯೂಸ್‌ ಸುದ್ದಿಯ ಸ್ಕ್ರೀನ್ ಶಾಟ್ 

ಬಲಪಂಥೀಯ ಮಾಧ್ಯಮ ಪೋಸ್ಟ್ ಕಾರ್ಡ್ ಕೂಡ ” ಜೆಎನ್‌ಯುನಲ್ಲಿ ಬದಲಾವಣೆಯ ಗಾಳಿ ಎಂಬ ಶೀರ್ಷಿಕೆಯಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿತ್ತು. ಅದರಲ್ಲಿ “ಅಧ್ಯಕ್ಷ ಸ್ಥಾನಕ್ಕೆ ನಡೆದ ಜೆಎನ್‌ಯು ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಬಿವಿಪಿ. ದೇಶವನ್ನು ತುಂಡು ತುಂಡು (ತುಕ್ಡೆ ತುಕ್ಡೆ) ಮಾಡುತ್ತೇವೆಂದು ಘೋಷಣೆ ಕೂಗಿದ ಜೆಎನ್‌ಯುನಲ್ಲಿ ‘ಭಾರತ ಮಾತಾ ಕೀ ಜೈ’ ಘೋಷಣೆ. ವಿದ್ಯಾರ್ಥಿ ನಾಯಕರಿಗೆ ಮತ್ತು ಎಲ್ಲಾ ಕಾರ್ಯಕರ್ತರ ಒಗ್ಗಟ್ಟಿನ ಪ್ರಯತ್ನಗಳಿಗೆ ಅಭಿನಂದನೆಗಳು” ಎಂದು ಬರೆಯಲಾಗಿತ್ತು.

ಬಳಿಕ, ಸುವರ್ಣ ನ್ಯೂಸ್‌ ತನ್ನ ಸುದ್ದಿಯನ್ನು ತಿದ್ದಿ “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಲೆಫ್ಟ್ ವಿದ್ಯಾರ್ಥಿ ಘಟಕ ಕ್ಲೀನ್ ಸ್ಪೀಪ್, ಎಬಿವಿಪಿಗೆ ಹಿನ್ನಡೆ!” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದೆ.

ಆದರೆ, ಹೊಸ ಸುದ್ದಿಯಲ್ಲಿ ಡಿಲಿಟ್ ಮಾಡಿರುವ ಹಳೆಯ ಸುದ್ದಿಯ ಫೋಟೋವನ್ನೇ ಹಾಕಿದೆ. ಅಲ್ಲದೆ, ಸುವರ್ಣ ನ್ಯೂಸ್ ಡಿಲಿಟ್ ಮಾಡಿರುವ ಸುದ್ದಿಯ ಲಿಂಕ್ ನಮಗೆ ಲಭ್ಯವಾಗಿದ್ದು, ಅದರಲ್ಲಿ ಎಬಿವಿಪಿಗೆ ಜಯ ಎಂದು ಬರೆದಿರುವುದನ್ನು ನೋಡಬಹುದು.


ಪೋಸ್ಟ್‌ ಕಾರ್ಡ್‌ನ ಸಾಮಾಜಿಕ ಜಾಲತಾಣಗಳಿಂದ ಪೋಸ್ಟರ್‌ನ್ನು ಡಿಲಿಟ್ ಮಾಡಲಾಗಿದೆ. ಆದರೆ, ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಮಾರ್ಚ್‌ 24ರಂದು ಬೆಳಿಗ್ಗೆ 6 ಗಂಟೆ 34 ನಿಮಿಷಕ್ಕೆ ಪೋಸ್ಟ್‌ ಕಾರ್ಡ್ ಇಂಗ್ಲಿಷ್ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟರ್‌ ಅಪ್ಲೋಡ್ ಮಾಡಿರುವುದನ್ನು ತೋರಿಸುತ್ತಿದೆ.

ಫ್ಯಾಕ್ಟ್ ಚೆಕ್ : ಕನ್ನಡದ ಮುಖ್ಯ ವಾಹಿನಿ ಮಾಧ್ಯಮವಾದ ಸುವರ್ಣ ನ್ಯೂಸ್ ಮತ್ತು ಬಲಪಂಥೀಯ ಮಾಧ್ಯಮ ಪೋಸ್ಟ್‌ ಕಾರ್ಡ್‌ ಹಂಚಿಕೊಂಡಿರುವ ಸುದ್ದಿ ಸುಳ್ಳು. ಜೆಎನ್‌ಯು ವಿದ್ಯಾರ್ಥಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ.

ನಾನುಗೌರಿ.ಕಾಂ ನಾವು “ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಎಡ ವಿದ್ಯಾರ್ಥಿ ಒಕ್ಕೂಟಕ್ಕೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ” ಎಂಬ ಶೀರ್ಷಿಕೆಯಲ್ಲಿ ವಿವರವಾದ ಸುದ್ದಿಯನ್ನು ಇಂದು (ಮಾ.25) ಪ್ರಕಟಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಿಂದಿ, ಇಂಗ್ಲಿಷ್, ಕನ್ನಡ ಸೇರಿದಂತೆ ದೇಶದ ಬಹುತೇಕ ಎಲ್ಲಾ ಮಾಧ್ಯಮಗಳು ಜೆಎನ್‌ಯು ಚುನಾವಣೆ ಕುರಿತು ಸುದ್ದಿ ಪ್ರಕಟಿಸಿದ್ದು, ಎಡ ವಿದ್ಯಾರ್ಥಿ ಒಕ್ಕೂಟ ಪ್ರಮುಖ ನಾಲ್ಕು ಸ್ಥಾನಗಳನ್ನು ಗೆದ್ದು ಕೊಂಡಿದೆ ಎಂದಿದೆ.

ಕೆಲವೊಂದಿಷ್ಟು ಸುದ್ದಿಗಳ ಲಿಂಕ್ ಕೆಳಗಡೆ ಇದೆ

ಎಎನ್‌ಐ ಎಕ್ಸ್ ಪೋಸ್ಟ್ ಲಿಂಕ್ 

ಎನ್‌ಡಿಟಿವಿ ಸುದ್ದಿ ಲಿಂಕ್

ಹಿಂದುಸ್ಥಾನ್ ಟೈಮ್ಸ್ ಸುದ್ದಿ ಲಿಂಕ್

ಟೈಮ್ಸ್ ಆಫ್ ಇಂಡಿಯಾ ಸುದ್ದಿ ಲಿಂಕ್

ಮತ್ತೊಂದು ಮಹತ್ವದ ವಿಷಯವೆಂದರೆ ಪೋಸ್ಟ್ ಹಂಚಿಕೊಂಡಿರುವ ಪೋಸ್ಟರ್‌ನಲ್ಲಿರುವುದು ಕೂಡ ಹಳೆ ಫೋಟೋ ಆಗಿದೆ. ಆ ಫೋಟೋ ಕಳೆದ ವರ್ಷ ದೆಹಲಿ ವಿಶ್ವ ವಿದ್ಯಾಲಯಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯದ್ದು, ಈ ಕುರಿತ ಸುದ್ದಿ ಕೆಳಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಹಾಗಾಗಿ, ಸುವರ್ಣ ನ್ಯೂಸ್ ಮತ್ತು ಪೋಸ್ಟ್‌ ಕಾರ್ಡ್ ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯ ಕುರಿತು ಪ್ರಕಟಿಸಿರುವ ಸುದ್ದಿ ಸುಳ್ಳು. ಜೆಎನ್‌ಯು ಚುನಾವಣೆಯಲ್ಲಿ ಎಡ ವಿದ್ಯಾರ್ಥಿಗಳ ಒಕ್ಕೂಟ ಯುನೈಟೆಡ್ ಲೆಫ್ಟ್‌ಗೆ ಭರ್ಜರಿ ಜಯ ಸಾಧಿಸಿದೆ. ಆರ್‌ಎಸ್‌ಎಸ್‌, ಬಿಜೆಪಿಯ ವಿದ್ಯಾರ್ಥಿಯ ಸಂಘಟನೆ ಎಬಿವಿಪಿಗೆ ತೀವ್ರ ಮುಖಭಂಗವಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...